ಸಾಲಮನ್ನಾ ಕುರಿತು ರೈತರಿಗೆ ಪತ್ರ ಬರೆದ ಸಿಎಂ:ಪೋಸ್ಟ್ ತಲುಪಿಸುವಲ್ಲಿ ಅಂಚೆಯಣ್ಣ ಹೈರಾಣ
ಮೈಸೂರು, ಮೇ 17: ರೈತರ ಬೆಳೆ ಸಾಲ ಮನ್ನಾ ಯೋಜನೆ ಮತ್ತು ರೈತರ ಆರ್ಥಿಕ ಸಬಲೀಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನೀತಿ ನಿರ್ಧಾರಗಳ ಬಗ್ಗೆ ಪ್ರತಿಯೊಬ್ಬ ಸಾಲಗಾರ ರೈತನಿಗೆ ವೈಯಕ್ತಿಕವಾಗಿ ಪತ್ರ ಕಳುಹಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತರ ಸಹಕಾರ ಕೋರಿರುವುದು ಬೆಳಕಿಗೆ ಬಂದಿದೆ.
ಮುಖ್ಯಮಂತ್ರಿ ಭಾವಚಿತ್ರ ಇರುವ ಮತ್ತು ಗದ್ದೆಯಲ್ಲಿ ರೈತ ಮಹಿಳೆಯರೊಂದಿಗೆ ಭತ್ತದ ಸಸಿ ನಾಟಿ ಮಾಡುವ ಚಿತ್ರಗಳನ್ನು ಒಳಗೊಂಡಂತೆ ಆಕರ್ಷಕ ರೀತಿಯಲ್ಲಿರುವ ಲಕೋಟೆ ಮತ್ತು ಅದರ ಒಳಗೆ ಮುಖ್ಯಮಂತ್ರಿ ಸಹಿ ಇರುವ ಮುದ್ರಿತ ಪತ್ರ ತಾಲೂಕಿನ ಸಹಸ್ರ ಸಂಖ್ಯೆಯಲ್ಲಿರುವ ಸಾಲಗಾರ ರೈತರಿಗೆ ಅಂಚೆ ಮೂಲಕ ತಲುಪುತ್ತಿವೆ.
ಕಳೆದ ಫೆ.19ರಂದು ಬರೆಯಲಾಗಿರುವ ಈ ಪತ್ರಗಳು ಅಂಚೆ ಮೂಲಕ ಈಗಷ್ಟೇ ಬರುತ್ತಿದ್ದು, ರಾಶಿಗಟ್ಟಲೆ ಪತ್ರಗಳನ್ನು ವಿತರಿಸುವಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಹೆಣಗಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ವೈಯಕ್ತಿಕವಾಗಿ ರೈತರನ್ನು ಪತ್ರದ ಮೂಲಕ ಸಂಪರ್ಕಿಸುವ ಮುಖ್ಯಮಂತ್ರಿ ಪ್ರಯತ್ನಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿರುವ ಸಾಧ್ಯತೆ ಇದ್ದು, ಈ ಕಾರಣಕ್ಕೆ ಮೂರು ತಿಂಗಳ ನಂತರ ಪತ್ರಗಳು ರೈತರ ಕೈ ಸೇರುತ್ತಿವೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ವಿವರಿಸಿರುವಂತೆ ಮಹಾತ್ಮಗಾಂಧಿ ಅವರ ಆಶಯದಂತೆ ಮೈತ್ರಿ ಸರ್ಕಾರ ರೈತರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಒದಗಿಸಲು ಹಲವು ಯೋಜನೆಗಳನ್ನು ರೂಪಿಸುವ ಮೂಲಕ ರೈತರ ಬೆನ್ನಿಗೆ ನಿಂತು, ಬಲ ತುಂಬಿ ಅನ್ನದಾತನ ಮೊಗದಲ್ಲಿ ತೃಪ್ತಿಯ ನಗೆ, ನಡೆಯಲ್ಲಿ ಆತ್ಮವಿಶ್ವಾಸ ಉಕ್ಕಿಸುವ ಸಂಕಲ್ಪವನ್ನು ಸಾಕಾರಗೊಳಿಸುವತ್ತ ಮುನ್ನಡೆದಿದೆ.
ಮೊದಲ ಹೆಜ್ಜೆ ಎಂಬಂತೆ ರೈತರ ಬೆಳೆ ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಒಳಪಡುವ ಸುಮಾರು 40 ಲಕ್ಷ ರೈತರಲ್ಲಿ ನಿರಾಳಭಾವ ಮೂಡಿಸುವ ಆಶಯವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಯ ಫಲವಾಗಿ ಈಗಾಗಲೇ ಸುಮಾರು 6 ಲಕ್ಷ ರೈತರು ಸಾಲದಿಂದ ಮುಕ್ತರಾಗಿದ್ದಾರೆ, ಸದ್ಯದಲ್ಲಿ ಇತರೆ ಎಲ್ಲ ಅರ್ಹ ರೈತರ ಸಾಲ ಮನ್ನಾ ಆಗಲಿದ್ದು, ಇದನ್ನು ಅತ್ಯಂತ ವ್ಯವಸ್ಥಿತ, ಪಾರದರ್ಶಕವಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದ ತಂಡವು ಹಗಲಿರುಳು ಶ್ರಮಿಸುತ್ತಿದೆ. ರಾಜ್ಯ ಸರ್ಕಾರದ ಈ ಮಹಾತ್ವಾಕಾಂಕ್ಷಿ ಕಾರ್ಯಕ್ರಮವನ್ನು ಮೆಚ್ಚಿರುವ ಇತರೆ ರಾಜ್ಯಗಳು ಯೋಜನೆಯ ಮಾಹಿತಿ ಪಡೆಯುತ್ತಿರುವುದು ಯಶಸ್ವಿಗೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಪತ್ರದಲ್ಲಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಪತ್ರದಲ್ಲಿ ಸ್ವತಃ ಕುಮಾರಸ್ವಾಮಿಯವರೇ ಉಲ್ಲೇಖಿಸಿರುವಂತೆ ಸುಮಾರು 40 ಲಕ್ಷ ರೈತರಿಗೂ ಈ ಪತ್ರಗಳು ತಲುಪಿರುವ ಸಾಧ್ಯತೆ ಇದೆ. ಒಂದು ಅಂದಾಜಿನ ಪ್ರಕಾರ ಪ್ರತಿ ಲಕೋಟೆಗೆ 5 ರೂ. ಅಂಚೆ ವೆಚ್ಚ ಭರಿಸಲಾಗಿದೆ. ಒಟ್ಟಾರೆ ರೈತರಿಗೆ 10 ರೂ.ಖರ್ಚಾಗುತ್ತಿದ್ದು, ಸುಮಾರು 4 ಕೋಟಿಗೂ ಅಧಿಕ ಹಣ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗಿ ಪರಿಣಮಿಸಿದೆ ಎಂಬ ಆಕ್ಷೇಪಗಳೂ ಕೇಳಿಬಂದಿವೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications