ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಬ್ಬಿನ ಬಿಲ್ ಬಾಕಿ: ಪ್ರತಿಭಟನಾ ನಿರತ ರೈತರೊಂದಿಗೆ ಸಿಎಂ ಸಭೆ
ಬೆಳಗಾವಿ, ಡಿಸೆಂಬರ್ 22: ಸಚಿವ ರಮೇಶ್ ಜಾರಕಿಹೊಳಿ ಅವರ ಕಬ್ಬಿನ ಕಾರ್ಖಾನೆಯಿಂದ ಕಬ್ಬಿನ ಬಾಕಿ ಬಿಲ್ ಪಾವತಿಯಾಗಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಇಂದು ಮುಖ್ಯಮಂತ್ರಿಗಳು ಸಭೆ ನಡೆಸಿದರು.
ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ನೀಡಿದ ಕೊಡುಗೆಗಳು
ನವ ಕರ್ನಾಟಕ ನಿರ್ಮಾಣ ಯಾತ್ರಗೆಂದು ಬೆಳಗಾವಿ ಜಿಲ್ಲೆಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿಗಳು ಬೆಳಗಾವಿಯ ಅತಿಥಿ ಗೃಹದಲ್ಲಿ ರೈತ ಮುಖಂಡರ ಜೊತೆ ಚರ್ಚೆ ನಡೆಸಿದರು.
ಕಬ್ಬಿನ ಬಾಕಿ ಪಾವತಿಸಲು ಕಾಂಗ್ರೆಸ್ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸೂಚಿಸುವಂತೆ ಕೋರುವ ಜೊತೆಗೆ ವಿವಿಧ ಸಮಸ್ಯೆಗಳನ್ನು ಸಭೆಯಲ್ಲಿ ರೈತರು ಮುಖ್ಯಮಂತ್ರಿಗಳ ಮುಂದಿಟ್ಟರು.
ಬೆಳಗಾವಿ ಜಿಲ್ಲೆಯ ರೈತರಿಗೆ ಸರ್ಕಾರ ನೀಡಿರುವ ಕೊಡುಗೆಗಳ ಬಗ್ಗೆ ರೈತರ ಗಮನ ಸೆಳೆದ ಮುಖ್ಯಮಂತ್ರಿಗಳು ರೈತರ ಎಲ್ಲ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
Comments
belagavi district news farmer sugar cane ramesh jarkiholi ಬೆಳಗಾವಿ ಜಿಲ್ಲಾಸುದ್ದಿ ರೈತ ಕಬ್ಬು ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ siddaramaiah
English summary
CM Siddaramaiah had meeting in Belagavi with farmers who were demanding bill payment of Sugar cane supplied to congress minister Ramesh Jarakiholi's sugar factory.
Story first published: Friday, December 22, 2017, 13:02 [IST]