ದಲಿತರೇತರರ ದನಗಳ ಹಾಲು ಕಪ್ಪಗಿರುತ್ತಾ ಸಿದ್ರಾಮಣ್ಣಾ?
ಬೆಂಗಳೂರು, ಜೂ 18: ಸಮಾಜದಲ್ಲಿ ಜಾತಿ ಎನ್ನುವ ವಿಷ ಬೀಜ ಬಿತ್ತಿ ರಾಜಕೀಯ ಲಾಭ ಎದುರು ನೋಡುವವರಿಗೆ ದನದ ಹಾಲಾದರೇನೂ, XXX ರಮ್ ಆದರೆ ಏನು? ವಿದ್ಯೆಯಲ್ಲಿ, ಉದ್ಯೋಗದಲ್ಲಿ ಮೀಸಲಾತಿ ಮಾಡಿ ಜಾತಿ ವಿಂಗಡಿಸಿದ್ದಾಯಿತು, ಈಗ ದನದ ಹಾಲಿನ ಸರದಿ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ದಿನಗಳ ಹಿಂದೆ ಒಂದು ಫರ್ಮಾನು ಹೊರಡಿಸಿದ್ದಾರೆ. ಅದೇನಪ್ಪಾಂದ್ರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರು ಕೊಡುವ ಹಾಲಿಗೆ ಎರಡು ರೂಪಾಯಿ ಹೆಚ್ಚಿನ ಪ್ರೋತ್ಸಾಹ ಧನ ನೀಡುವುದಾಗಿ ಹೇಳಿ ತಾನು ಮತ್ತೊಮ್ಮೆ ಅಹಿಂದ ಪರ ಎಂದು ತೋರಿಸಿ ಕೊಟ್ಟಿದ್ದಾರೆ.
ರಾಜ್ಯದ ಆರು ಕೋಟಿ ಜನರ ದೊರೆಯಾಗಿರುವ ಮುಖ್ಯಮಂತ್ರಿಗಳ ಒಂದು ಪಂಗಡದ ಮೇಲಿನ ಅಗಾಧ ಪ್ರೀತಿ ಈಗ ಇತರ ರೈತಾಪಿ ವರ್ಗದ ಮುನಿಸಿಗೆ ಕಾರಣವಾಗಿದೆ. ಅಲ್ಲದೇ, ಕಾಂಗ್ರೆಸ್ ಪಕ್ಷದಲ್ಲೂ ಸಿಎಂ ನಿರ್ಧಾರ ಹಲವರಿಗೆ ಬೇಸರ ತಂದಿದೆ. (ಕಾಂಗ್ರೆಸ್ ವಿರುದ್ಧ ವೀರಶೈವ ಮಹಾಸಭಾ ಅಸಮಾಧಾನ)
ಸಮಾಜದಲ್ಲಿ ಎರಡು ವರ್ಗದವರಿಗೆ ಮಾತ್ರ ಹಾಲಿನ ಪ್ರೋತ್ಸಾಹ ಧನ ನೀಡಿದರೆ, ಸಮಾಜದಲ್ಲಿ ನಾವೇ ಜಾತಿ ಬೀಜ ಬಿತ್ತಿದಂತಾಗುತ್ತದೆ ಮತ್ತು ಇತರ ರೈತರ ಸಿಟ್ಟನ್ನು ಎದುರಿಸ ಬೇಕಾಗುತ್ತದೆ ಎನ್ನುವುದು ಕಾಂಗ್ರೆಸ್ ನಾಯಕರ ಅಭಿಪ್ರಾಯ. ವಿರೋಧ ಪಕ್ಷವಾದ ಬಿಜೆಪಿ ಸಿಎಂ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಎರಡು ರೂಪಾಯಿ ವಿಶೇಷ ಪ್ರೋತ್ಸಾಹ ಧನವನ್ನು ಇತರ ವರ್ಗದವರಿಗೂ ವಿಸ್ತರಿಸಿ ಎಂದು ಮನವಿ ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಲು ಉತ್ಪಾದಕರಿಗೆ ಎರಡು ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಇದನ್ನು ಇತರ ಹಾಲು ಉತ್ಪಾದಕರಿಗೂ ವಿಸ್ತರಿಸಿ ಎಂದು ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಈ ವಿವಾದಕಾರೀ ನಿರ್ಧಾರದಿಂದ ಸಾರ್ವಜನಿಕರಲ್ಲಿ ಮೂಡುವ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸರಕಾರ ಉತ್ತರಿಸುತ್ತಾ?

ಇತರರು ಕೊಡುವ ಹಾಲು ಕಪ್ಪಗಿರುತ್ತಾ?
ಪರಿಶಿಷ್ಟ ಜಾತಿ, ಪಂಗಡ ಮತ್ತು ಅಹಿಂದ ವರ್ಗದ ಹಾಲು ಉತ್ಪಾದಕರು ಕೊಡುವ ಹಾಲು ಬೆಳ್ಳಗಿದ್ದು ಇತರರು ಕೊಡುವ ಹಾಲು ಕಪ್ಪಗಿರುತ್ತಾ?

ಪೌಷ್ಠಿಕಾಂಶದಲ್ಲಿ ತೊಂದರೆಯಾಗುತ್ತಾ?
ಎರಡು ವರ್ಗದವರು ಹೊರತಾಗಿ ಇತರರು ನೀಡುವ ಹಾಲಿನಲ್ಲಿ ಪೌಷ್ಠಿಕಾಂಶದ ಕೊರತೆ ಏನಾದರೂ ಇರುತ್ತಾ? ಇದರಿಂದ ಜನರು ತೊಂದರೆ ಅನುಭವಿಸುವ ಸಾಧ್ಯತೆ ಇದೆಯಾ?

ಮೇವು
ದನ, ಕರು, ಎತ್ತುಗಳಿಗೆ ಜಾತಿ ಎನ್ನುವುದು ಇದೆಯಾ? ಪರಿಶಿಷ್ಟ ಜಾತಿ ಮತ್ತು ಪಂಗಡ ಅನ್ನುವುದು ಭೇದಬಾವ ಇದೆಯಾ? ಅವುಗಳು ತಿನ್ನುವ ಮೇವುಗಳಲ್ಲಿ ಏನಾದರೂ ವ್ಯತ್ಯಾಸ ಇದೆಯಾ?

ಇತರರು ನಿಮಗೆ ಮತ ನೀಡಲಿಲ್ವಾ?
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಹೊರತಾಗಿ ಇತರರು ಕಾಂಗ್ರೆಸ್ಸಿಗೆ ಮತ ನೀಡಲಿಲ್ವಾ? ಇತರ ಹಾಲು ಉತ್ಪಾದಕರ ಮತ ನಿಮಗೆ ಸಿಗದೇ ಇದ್ದ ಪಕ್ಷದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟವಾಗುತ್ತಿರಲಿಲ್ಲವೇ?

ಇದೇನು ಹೊಸತಲ್ಲ
ಕೆಲವು ತಿಂಗಳ ಹಿಂದೆ ಮಕ್ಕಳ ಪ್ರವಾಸಕ್ಕೂ ಓಬಿಸಿ, ಮುಸ್ಲಿಮರು ಎನ್ನುವ ಟ್ಯಾಗ್ ಲೈನ್ ನೀಡಿದ್ರಿ. ರಾಜ್ಯಾದ್ಯಂತ ಇದಕ್ಕೆ ತೀವ್ರ ವಿರೋಧ ಹೆಚ್ಚಾದ ಹಿನ್ನಲೆಯಲ್ಲಿ ಎಲ್ಲರಿಗೂ ಈ ಸೌಲಭ್ಯವನ್ನು ವಿಸ್ತರಿಸಿದಿರಿ. ಸಮಾಜದಲ್ಲಿ ಜಾತಿ ವಿಷಬೀಜ ಬಿತ್ತುತ್ತಿರುವುವರು ಯಾರು?
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications