ಎಪಿಎಂಸಿ ಕೊಟ್ಟ ಸುದ್ದಿಗೆ ನಿಟ್ಟುಸಿರು ಬಿಟ್ಟ ಗ್ರಾಹಕ
ಬೆಂಗಳೂರು, ನವೆಂಬರ್, 09: ಹೊರಗಡೆ ಥಂಡಿಯ ವಾತಾವರಣವಿದ್ದರೆ ಎಲ್ಲರ ಮನೆಯಲ್ಲೂ ದೀಪಾವಳಿ ಹಬ್ಬದ ಬಿಸಿ ಜೋರಾಗುತ್ತಿದೆ. ಬೇಳೆ ಕಾಳು, ಹೂವು, ತರಕಾರಿ ಸೇರಿದಂತೆ ಹಬ್ಬದ ಸಂಭ್ರಮಕ್ಕೆ ಬೇಕಾದ ವಸ್ತುಗಳ ಖರೀದಿ ಭರಾಟೆ ಆರಂಭವಾಗಿದೆ.
ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ನಿಟ್ಟುಸಿರು ಬಿಡುವಂತಹ ಸುದ್ದಿ ಇಲ್ಲಿದೆ. ದೀಪಾವಳಿ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರು ಕೆ.ಜಿ ತೊಗರಿಯನ್ನು 135 ರಿಂದ 150 ರು. ಗೆ ಮಾರಾಟ ಮಾಡಲು ಮುಂದಾಗಿದ್ದಾರೆ.[ಆಯುಧ ಪೂಜೆ ಕುಂಬ್ಳಕಾಯಿ ತಲೆ ಮೇಲೆ ಒಡೆದಂಗಾಯ್ತು! ]

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಹಿರಿಯ ಉಪಾಧ್ಯಕ್ಷ ಎಂ.ಸಿ. ದಿನೇಶ್ ಈ ಮಾಹಿತಿ ನೀಡಿದ್ದು ಬೆಲೆ ಏರಿಕೆಯಿಂದ ಬಸವಳಿದಿದ್ದ ಗ್ರಾಹಕ ಕೊಂಚ ಚೇತರಿಸಿಕೊಳ್ಳುವಂತಾಗಿದೆ.
ಎಪಿಎಂಸಿ ಮುಷ್ಕರ ಹಿಂದಕ್ಕೆ
ಬೇಳೆಕಾಳು ದಾಸ್ತಾನು ಮತ್ತು ಮಾರಾಟಕ್ಕೆ ಪರವಾನಗಿ ನೀಡಲು ಆಗ್ರಹಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ವರ್ತಕರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ. ರಾಜ್ಯದ 144 ಎಪಿಎಂಸಿ ಮತ್ತು ಸುಮಾರು 800 ಗಿರಣಿಗಳು ನವೆಂಬರ್ 9ರಿಂದ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.[ತೊಗರಿ ಬೇಳೆಗೆ ಬಂಗಾರದ ಬೆಲೆ ಬರಲು ಕಾರಣವೇನು?]
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭರವಸೆ ಬಳಿಕ ವ್ಯಾಪಾರಿಗಳು ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಸಿಎಂಗೆ ಮನವಿ ಸಲ್ಲಿಸಿದ ನಿಯೋಗದಲ್ಲಿ ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಆರ್.ಶಿವಕುಮಾರ್, ಎಫ್ಕೆಸಿಸಿಐನ ಎಪಿಎಂಸಿ ಸಮಿತಿ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ, ಎಫ್ಕೆಸಿಸಿಐನ ಎಪಿಎಂಸಿ ಸಮಿತಿ ಸಹ ಅಧ್ಯಕ್ಷ ಭರತ್ ಕುಮಾರ್ ಆರ್.ಷಾ ಇದ್ದರು.
-
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್











Click it and Unblock the Notifications