ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಇಂದು ಕುಮಾರಸ್ವಾಮಿ ಸಭೆ
Recommended Video

ಬೆಂಗಳೂರು, ನವೆಂಬರ್ 20: ಕಬ್ಬಿನ ಬಾಕಿ ಹಣ ಪಾವತಿ , ರೈತರ ಸಾಲ ಮನ್ನಾ, ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ರೈತರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ರೈತರು ಪಾಲ್ಗೊಳ್ಳಲಿದ್ದಾರೆ. ಸೋಮವಾರವೇ ಬೆಳಗಾವಿ ಪ್ರವಾಸ ಕೈಗೊಳ್ಳಬೇಕಿತ್ತು ಆದರೆ ಸಚಿವ ಸಂಪುಟ ಸಭೆ ಇದ್ದ ಕಾರಣ ಪ್ರವಾಸವನ್ನು ರದ್ದುಗೊಳಿಸಿದ್ದರು.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸೋಮವಾರ ಸಾವಿರಾರು ರೈತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಜೆಸ್ಟಿಕ್ನಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ಮೆರವಣಿಗೆ ಹೊರಟು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಹಾಗೂ ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು. ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದರು. ಅನ್ನದಾತರು ಉರಿಬಿಸಿಲಿನಲ್ಲೇ ರಸ್ತೆಯಲ್ಲೇ ಮಲಗಿ ಹೋರಾಟ ನಡೆಸಿದರು, ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಬೇಡಿಕೆ ಈಡೇರಿಸಲು 15 ದಿನಗಳ ಗಡುವು ನೀಡಿ ತಮ್ಮ ಊರುಗಳ ಕಡೆ ನಡೆದರು.












Click it and Unblock the Notifications