ನ್ಯಾನೋ ತಂತ್ರಜ್ಞಾನ ಆಹಾರ ಸಮಸ್ಯೆಗೆ ಪರಿಹಾರ
ಬೆಂಗಳೂರು. ಮಾ.15: ಭಾರತದಲ್ಲಿ ಆಹಾರ ಭದ್ರತೆಗೆ ಪ್ರಾಮುಖ್ಯತೆ ನೀಡಬೇಕಿದ್ದು ನ್ಯಾನೋ ತಂತ್ರಜ್ಞಾನ ಅಳವಡಿಕೆ ಮಾಡಿಕೊಳ್ಳಬೇಕು ಎಂದು ಭಾರತ ರತ್ನ ಪ್ರೊ. ಸಿ.ಎನ್. ಆರ್ ರಾವ್ ಅವರು ಸಲಹೆ ನೀಡಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 49ನೇ ಘಟಿಕೋತ್ಸವ ಮಾಥನಾಡಿದ ಅವರು, ಆಹಾರ, ನೀರು, ಜೀವಸಂಕುಲಕ್ಕೆ ಅತ್ಯವಶ್ಯಕವಾಗಿದ್ದು, ಕೃಷಿ ಸಂಶೋಧನಾ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವ ಮೂಲಕ ಇವುಗಳ ಭದ್ರತೆಗೆ ಹೆಚ್ಚು ಒತ್ತು ನೀಡಬೇಕಿದೆ ಎಂದರು.[ನಾನು ಗುರಿ ಮುಟ್ಟಿದ್ದೇನೆ, ನೀವು? ಯುವಕರಿಗೆ ಕಲಾಂ ಪ್ರಶ್ನೆ]

ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇತ್ತೀಚಿನ ದಿನಗಳಲ್ಲಿ ಪ್ರಮುಖ ಸ್ಥಾನ ಪಡೆಯುತ್ತುದೆ. ಕೃಷಿ ಕ್ಷೇತ್ರಕ್ಕೆ ಸಸ್ಯ ಸಂಕುಲ ಒಂದು ಅದ್ಭುತ ಕೊಡುಗೆ . ಇದನ್ನೇ ಬಳಸಿಕೊಂಡು ಆಹಾರ ಸಮಸ್ಯೆ ನೀಗಿಸಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಕೃಷಿ ಸಂಶೋಧನಾ ವಿದ್ಯಾರ್ಥಿಗಳು ತನ್ಮಯತೆ, ಏಕಾಗ್ರತೆಯಿಂದ ಅಧ್ಯಯನದಲ್ಲಿ ಪರಿರ್ಶರಮ ಪಟ್ಟರೆ ಯಶಸ್ಸು ಸಾಧ್ಯ ಎಂದು ಹೇಳಿದರು.[ವಿಜ್ಞಾನಿಗಳೆಂದರೆ ಹಾಗೇ, ಮಕ್ಕಳಷ್ಟೇ ಮುಗ್ಧರು!]
ಕೃಷಿ ವಿಜ್ಞಾನ ಸೇರಿದಂತೆ ಯಾವುದೇ ಕ್ಷೇತ್ರದಲ್ಲಾಗಲಿ ಸಾಧನೆಯ ಫಲಿತಾಂಶ ತತ್ಕ್ಷಣ ದೊರಕದು.ತಾಳ್ಮೆ, ಸಂಯಮದಿಂದ ಕಾದಾಗ ಮಾತ್ರ ಪ್ರತಿಫಲ ದೊರಕುವುದು. ದೇಶ ಯುವಶಕ್ತಿಯ ಮೇಲೆ ಅಪಾರ ನಿರೀಕ್ಷೆಯಿಟ್ಟುಕೊಂಡಿದ್ದು, ಯುವ ಜನಾಂಗ ದೇಶಕ್ಕೆ ನಿರಾಸೆ ಮಾಡದಂತೆ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು.[ಡಾ. ಸಿಎನ್ಆರ್ ರಾವ್ - ಕರ್ನಾಟಕ ವರ್ಷದ ವ್ಯಕ್ತಿ 2014]
ಘಟಿಕೋತ್ಸವದ ವೇಳೆ ರಾಜ್ಯಪಾಲ ವಜುಭಾಯಿವಾಲ ಅವರು 574 ಸ್ನಾತಕ, 204 ಸ್ನಾತಕೋತ್ತರ ಮತ್ತು 67 ಡಾಕ್ಟರಲ್ ಪದವಿ ಮತ್ತು 119 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು. ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಹಾಜರಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications