ತೆಂಗು ಬೆಳೆಗಾರರೇ ಗಮನಿಸಿ, ಬೆಳೆ ವಿಮಾ ಯೋಜನೆ
ತುಮಕೂರು, ಡಿಸೆಂಬರ್ 30: ತುಮಕೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ರೈತರು ತೆಂಗು ಬೆಳೆಯುತ್ತಾರೆ. ಆದರೆ ತೆಂಗಿನ ಗಿಡಗಳು, ಮರಗಳು ವಿವಿಧ ರೋಗಗಳಿಗೆ ತುತ್ತಾಗಿ ರೈತರಿಗೆ ನಷ್ಟವಾಗುತ್ತದೆ. ಆದ್ದರಿದ ತೆಂಗಿನ ಬೆಳೆಗಾರರಿಗೆ ನೆರವಾಗಲು ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ತೆಂಗು ಬೆಳೆಯುವ ರೈತರು ಈ ವಿಮಾ ಯೋಜನೆಯ ಮಾಹಿತಿ, ಬೇಕಾಗುವ ದಾಖಲೆಗಳ ಕುರಿತು ಮಾಹಿತಿ ತಿಳಿದಿರುವುದು ಅಗತ್ಯವಾಗಿದೆ.
ತೆಂಗು ಬೆಳೆ ವಿಮಾ ಯೋಜನೆ ತೆಂಗಿನ ಗಿಡ/ ಮರಗಳಿಗೆ ಇರುವ ವಿಮಾ ಯೋಜನೆಯಾಗಿದ್ದು, ತೆಂಗು ಅಭಿವೃದ್ಧಿ, ಮಂಡಳಿಯವರು Agriculture insurance company ಅವರ ಸಹಯೋಗದೊಂದಿಗೆ ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಆರೋಗ್ಯವಂತ ತೆಂಗಿನ ಗಿಡಗಳು/ ಮರಗಳು (4 ರಿಂದ 60 ವರ್ಷ) ವಿಮೆಯ ವ್ಯಾಪ್ತಿಗೆ ಒಳಪಡುತ್ತವೆ. ರೈತರು ಕನಿಷ್ಠ 5 ತೆಂಗಿನ ಗಿಡಗಳು/ ಮರಗಳನ್ನು ಕಡ್ಡಾಯವಾಗಿ ವಿಮೆಗೆ ಒಳಪಡಿಸಬೇಕು 5ಕ್ಕಿಂತ ಕಡಿಮೆ ಸಂಖ್ಯೆ, ತೆಂಗಿನ ಮರಗಳು/ ಗಿಡಗಳು ಈ ವಿಮೆಯ ವ್ಯಾಪ್ತಿಗೆ ಒಳಪಡುವುದಿಲ್ಲ.
ಹವಾಮಾನ ವೈಪರಿತ್ಯದಿಂದ, ಕೀಟ ಮತ್ತು ರೋಗದಿಂದ, ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದಲ್ಲಿ, ಬರಗಾಲ, ಆಲಿಕಲ್ಲು, ಸಿಡಿಲು ಬಡಿತದಿಂದ ತೆಂಗಿನ ಗಿಡಗಳು/ ಮರಗಳು ಸಂಪೂರ್ಣ ಹಾನಿಯಾಗಿ ಸತ್ತು ಹೋದಲ್ಲಿ ಹಾನಿ ಸಂಭವಿಸಿದ 15 ದಿನಗಳೊಳಗಾಗಿ ವಿಮಾ ಕಂಪನಿಗೆ ತಿಳಿಸುವುದು ಕಡ್ಡಾಯವಾಗಿರುತ್ತದೆ.
ತಂಗು ಬೆಳೆ ವಿಮೆ ಕಂತಿನ ವಿವರಗಳು: ಈ ವಿಮಾ ಯೋಜನೆಯನ್ನು ತೆಂಗಿನ ಗಿಡ/ ಮರದ ವಯಸ್ಸಿನ ಆಧಾರದ ಮೇಲೆ ಮಾಡಲಾಗಿದೆ. 4 ರಿಂದ 15 ವರ್ಷದ ಗಿಡ/ ಮರ ವಿಮಾ ಮೊತ್ತ ಪ್ರತಿ ಮರ/ ಗಿಡಕ್ಕೆ 900 ರೂ., ಶೇ 25 ರಂತೆ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಪ್ರತಿ ಮರಕ್ಕೆ/ ಗಿಡ/ ವರ್ಷಕ್ಕೆ ಮರಕ್ಕೆ/ ಗಿಡಕ್ಕೆ 2.25 ರೂ., ಸರ್ಕಾರದ ವಂತಿಕೆ ಮರಕ್ಕೆ/ ಗಿಡಕ್ಕೆ ಶೇ 50 ಸಿಬಿಡಿ + ಶೇ 25 ರಾಜ್ಯ ಸರ್ಕಾರ 6.75 ರೂ.ಗಳು.
ಇದೇ ಮಾದರಿಯಲ್ಲಿ 16 ರಿಂದ 60 ವರ್ಷದ ಮರಕ್ಕೆ/ ಗಿಡಕ್ಕೆ 1750 ರೂ.ಗಳು. ಶೇ 25 ರಂತೆ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಪ್ರತಿ ಮರಕ್ಕೆ/ ಗಿಡ/ ವರ್ಷಕ್ಕೆ ಮರಕ್ಕೆ/ ಗಿಡಕ್ಕೆ 3.50 ರೂ., ಸರ್ಕಾರದ ವಂತಿಕೆ ಮರಕ್ಕೆ/ ಗಿಡಕ್ಕೆ ಶೇ 50 ಸಿಬಿಡಿ + ಶೇ 25 ರಾಜ್ಯ ಸರ್ಕಾರ 10.50 ರೂ.ಗಳು.
ಮೇಲೆ ತಿಳಿಸಿರುವಂತೆ ಆಸಕ್ತ ಫಲಾನುಭವಿಗಳು ರೈತರ ವಂತಿಕೆಯನ್ನು ಮತ್ತು ನಿಗದಿತ ನಮೂನೆಯಲ್ಲಿ, ಅರ್ಜಿಯನ್ನು ಭರ್ತಿಮಾಡಿ ಸಂಬಂಧಿಸಿದ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸಿ ಸದರಿ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬಹುದು.
ಸಲ್ಲಿಸಬೇಕಾದ ದಾಖಲೆಗಳು
* ತೆಂಗು ಅಭಿವೃದ್ಧಿ ಮಂಡಳಿಯ ನಿಗದಿತ ಅರ್ಜಿ ನಮೂನೆ
* ಆಧಾರ್ಕಾರ್ಡ್ ಪ್ರತಿ
* ಬ್ಯಾಂಕ್ ಪಾಸ್ ಪುಸ್ತಕ ಪ್ರತಿ
* ರೈತರ ವಂತಿಕೆ. ರೈತರು ತೆಂಗು ಬೆಳೆ ವಿಮೆಯ ವಾರ್ಷಿಕ ವಂತಿಕೆಯನ್ನು ಸಂಬಂಧಿಸಿದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸಿ ಸ್ವೀಕೃತಿಯನ್ನು ಪಡೆಯಬೇಕು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications