ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ; ಪೂರ್ಣಗೊಳಿಸಲು ರೈತರಿಗೆ ಸೂಚನೆ
ಹಾಸನ, ಆಗಸ್ಟ್ 31: 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯಡಿ ಹಾಸನ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಪೂರ್ವ ಮುಂಗಾರು ಹಂಗಾಮಿನಲ್ಲಿ ರೈತರ 7.92 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಂಡಿರುತ್ತದೆ. ರೈತರು ಸ್ವತಃ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ರೈತರ ಬೆಳೆ ಸಮೀಕ್ಷೆ ಅಪ್ ಮೂಲಕ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ 2024-25 ಬಿಡುಗಡೆಗೊಳಿಸಲಾಗಿದೆ.
ಜಿಲ್ಲೆಯ ರೈತರು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ 14.96 ಲಕ್ಷ ತಾಕುಗಳಲ್ಲಿ (plots) ಬೆಳೆ ಸಮೀಕ್ಷೆ ಕೈಗೊಳ್ಳಲು ಗುರಿ ನಿಗದಿಯಾಗಿರುತ್ತದೆ. ಪ್ರಮುಖವಾಗಿ ಆಲೂರು ತಾಲ್ಲೂಕಿನಲ್ಲಿ 74456, ಅರಕಲಗೂಡು ತಾಲ್ಲೂಕಿನಲ್ಲಿ 1,61,148, ಅರಸೀಕೆರೆಯಲ್ಲಿ 2,39,721, ಬೇಲೂರು ತಾಲ್ಲೂಕಿನಲ್ಲಿ 1,40,191, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 3,51,151, ಹಾಸನ ತಾಲ್ಲೂಕಿನಲ್ಲಿ 2,84,715, ಹೊಳೆನರಸೀಪುರ ತಾಲ್ಲೂಕಿನಲ್ಲಿ 1,70,130 ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ 75,141 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕಾಗಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ಪ್ರಸ್ತುತ 1.21 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು, ಬೆಳೆ ಸಮೀಕ್ಷೆ ಪ್ರಗತಿಯಲ್ಲಿರುತ್ತದೆ. ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಮಾಹಿತಿಯನ್ನು ಬೆಳೆ ನಷ್ಟ ಪರಿಹಾರ, ಕನಿಷ್ಠ ಬೆಂಬಲ ಬೆಲೆ ಯೋಜನೆ, ಪಹಣಿಯಲ್ಲಿ ಬೆಳೆ ನಮೂದು ಮಾಡಲು, ಬೆಳೆ ವಿಮಾ ಯೋಜನೆ, ಬೆಳೆ ಸಾಲ ಇತ್ಯಾದಿ ಸೌಲಭ್ಯ ಒದಗಿಸಲು ಬಳಸಲಾಗುವುದು. ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಎಲ್ಲಾ ಬೆಳೆಗಳ ವಿವರವನ್ನು ಮುಂಗಾರು ಬೆಳೆ ಸಮೀಕ್ಷ 2024 ಮೊಬೈಲ್ ಆಪ್ ಮೂಲಕ ನಿಗದಿತ ಸಮಯದೊಳಗೆ ಅಪ್ಲೋಡ್ ಮಾಡುವುದು. ಒಂದು ವೇಳೆ ಸ್ವತಃ ರೈತರೆ ತಮ್ಮ ಬೆಳೆ ದಾಖಲು ಮಾಡಲು ಗೊಂದಲವಿದ್ದಲ್ಲಿ ಸದರಿ ಗ್ರಾಮಕ್ಕೆ ನಿಯೋಜಿಸಿರುವ ಖಾಸಗಿ ನಿವಾಸಿ (ಪಿ.ಆರ್.) ಗಳನ್ನು ಸಂಪರ್ಕಿಸಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಪಿ.ಆರ್. ಆಪ್ ಮೂಲಕ ದಾಖಲಿಸಬಹುದಾಗಿದೆ.
ರೈತರ ಬೆಳೆ ಸಮೀಕ್ಷೆ ವಿಧಾನ: ರೈತರು ಗೂಗಲ್ ಪ್ಲೇ ಸ್ಟೋರ್ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್-2024-25 ಅಪ್ ಡೌನ್ಲೋಡ್ ಮಾಡಿಕೊಳ್ಳಬೇಕು. e-kyc ಮೂಲಕ ಆಧಾರ್ ದೃಢೀಕರಿಸಲು ಆಧಾರ್ ಸಂಖ್ಯೆ ನಮೂದಿಸಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆಗೆ ಬರುವ OTP ದಾಖಲಿಸಿ ಸಲ್ಲಿಸುವುದು, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದು, ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. OTP ದಾಖಲಿಸಿ ಸಲ್ಲಿಸುವುದು.
ಮೊಬೈಲ್ ಅಪ್ಲಿಕೇಶನ್ ಫ್ರೂಟ್ಸ್ ತಂತ್ರಾಂಶಕ್ಕೆ ಸಂಪರ್ಕಗೊಂಡಿದ್ದ ರೈತರ ಗುರುತಿನ ಸಂಖ್ಯೆ FID ಯಲ್ಲಿ ಸೇರ್ಪಡೆಯಾದ ಎಲ್ಲಾ ಪಹಣಿ ವಿವರ, ಪಾಲಿಗಾನ್ ಹಾಗೂ ಜಿ.ಐ.ಎಸ್. ಮ್ಯಾಪ್ ಸ್ವಯಂಚಾಲಿತವಾಗಿ ಡೌನ್ಲೋಡ್ ಆಗಿ, ಎಲ್ಲಾ ಸರ್ವೆ ನಂಬರ್ಗಳ ವಿವರ ಕಾಣಿಸುತ್ತದೆ.
ಬೆಳೆ ಸಮೀಕ್ಷೆ ಪ್ರಾರಂಭಿಸಲು ಸರ್ವೆ ನಂಬರ್ ಆಯ್ಕೆ ಮಾಡಿ. ಸದರಿ ಸರ್ವೆ ನಂಬರ್ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ, ತಾವು ಬೆಳೆದ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ಎರಡು ಫೋಟೋ ತೆಗೆದು ಮಾಹಿತಿಯನ್ನು ಸೇರಿಸುವುದು.
ಹೆಚ್ಚಿನ ಮಾಹಿತಿಗಾಗಿ ಬೆಳೆ ಸಮೀಕ್ಷೆಗೆ ನಿಯೋಜಿಸಿರುವ ಗ್ರಾಮದ ಸ್ಥಳೀಯ ಯುವಕರು, ಕೃಷಿ ಇಲಾಖೆಯ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳು, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications