ಗುಜರಾತ್ ಕಾಂಗ್ರೆಸ್ ಪ್ರಣಾಳಿಕೆ, ಪೆಟ್ರೋಲ್, ಡೀಸೆಲ್ 10 ರು. ಅಗ್ಗ
ಅಹಮದಾಬಾದ್, ಡಿಸೆಂಬರ್ 04 : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ಮುಖಂಡರ ವೈಯಕ್ತಿಕ ವಾಗ್ದಾಳಿ, ವಿಡಿಯೋ ವಾರ್, ಮೀಸಲಾತಿ ಸಮರದ ನಡುವೆ ಈಗ ಪ್ರಣಾಳಿಕೆ ಬಗ್ಗೆ ಭಾರಿ ಕುತೂಹಲ ಹುಟ್ಟಿಕೊಂಡಿದೆ.
ಕಾಂಗ್ರೆಸ್ ಅಧ್ಯಕ್ಷೆ ಭರತ್ ಸಿಂಗ್ ಸೋಲಂಕಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಮತ್ತು ರಣೀಪ್ ಸುರ್ಜೆವಾಲ್ ಉಪಸ್ಥಿತಿಯಲ್ಲಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.
ಗುಜರಾತ್ ಅನ್ನು ಎಲ್ಲರೂ ನೈಜ ಅರ್ಥದಲ್ಲಿ ಅಭಿವೃದ್ಧಿಪಡಿಸುವುದಾಗಿ ಪಕ್ಷದ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಸ್ಯಾಮ್ ಪಿಟ್ರೋಡಾ ಮತ್ತು ಮಧುಸೂದನ್ ಮಿಸ್ತ್ರಿ ಈ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದಾರೆ ಎಂಬುದು ಗಮನಾರ್ಹ ಸಂಗತಿ.

ಪ್ರಣಾಳಿಕೆಯ ಮುಖ್ಯಾಂಶಗಳು:
* ಅಧಿಕಾರಕ್ಕೆ ಬಂದ ನಂತರ ರೈತರ ಮೇಲಿನ ಎಲ್ಲಾ ಸಾಲಮನ್ನಾ ಮಾಡಲಾಗುವುದು. 16 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ನೀಡಲಾಗುವುದು.
* ಪಾಟೀದರ್ ಸಮುದಾಯದವರಿಗೆ ಶಿಕ್ಷಣ, ಉದ್ಯೋಗದಲ್ಲಿ ವಿಶೇಷ ಅವಕಾಶ.
* ಮಾರಾಟ ತೆರಿಗೆ ಇಳಿಸುವುದರಿಂದ ಪೆಟ್ರೋಲ್, ಡೀಸೆಲ್ ದರ 10 ರು.ನಷ್ಟು ಅಗ್ಗವಾಗಲಿದೆ.
* ಕಾಲೇಜ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗು ಸ್ಮಾರ್ಟ್ ಫೋನ್ ವಿತರಣೆ.
* 32 ಲಕ್ಷ ಯುವಕರಿಗೆ ಉದ್ಯೋಗ ನೀಡಲು 32,000 ಕೋಟಿ ರು ಪ್ಯಾಕೇಜ್. ನಿರುದ್ಯೋಗಿಗಳಿಗೆ 4,000ರು ಭತ್ಯೆ.
* ಮಹಿಳೆಯರ ವಿರುದ್ಧದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ.
* ಎಸ್ ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯಲ್ಲಿನ ಗೊಂದಲಕ್ಕೆ ಪರಿಹಾರ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications