Arecanut Health: ಅಡಿಕೆ ತಿಂದರೆ ಕ್ಯಾನ್ಸರ್ ಬರುತ್ತಾ?
ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇದೆ. ಒಂದು ಕಡೆ ಅತಿವೃಷ್ಠಿಯಿಂದ ಅಡಿಕೆಗೆ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಅಡಿಕೆ ಬೆಲೆ ಕುಸಿತ ಬೆಳೆಗಾರರನ್ನು ನಷ್ಟದ ಸುಳಿಗೆ ದೂಡಿದೆ. ಈ ಬೆನ್ನಲ್ಲೇ ಭೂತಾನ್ನಿಂದ ಅಡಿಕೆ ಕಳ್ಳ ಸಾಗಾಣೆ, ಅಡಿಕೆ ಆಮದಿಗೆ ಕೇಂದ್ರ ಸರ್ಕಾರ ಅನುಮತಿ ಕೂಡ ಅಡಿಕೆ ಬೆಳೆಗಾರರಿಗೆ ಮತ್ತಷ್ಟು ಆತಂಕ ತಂದಿದೆ.
ಈ ಬೆನ್ನಲ್ಲೇ ಅಡಿಕೆ ತಿಂದರೆ ಕ್ಯಾನ್ಸರ್ ಬರುತ್ತೆ ಎನ್ನುವ ವದಂತಿಗಳು ಕೂಡ ಹರಡುತ್ತಿದ್ದು ಅಡಿಕೆ ಬೆಳೆಗಾರರಿಗೆ ಹೊಸ ಆತಂಕ ಶುರುವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಅಡಿಕೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂದಿತ್ತು. ಖಾಸಗಿ ಲ್ಯಾಬ್ಗಳಲ್ಲಿ ಮಾಡಿದ ಪರೀಕ್ಷೆಯಲ್ಲಿ ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ವರದಿಗಳು ಬಂದಿದ್ದವು.

ಆದರೆ ಈ ಲ್ಯಾಬ್ಗಳು ಸರ್ಕಾರಿ ಸ್ವಾಮ್ಯಕ್ಕೆ ಸೇರಿದ್ದಲ್ಲದ ಕಾರಣ, ವರದಿಗಳ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆಗಳು ಉಂಟಾಗಿದ್ದವು. ಇತ್ತೀಚೆಗೆ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾಗರಕ್ಕೆ ಆಗಮಿಸಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ವಿಚಾರವನ್ನು ಪ್ರಸ್ತಾಪಿಸಿದರು.
ಅಡಿಕೆ ಸೇವನೆಯಿಂದ ಕ್ಯಾನ್ಸರ್ ಬರುತ್ತಾ?
ಸಮಾವೇಶದಲ್ಲಿ ಮಾತನಾಡಿದ ಅವರು, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಆಲಿಸಿದ್ದು ಸರಿ ಪಡಿಸಲು ಕೆಲಸ ಮಾಡುವುದಾಗಿ ತಿಳಿಸಿದರು. ಅಡಿಕೆಗೆ ಬರುತ್ತಿರುವ ರೋಗಗಳನ್ನು ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳಲು ತಂಡವನ್ನು ರಚಿಸುವುದಾಗಿ ಕೂಡ ಭರವಸೆ ನೀಡಿದರು.
ಅಡಿಕೆ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದು ವದಂತಿಗಳನ್ನು ಹರಡಲಾಗಿದೆ. ಆದರೆ ಅಡಿಕೆಯನ್ನು ಪೂರ್ವಜನರ ಕಾಲದಿಂದಲೂ ಬಳಕೆ ಮಾಡುತ್ತಿದ್ದೇವೆ. ಪೂಜೆಗೂ ಅಡಿಕೆಯನ್ನು ಬಳಕೆ ಮಾಡುತ್ತೇವೆ. ಅಡಿಕೆ ತಿಂದರೆ ಕ್ಯಾನ್ಸರ್ ಬರಲ್ಲ, ಈ ಬಗ್ಗೆ ಸಂಶೋಧನೆ ನಡೆಸಿ ಸರ್ಕಾರವೇ ಮಾಹಿತಿ ನೀಡಲಿದೆ ಎಂದು ಹೇಳಿದರು.
ಕ್ಯಾನ್ಸರ್ ಬರಲ್ಲ ಎಂದ ನಿಟ್ಟೆ ವಿಶ್ವವಿದ್ಯಾನಿಲಯ
ಮೂರು ವರ್ಷಗಳ ಹಿಂದೆ ಅಡಿಕೆಯಿಂದ ಕ್ಯಾನ್ಸರ್ ಬರುತ್ತದೆಯಾ ಎನ್ನುವ ವಿಚಾರದ ಬಗ್ಗೆ ಸಂಶೋಧನೆ ನಡೆಸಲು ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ನಿಟ್ಟೆ ವಿಶ್ವವಿದ್ಯಾನಿಯಲಗಳು ಒಪ್ಪಂದ ಮಾಡಿಕೊಂಡಿದ್ದವು.
ಅಡಿಕೆ ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಅಡಿಕೆಯ ಸಾರದಿಂದ ಕ್ಯಾನ್ಸರ್ ಕಣಗಳ ಮೇಲೆ ಪರಿಣಾಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಲು ತೀರ್ಮಾನಿಸಿತ್ತು. ಈಗ ಮೂರು ವಿಭಾಗಗಳ ಸಂಶೋಧನೆ ಮುಗಿದಿದ್ದು ಸಂಶೋಧನಾ ವರದಿಯನ್ನು ಪ್ರಕಟಿಸಲು ನಿರ್ಧರಿಸಿದೆ.
ನಿಟ್ಟೆ ವಿಶ್ವ ವಿದ್ಯಾನಿಲಯದ ವಿಜ್ಞಾನಿ ಪ್ರೊ. ಇಡ್ಯಾ ಕರುಣಾ ಸಾಗರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಡಿಕೆ ಕ್ಯಾನ್ಸರ್ ಕಣಗಳನ್ನು ಪ್ರತಿಬಂಧಿಸುತ್ತದೆ, ಅಡಿಕೆಯಿಂದ ಕ್ಯಾನ್ಸರ್ ಬರುತ್ತದೆ ಎನ್ನುವುದು ಸಂಶೋಧನೆಯಲ್ಲಿ ದೃಢವಾಗಿಲ್ಲ. ಅಡಿಕೆ ಬಳಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಸಂಶೋಧನೆ ಅಡಿಕೆ ಬೆಳೆಗಾರರಿಗೆ ನಿಟ್ಟುಸಿರು ಬಿಡುವಂತೆ ಮಾಡಿದ್ದು, ಸರ್ಕಾರ ಕೂಡ ಅಧಿಕೃವಾಗಿ ಸಂಶೋಧನೆ ನಡೆಸಿ ಯಾವುದೇ ಹಾನಿಯಿಲ್ಲ ಎಂದು ವರದಿ ಕೊಟ್ಟರೆ ಮತ್ತಷ್ಟು ಗೊಂದಲಗಳು ಬಗೆಹರಿಯಲಿವೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications