ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನ
ನವದೆಹಲಿ, ಜನವರಿ 26: ದೆಹಲಿಯ ಐಟಿಒದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ನಡೆದ ಸಂಘರ್ಷದಲ್ಲಿ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಬ್ಯಾರಿಕೇಡ್ ಮುರಿದು ಒಳನುಗ್ಗಿದ ಅನೇಕ ರೈತರು ಕತ್ತಿ, ದೊಣ್ಣೆಗಳನ್ನು ಹಿಡಿದು ಪೊಲೀಸರು ಹಾಗೂ ವಾಹನಗಳ ಮೇಲೆ ದಾಳಿ ಮಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ವಿವಿಧೆಡೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಕೆಲವೆಡೆ ಪೊಲೀಸರ ಮೇಲೆ ಕಲ್ಲುತೂರಾಟ ಕೂಡ ನಡೆದ ಘಟನೆಗಳು ವರದಿಯಾಗಿವೆ. ಕೆಲವರು ಖಡ್ಗ ಹಿಡಿದು ಪೊಲೀಸರ ಮೇಲೆ ಆಕ್ರಮಣ ಮಾಡುವುದು ವಿಡಿಯೋಗಳಲ್ಲಿ ಸೆರೆಯಾಗಿದೆ. ಐಟಿಒದಿಂದ ಖಾಲಿಟ್ರ್ಯಾಕ್ಟರ್ಗಳನ್ನು ಕಳುಹಿಸಲಾಗಿದೆ. ಗುಂಪುಗೂಡಿದ್ದ ಪ್ರತಿಭಟನಾಕಾರರನ್ನು ಚೆದುರಿಸಲಾಗಿದೆ. ಗಾಯಗೊಂಡ ಒಬ್ಬ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಷರಧಾಮದ ಸಮೀಪ ತಮ್ಮ ಮೆರವಣಿಗೆಗೆ ಅಡ್ಡಿಪಡಿಸಿದ ಪೊಲೀಸರ ಮೇಲೆ ನಿಶಾಂಗ್ ಪ್ರತಿಭಟನಾಕಾರರು ಖಡ್ಗ ಹಿಡಿದು ಹಲ್ಲೆಗೆ ಮುಂದಾಗಿದ್ದಾರೆ. ಆಗ ಪೊಲೀಸರು ಅಶ್ರುವಾಯುಗಳನ್ನು ಸಿಡಿಸಿದ್ದಾರೆ. ಕೇಂದ್ರ ದೆಹಲಿಯ ಐಟಿಒದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನಿಸಿದ್ದು ಕೂಡ ವಿಡಿಯೋಗಳಲ್ಲಿ ಸೆರೆಯಾಗಿದೆ.
They can’t be farmers they are khalistani terrorists #दिल्ली_पुलिस_लठ_बजाओ pic.twitter.com/M2jRyhD8Pq
— Kuldeep_Patel (@Kuldeep_Patel2) January 26, 2021
ರಾಜಧಾನಿಯಲ್ಲಿನ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ವಿವಿಧ ಮೆಟ್ರೋ ಸ್ಟೇಷನ್ಗಳಲ್ಲಿನ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಬಂದ್ ಮಾಡಿರುವುದಾಗಿ ದೆಹಲಿ ಮೆಟ್ರೋ ನಿಗಮ ತಿಳಿಸಿದೆ.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಹಿಂಸಾಚಾರದ ಕಾರಣದಿಂದ ಕೇಂದ್ರ ದೆಹಲಿಗೆ ಪೂರ್ವ ಹಾಗೂ ಈಶಾನ್ಯ ಭಾಗಗಳಿಂದ ಸಂಪರ್ಕ ಕಲ್ಪಿಸುವ ಎಲ್ಲ ದಾರಿಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ. ಇಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡಿಲ್ಲ.
ಸThis is attempt to murder, why isn’t @DelhiPolice arresting or fire tear gas to disperse them. This is how #CCP destroyed America. We can’t allow this.
— Arun Pudur (@arunpudur) January 26, 2021
These are not farmers. These are Khalistani thugs trying to disrupt national security. pic.twitter.com/iBm0TlQHY9
ರೈತರ ಟ್ರ್ಯಾಕ್ಟರ್ ಮೆರವಣಿಗೆ ಶಾಂತಿಯುತವಾಗಿರಲಿದೆ ಎಂದು ಯೋಗೇಂದ್ರ ಯಾದವ್ ಸೇರಿದಂತೆ ಎಲ್ಲ ರೈತ ಮುಖಂಡರು ಹೇಳಿದ್ದರು. ಆದರೆ ಮೆರವಣಿಗೆ ಆರಂಭವಾಗುವ ಮುನ್ನವೇ ಹಿಂಸಾಚಾರ ನಡೆದಿರುವುದು ವ್ಯಾಪಕ ಚರ್ಚೆಗೆ ಒಳಗಾಗಿದೆ. ಖಲಿಸ್ತಾನಿಗಳು ರೈತರ ಪ್ರತಿಭಟನೆಯಲ್ಲಿ ಇರುವುದಕ್ಕೆ ಈ ಹಿಂಸಾಚಾರವೇ ಸಾಕ್ಷಿ ಎಂದು ಅನೇಕರು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications