ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನ
ನವದೆಹಲಿ, ಜನವರಿ 26: ದೆಹಲಿಯ ಐಟಿಒದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ನಡೆದ ಸಂಘರ್ಷದಲ್ಲಿ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಬ್ಯಾರಿಕೇಡ್ ಮುರಿದು ಒಳನುಗ್ಗಿದ ಅನೇಕ ರೈತರು ಕತ್ತಿ, ದೊಣ್ಣೆಗಳನ್ನು ಹಿಡಿದು ಪೊಲೀಸರು ಹಾಗೂ ವಾಹನಗಳ ಮೇಲೆ ದಾಳಿ ಮಾಡುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ವಿವಿಧೆಡೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಕೆಲವೆಡೆ ಪೊಲೀಸರ ಮೇಲೆ ಕಲ್ಲುತೂರಾಟ ಕೂಡ ನಡೆದ ಘಟನೆಗಳು ವರದಿಯಾಗಿವೆ. ಕೆಲವರು ಖಡ್ಗ ಹಿಡಿದು ಪೊಲೀಸರ ಮೇಲೆ ಆಕ್ರಮಣ ಮಾಡುವುದು ವಿಡಿಯೋಗಳಲ್ಲಿ ಸೆರೆಯಾಗಿದೆ. ಐಟಿಒದಿಂದ ಖಾಲಿಟ್ರ್ಯಾಕ್ಟರ್ಗಳನ್ನು ಕಳುಹಿಸಲಾಗಿದೆ. ಗುಂಪುಗೂಡಿದ್ದ ಪ್ರತಿಭಟನಾಕಾರರನ್ನು ಚೆದುರಿಸಲಾಗಿದೆ. ಗಾಯಗೊಂಡ ಒಬ್ಬ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಷರಧಾಮದ ಸಮೀಪ ತಮ್ಮ ಮೆರವಣಿಗೆಗೆ ಅಡ್ಡಿಪಡಿಸಿದ ಪೊಲೀಸರ ಮೇಲೆ ನಿಶಾಂಗ್ ಪ್ರತಿಭಟನಾಕಾರರು ಖಡ್ಗ ಹಿಡಿದು ಹಲ್ಲೆಗೆ ಮುಂದಾಗಿದ್ದಾರೆ. ಆಗ ಪೊಲೀಸರು ಅಶ್ರುವಾಯುಗಳನ್ನು ಸಿಡಿಸಿದ್ದಾರೆ. ಕೇಂದ್ರ ದೆಹಲಿಯ ಐಟಿಒದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನಿಸಿದ್ದು ಕೂಡ ವಿಡಿಯೋಗಳಲ್ಲಿ ಸೆರೆಯಾಗಿದೆ.
They can’t be farmers they are khalistani terrorists #दिल्ली_पुलिस_लठ_बजाओ pic.twitter.com/M2jRyhD8Pq
— Kuldeep_Patel (@Kuldeep_Patel2) January 26, 2021
ರಾಜಧಾನಿಯಲ್ಲಿನ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ವಿವಿಧ ಮೆಟ್ರೋ ಸ್ಟೇಷನ್ಗಳಲ್ಲಿನ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಬಂದ್ ಮಾಡಿರುವುದಾಗಿ ದೆಹಲಿ ಮೆಟ್ರೋ ನಿಗಮ ತಿಳಿಸಿದೆ.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಹಿಂಸಾಚಾರದ ಕಾರಣದಿಂದ ಕೇಂದ್ರ ದೆಹಲಿಗೆ ಪೂರ್ವ ಹಾಗೂ ಈಶಾನ್ಯ ಭಾಗಗಳಿಂದ ಸಂಪರ್ಕ ಕಲ್ಪಿಸುವ ಎಲ್ಲ ದಾರಿಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ. ಇಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡಿಲ್ಲ.
ಸThis is attempt to murder, why isn’t @DelhiPolice arresting or fire tear gas to disperse them. This is how #CCP destroyed America. We can’t allow this.
— Arun Pudur (@arunpudur) January 26, 2021
These are not farmers. These are Khalistani thugs trying to disrupt national security. pic.twitter.com/iBm0TlQHY9
ರೈತರ ಟ್ರ್ಯಾಕ್ಟರ್ ಮೆರವಣಿಗೆ ಶಾಂತಿಯುತವಾಗಿರಲಿದೆ ಎಂದು ಯೋಗೇಂದ್ರ ಯಾದವ್ ಸೇರಿದಂತೆ ಎಲ್ಲ ರೈತ ಮುಖಂಡರು ಹೇಳಿದ್ದರು. ಆದರೆ ಮೆರವಣಿಗೆ ಆರಂಭವಾಗುವ ಮುನ್ನವೇ ಹಿಂಸಾಚಾರ ನಡೆದಿರುವುದು ವ್ಯಾಪಕ ಚರ್ಚೆಗೆ ಒಳಗಾಗಿದೆ. ಖಲಿಸ್ತಾನಿಗಳು ರೈತರ ಪ್ರತಿಭಟನೆಯಲ್ಲಿ ಇರುವುದಕ್ಕೆ ಈ ಹಿಂಸಾಚಾರವೇ ಸಾಕ್ಷಿ ಎಂದು ಅನೇಕರು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications