ಮೊದಲ ಬಾರಿಗೆ ಮತ ಎಣಿಕೆಗೆ ಸಿದ್ಧಗೊಂಡ ಬಾಗಲಕೋಟೆ ತೋಟಗಾರಿಕೆ ವಿವಿ
Recommended Video

ಬಾಗಲಕೋಟೆ, ಮೇ 14 : ವಿಧಾನಸಭೆ ಚುನಾವಣೆಯ ಮತ ಎಣಿಕೆ ಇದೇ ಮೊದಲ ಬಾರಿಗೆ ಇಲ್ಲಿಯ ನವನಗರದ ಉದ್ಯಾನಗಿರಿಯಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ದಿನಾಂಕ 15 ರಂದು ನಡೆಯಲಿದೆ.
ಸುಮಾರು 25 ವರ್ಷಗಳ ಕಾಲ ಪ್ರತಿ ವಿಧಾನಸಭೆ, ಲೋಕಸಭೆ ಚುನಾವಣೆಯ ಫಲಿತಾಂಶದ ಮತ ಎಣಿಕೆ ಕಾರ್ಯ ಇಲ್ಲಿಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿತ್ತು. ಇದಕ್ಕೂ ಮುಂಚೆ ಮತ ಎಣಿಕೆ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿತ್ತು.
ಫಲಿತಾಂಶದ ದಿನದಂದು ಜನಸಂಖ್ಯೆ ಸೇರುವುದು ಪ್ರಮಾಣ ಹೆಚ್ಚಾದಂತೆ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಯಿತು.

ಈ ಮೊದಲು ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದ್ದ ಮತ ಎಣಿಕೆ ದಿನದಂದು ಜಿಲ್ಲೆಯ ಎಲ್ಲ ಕ್ಷೇತ್ರದ ಅಭ್ಯರ್ಥಿಗಳ ಬೆಂಬಲಿಗರು ಇಲ್ಲಿ ಬಂದು ಸೇರುತ್ತಿದ್ದರಿಂದ ಜನರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಗಿತ್ತು. ಅಲ್ಲದೇ ಇಲ್ಲಿ ಟ್ರಾಫಿಕ್ ದಟ್ಟಣೆ ಜಾಸ್ತಿಯಾಗಿತ್ತು.
ತೋಟಗಾರಿಕೆ ವಿವಿ ಆವರಣ ದೊಡ್ಡದಾಗಿದೆ. ಇಲ್ಲಿ ವಾಹನಗಳನ್ನು ನಿಲ್ಲಿಸಲು ಜನರು ನಿಂತುಕೊಳ್ಳಲು ವಿಶಾಲವಾದ ಜಾಗವಿದೆ. ಪಾರ್ಕಿಂಗ್ ಮತ್ತು ಭದ್ರತೆ ದೃಷ್ಟಿಯಿಂದ ತೋಟಗಾರಿಕೆ ವಿವಿ ಕಟ್ಟಡವನ್ನು ಮತ ಎಣಿಕೆಗೆ ಜಿಲ್ಲಾಧಿಕಾರಿ ಕೆ.ಜೆ.ಶಾಂತಾರಾಮ್ ಆಯ್ಕೆ ಮಾಡಿಕೊಂಡಿದ್ದಾರೆ.

15 ರಂದು ನಡೆಯುವ ಮತ ಎಣಿಕೆಗೆ ಎಲ್ಲ ಸಿದ್ದತೆಯನ್ನು ಮಾಡಲಾಗಿದ್ದು, ಏಳು ಮತಕ್ಷೇತ್ರದ ಮತಪೆಟ್ಟಿಗೆಯನ್ನು ಮಿಲಿಟರಿ ಪಡೆಯವರಿಂದ ಭದ್ರತೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜೆ.ಶಾಂತಾರಾಮ್ ತಿಳಿಸಿದ್ದಾರೆ.
ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳು, ಏಜೆಂಟರು, ಸಿಬ್ಬಂದಿ, ಮಾಧ್ಯಮದವರಿಗೆ ಈಗಾಗಲೇ ಪಾಸುಗಳನ್ನು ಮತ ಎಣಿಕೆ ಕೇಂದ್ರಕ್ಕೆ ಬರಲು ನೀಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ತೋಟಗಾರಿಕೆ ವಿವಿ ಆವರಣದಲ್ಲಿ ಪ್ರವೇಶ ಸಿಗಲಿದೆ ಎಂದರು.
ಜಿಲ್ಲೆಯಲ್ಲಿ 14,98,515 ಮತದಾರ ಪೈಕಿ 11,23,141ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಮತದಾನ ಶೇ.74.95 ಆಗಿದೆ.
ಶೇಕಡವಾರು ಮತದಾನ
ಮುಧೋಳ ಶೇ.75.16
ತೇರದಾಳ ಶೇ.78.46
ಜಮಖಂಡಿ 74.99
ಬೀಳಗಿ ಶೇ 79.45
ಬಾದಾಮಿ ಶೇ.74.65
ಬಾಗಲಕೋಟೆ ಶೇ.69.36
ಹುನಗುಂದ ಶೇ.72.87ರಷ್ಟು ಮತದಾನ ನಡೆದಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications