ಮಧ್ಯವರ್ತಿಗಳು ಭತ್ತ ತಂದರೆ ಕ್ರಿಮಿನಲ್ ಮೊಕದ್ದಮೆ; ಡಿಸಿ ರೋಹಿಣಿ
ಮೈಸೂರು, ನವೆಂಬರ್ 13: 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದ್ದು, ಉತ್ತಮ ಗುಣಮಟ್ಟದ ಭತ್ತವನ್ನು ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರಾದ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಒಂದು ವೇಳೆ ಮಧ್ಯವರ್ತಿಗಳು, ಏಜೆಂಟರು ಭತ್ತ ಖರೀದಿ ಕೇಂದ್ರಗಳಿಗೆ ಭತ್ತವನ್ನು ತಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಖರೀದಿ ಕೇಂದ್ರಗಳು
ಈ ಸಂಬಂಧ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಕೇಂದ್ರಗಳ ಮೂಲಕ ಕನಿಷ್ಠ ಬೆಂಬಲ ಬೆಲೆಗೆ ಮಾರಾಟ ಮಾಡಬೇಕು. ಭತ್ತ ಖರೀದಿಸಲು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳಿಯನ್ನು ಏಜೆನ್ಸಿಗಾಗಿ ನೇಮಿಸಿದ್ದು, ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್ ಗೆ ಕನಿಷ್ಠ ಬೆಂಬಲ ಬೆಲೆ 1,868 ರೂ. ಹಾಗೂ ಗ್ರೇಡ್ ಎ ಭತ್ತಕ್ಕೆ 1,888 ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಭತ್ತಕ್ಕೆ ಗರಿಷ್ಠ ಮಿತಿ
ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಭತ್ತ ಸರಾಸರಿ ಉತ್ತಮ ಗುಣಮಟ್ಟದ್ದಾಗಿರಬೇಕು. ಅದರ ಗರಿಷ್ಠ ಮಿತಿಯನ್ನು ನೀಡಲಾಗಿದೆ. ಅನ್ಯ ವಸ್ತುಗಳಾದ ಅಜೈವಿಕ ಶೇ.1.0, ಸಾವಾಂವ ಶೇ.1.0, ವಿರೂಪಗೊಂಡ ಧಾನ್ಯಗಳು ಶೇ.4.0, ಕುಗ್ಗಿದ ಮತ್ತು ಶ್ರವಣಿತ ಧಾನ್ಯಗಳು ಶೇ.3.0, ಕೆಳವರ್ಗದ ಮಿಶ್ರಣ ಶೇ.6.0, ತೇವಾಂಶವು ಗರಿಷ್ಠ ಶೇ.17.0ರಷ್ಟು ಇರಬೇಕು. ನೋಂದಾಯಿಸಿಕೊಂಡ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಮಾತ್ರ ಗರಿಷ್ಠ 40 ಕ್ವಿಂಟಾಲ್ (ಪ್ರತಿ ಎಕರೆಗೆ 16 ಕ್ವಿಂಟಾಲ್ ನಂತೆ) ಭತ್ತವನ್ನು ಖರೀದಿಸಲಾಗುವುದು ಎಂದೂ ತಿಳಿಸಿದ್ದಾರೆ.

ಹೆಸರು ನೋಂದಣಿಗೆ ಸೂಚನೆ
ರೈತರು ಸರಬರಾಜು ಮಾಡುವ ಒಂದು ಕ್ವಿಂಟಾಲ್ ಸಾಮರ್ಥ್ಯದ ಚೀಲಕ್ಕೆ 6 ರೂ. ಪಾವತಿಸಲಾಗುವುದು. ಪ್ರತಿಯೊಬ್ಬ ರೈತರು ಬೆಂಬಲ ಬೆಲೆ ಯೋಜನೆಯಲ್ಲಿ ಭತ್ತ ಮಾರಾಟ ಮಾಡಲು ಕೃಷಿ ಇಲಾಖೆಯಿಂದ ನೀಡಲಾಗಿರುವ 'ಫ್ರೂಟ್' ಗುರುತಿನ ಚೀಟಿಯನ್ನು ಖರೀದಿ ಕೇಂದ್ರಗಳಲ್ಲಿ ಮೊದಲು ನೋಂದಾಯಿಸಿಕೊಳ್ಳಬೇಕು.

ಭತ್ತದ ಮಾದರಿ ಕಡ್ಡಾಯ
ನೋಂದಣಿ ಮಾಡಿದ ರೈತರು ಇಲಾಖೆಯಿಂದ/ಖರೀದಿ ಏಜೆನ್ಸಿಯಿಂದ ಕಳುಹಿಸುವ ಎಸ್ಎಂಎಸ್ ಆಧಾರದ ಮೇಲೆ ಸಂಬಂಧಪಟ್ಟ ಅಕ್ಕಿ ಗಿರಣಿಗಳಿಗೆ ಭತ್ತದ ಮಾದರಿಯನ್ನು (ಸ್ಯಾಂಪಲ್) ಕಡ್ಡಾಯವಾಗಿ ನೀಡತಕ್ಕದ್ದು ಎಂದು ಡಿಸಿ ಸೂಚಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications