ಭಾರತ ಸಕ್ಕರೆ ರಫ್ತಿಗೆ ನಿರ್ಬಂಧ, ಜಾಗತಿಕ ಪೂರೈಕೆಯಲ್ಲಿ ಬಿಕ್ಕಟ್ಟು
ಬೆಂಗಳೂರು, ನವೆಂಬರ್ 06: ಭಾರತ ದೇಶವು 2022 -2023 ನೇ ಸಾಲಿನ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿದ್ದು, ಪರಿಣಾಮವಾಗಿ ಸಕ್ಕರೆ ಸಾಗಣೆಯಲ್ಲಿ ಮುಂದಿರುವ ಬ್ರೆಜಿಲ್ನಲ್ಲಿ ಪೂರೈಕೆಯ ಬಿಕ್ಕಟ್ಟು ಎದುರಿಸುತ್ತಿದೆ. ಇದು ಜಾಗತಿಕ ಮಾರುಕಟ್ಟೆಯ ಮೇಲೆ ಒತ್ತಡ ಉಂಟಾಗಲು ಕಾರಣವಾಗಿದೆ.
ಕೇಂದ್ರ ಆಹಾರ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಮೇ 31ರ ಒಳಗೆ ಜಾಗತಿಕ ಮಾರುಕಟ್ಟೆಯಲ್ಲಿ 6 ಮಿಲಿಯನ್ ಟನ್ ಸಕ್ಕರೆ ಮಾರಾಟ ಮಾಡಲು ದಕ್ಷಿಣ ಏಷ್ಯಾದ ರಾಷ್ಟ್ರವು ಗುರಿ ಹೊಂದಿದೆ. ಇದು ಮುಂದಿನ 2023 ಅಕ್ಟೋಬರ್ ಒಳಗೆ ಇನ್ನಷ್ಟು ಸಕ್ಕರೆ ಸಾಗಣೆಗೆ ಪ್ರಮಾಣ, ಅದಕ್ಕೆ ನೀಡಬಹುದಾದ ಅನುಮತಿಯನ್ನು ಸೂಚಿಸುತ್ತದೆ.
ಬ್ರೆಜಿಲ್ನಲ್ಲಿ ವಿಪರೀತ ಮಳೆ ಬಿದ್ದಿದ್ದು, ಕಬ್ಬು ಬೆಳೆ ನಾಶವಾಗಿದೆ. ಅಕ್ಟೋಬರ್ ಅಂತ್ಯದಿಂದ ನ್ಯೂಯಾರ್ಕ್ನಲ್ಲಿನ ಕಚ್ಚಾ ಸಕ್ಕರೆಯ ಬೆಲೆ ಶೇ. 6ಕ್ಕಿಂತಲೂ ಹೆಚ್ಚಾಗಿದೆ. ಉತ್ಪಾದನೆಯ ವೇಗವನ್ನು ಆಧರಿಸಿ ಭಾರತವು ಮೊದಲ ಕಂತಿನಲ್ಲಿ 6 ಮಿಲಿಯನ್ ಟನ್ ರಫ್ತು ಮಾಡಲು ಹಾಗೂ ಎರಡನೇ ಕಂತಿನಲ್ಲಿ ಸುಮಾರು 3 ಮಿಲಿಯನ್ ಟನ್ನಷ್ಟು ಸಕ್ಕರೆ ರಫ್ತಿಗೆ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ದೇಶದಲ್ಲಿ ಸಕ್ಕರೆಯ ಲಭ್ಯತೆ ದೃಷ್ಟಿಯಿಂದ 2023ರ ಅಕ್ಟೋಬರ್ ವರೆಗೆ ನಿರ್ಬಂಧಗಳನ್ನು ವಿಸ್ತರಿಸಿದೆ. ಆದಾಗಿಯೂ ಕೆಲವು ಕೋಟಾಗಳಡಿ ಸಕ್ಕರೆ ಮಾರಾಟಕ್ಕೆ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ತನ್ನ ಆದೇಶದಲ್ಲಿ ಈ ಹಿಂದೆ ತಿಳಿಸಿದೆ.
35.5 ಮಿಲಿಯನ್ ಟನ್ ಸಕ್ಕರೆ ಉತ್ಪಾದನೆ
ಭಾರತೀಯ ಸಕ್ಕರೆ ಕಾರ್ಖಾನೆಗಳ ಸಂಘದ ಪ್ರಕಾರ, ಭಾರತ ದೇಶ ಒಂದರಲ್ಲೇ ಈ ವರ್ಷ 35.5 ಮಿಲಿಯನ್ ಟನ್ಗಳಷ್ಟು ಸಕ್ಕರೆ ಉತ್ಪಾದನೆ ನಿರೀಕ್ಷಿಸಲಾಗಿದೆ. ಸಕ್ಕರೆ ಉತ್ಪಾದನೆಯಲ್ಲಿ ಭಾರತವು ಇಂಡೋನೇಷ್ಯಾ, ಬಾಂಗ್ಲಾದೇಶ, ಮಲೇಷ್ಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಗಳಿಗಿಂತಲೂ ಮುಂದಿದೆ.

ಭಾರತೀಯ ಸಕ್ಕರೆ ಕಾರ್ಖಾನೆಗಳು ಈಗಾಗಲೇ 2.2 ಮಿಲಿಯನ್ ಟನ್ ಸಕ್ಕರೆಯನ್ನು ರಫ್ತು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿವೆ. ಹೀಗೆಂದು ಪ್ರಸಕ್ತ ವರ್ಷದಲ್ಲಿ ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಸುಮಾರು 5,00,000 ಟನ್ ಸಕ್ಕರೆಯನ್ನು ವ್ಯಾಪಾರ ಮಾಡಿದ ಮೀರ್ ಕಮಾಡಿಟೀಸ್ ಇಂಡಿಯಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಒಬ್ಬರು ತಿಳಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications