ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲಾರ ಗಡಿಯಲ್ಲಿ ಕಾಡಾನೆಗಳ ದಾಂಧಲೆ; ಲಕ್ಷಾಂತರ ಬೆಳೆ ನಾಶ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಮೇ 23: ಸದಾ ಕಾಡಾನೆ ಹಾವಳಿಗೆ ತುತ್ತಾಗುವ ಕೋಲಾರದ ಗಡಿಯಲ್ಲಿ ಇಂದು ಮತ್ತೆ ಕಾಡಾನೆ ಹಿಂಡು ಕಾಣಿಸಿಕೊಂಡಿದೆ. ತಮಿಳುನಾಡಿನ ಕೃಷ್ಣಗಿರಿ ಕಡೆಯಿಂದ ಬಂದಿರುವ ಹತ್ತಕ್ಕೂ ಹೆಚ್ಚು ಕಾಡಾನೆಗಳು ಹೊಲಗಳಿಗೆ ನುಗ್ಗಿ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಯನ್ನು ನಾಶ ಮಾಡಿವೆ.

Recommended Video

Randeep Hooda shares gutting video of people shooting at elephant in Karnataka | Bandipur

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಮಾರಾಂಡಹಳ್ಳಿ, ಬೊಮ್ಮಗಾನಹಳ್ಳಿ ಬಳಿ ಇಂದು ಲಗ್ಗೆ ಇಟ್ಟ ಆನೆಗಳು ರೈತರ ಬೆಳೆಗಳನ್ನು ತುಳಿದು ನಾಶ ಮಾಡಿ ಹಾಕಿವೆ. ಟೊಮಾಟೊ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ.

ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ನಿರ್ಭೀತಿಯ ಓಡಾಟಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ನಿರ್ಭೀತಿಯ ಓಡಾಟ

ರೈತ ಶಿವಪ್ಪ, ವೆಂಕಟೇಶಪ್ಪ ಎಂಬುವರು ಮೂರು ಎಕರೆ ಟೊಮಾಟೊ ಬೆಳೆಯನ್ನು ಬೆಳೆದಿದ್ದರು. ಅವೆಲ್ಲವೂ ಕಾಡಾನೆ ತುಳಿತಕ್ಕೆ ಒಳಗಾಗಿವೆ. ಆದರೆ ಇಷ್ಟಾದರೂ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಸ್ಥಳೀಯ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Crops Destroyed By Elephant Attack In Kolar Border

ಕಳೆದ ಎರಡು ವರ್ಷಗಳಿಂದಲೂ ನಿರಂತರವಾಗಿ ಕಾಡಾನೆಗಳು ದಾಳಿಯಿಡುತ್ತಿರುವ ಘಟನೆಗಳು ನಡೆಯುತ್ತಿವೆ. ಬೆಳೆ ನಾಶವೂ ಆಗುತ್ತಿದೆ. ಆದರೆ ಅದಕ್ಕೆ ಪರಿಹಾರವೂ ಸಿಗುತ್ತಿಲ್ಲ, ಕಾಡಾನೆ ದಾಳಿಯೂ ನಿಲ್ಲುತ್ತಿಲ್ಲ ಎಂದು ಅರಣ್ಯ ಇಲಾಖೆಗೆ ರೈತರು ಶಾಪ ಹಾಕುತ್ತಿದ್ದಾರೆ.

English summary
Lakhs of worth crops were destroyed by elephant attack in kolar border marandalli, bommaganahalli villages,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X