ದಾವಣಗೆರೆ ಜಿಲ್ಲೆಯ ತಾಲೂಕುವಾರು ದಾಖಲಾದ ಮಳೆ ಮತ್ತು ನಷ್ಟದ ವಿವರ ತಿಳಿಯಿರಿ
ದಾವಣಗೆರೆ, ಮೇ, 22: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಒಂದೆಡೆ ಬಿಸಿಲಿನ ಬೇಗೆಗೆ ತತ್ತರಸಿದ್ದ ಜನರಿಗೆ ವರುಣ ತಂಪೆರೆದರೆ, ಮತ್ತೊಂದೆಡೆ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ರೈತರು ಬೆಳೆದಿದ್ದ ಬೆಳೆಗಳು ಜಲಾವೃತವಾಗಿವೆ. ಅದರಲ್ಲಿಯೂ ಭತ್ತ, ಬಾಳೆ, ಪಪ್ಪಾಯಿ ಸೇರಿದಂತೆ ಇತರೆ ಬೆಳೆಗಳು ನೀರುಪಾಲಾಗಿದ್ದು, ರೈತರಿಗೆ ಮತ್ತೊಂದು ಬರೆ ಬಿದ್ದಂತಾಗಿದೆ. ಸುಮಾರು 1 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.
ಭಾನುವಾರ ರಾತ್ರಿ ಭಾರೀ ಗಾಳಿ, ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲದೆ, ತರಕಾರಿ ಬೆಳೆಗಳು ಸಹ ನೀರುಪಾಲಾಗಿದೆ. ಹೀಗೆ ಕೈಗೆ ಬಂದಿದ್ದ ಫಸಲು ಬಾರದೇ ರೈತರು ಕಣ್ಣೀರು ಸುರಿಸುವಂತಾಗಿದೆ. ಜಿಲ್ಲೆಯಲ್ಲಿ 13.6 ಮಿ.ಮೀ. ಸರಾಸರಿ ಮಳೆ ಸುರಿದಿದ್ದು, ಜಿಲ್ಲಾಡಳಿತ ಅಂದಾಜಿಸಿರುವ ಪ್ರಕಾರ 79.40 ಲಕ್ಷ ರೂ.ನಷ್ಟ ಸಂಭವಿಸಿದೆ. ಕೆಲವೆಡೆ ಮನೆಗಳು ಧರೆಗುರುಳಿದರೆ, ಮತ್ತೆ ಕೆಲವೆಡೆ ಜಮೀನುಗಳು ಜಲಾವೃತವಾಗಿವೆ.

ಚನ್ನಗಿರಿಯಲ್ಲಿನ ಮಳೆ ವಿವರ
ಚನ್ನಗಿರಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 9.5 ಮಿ.ಮೀ. ಆಗಿದ್ದರೆ, ದಾವಣಗೆರೆ ತಾಲೂಕಿನಲ್ಲಿ ವಾಡಿಕೆ ಮಳೆ 1.0 ಮಿ.ಮೀ.ನಷ್ಟು ಆಗಿದೆ. ವಾಸ್ತವ ಮಳೆ 19.5 ಮಿ.ಮೀ ಸುರಿದಿದೆ. ಹರಿಹರದಲ್ಲಿ ವಾಡಿಕೆ ಮಳೆ 1.1 ಮಿ.ಮೀ ಹಾಗೂ ವಾಸ್ತವ ಮಳೆ 17.2 ಮಿ.ಮೀ. ಆಗಿದೆ.
ಇನ್ನು ಹೊನ್ನಾಳಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವ ಮಳೆ 9.0 ಮಿ.ಮೀ, ಜಗಳೂರು ವಾಡಿಕೆ ಮಳೆ 1.9 ಮಿ.ಮೀ ಹಾಗೂ ವಾಸ್ತವ ಮಳೆ 13.7 ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 14.1 ಮಿ.ಮೀ ಮಳೆಯಾಗಿದೆ.
ದಾವಣಗೆರೆ ತಾಲೂಕು ವ್ಯಾಪ್ತಿಯ ಹಾನಿ ವಿವರ
ದಾವಣಗೆರೆ ತಾಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, 150 ಹೆಕ್ಟೇರ್ ಭತ್ತದ ಬೆಳೆ ನಾಶವಾಗಿದೆ. ಇದರಿಂದ ಒಟ್ಟು ಅಂದಾಜು 30.60 ಲಕ್ಷ ರೂಪಾಯಿ ನಷ್ಟ, ಹರಿಹರ ತಾಲೂಕು ವ್ಯಾಪ್ತಿಯಲ್ಲಿ 2 ಮನೆ ಭಾಗಶಃ ಹಾನಿಯಾಗಿದ್ದು, 295 ಹೆಕ್ಟೇರ್ ಭತ್ತ ನೀರುಪಾಲಾಗಿದೆ. ಒಟ್ಟು ಅಂದಾಜು 18.93 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜಗಳೂರು ತಾಲೂಕು ವ್ಯಾಪ್ತಿಯ ಹಾನಿ ವಿವರ
ಜಗಳೂರು ತಾಲೂಕು ವ್ಯಾಪ್ತಿಯಲ್ಲಿ 1 ಮನೆ ತೀವ್ರ ಹಾನಿಯಾಗದ್ದು, 10 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 30 ಹೆಕ್ಟೇರ್ ಅಡಿಕೆ, 38 ಹೆಕ್ಟೇರ್ ಬಾಳೆ, 20 ಹೆಕ್ಟೇರ್ ಪಪ್ಪಾಯಿ ಬೆಳೆ ಹಾನಿಯಾಗಿದೆ. 1 ಎತ್ತು ಮೃತಪಟ್ಟಿದ್ದು ಒಟ್ಟು ಅಂದಾಜು 29.87 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟಾರೆ ಅಂದಾಜು 79.40 ಲಕ್ಷ ರೂಪಾಯಿನಷ್ಟು ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಇನ್ನು ಕೆಲವೆಡೆ ಜಿಲ್ಲಾಡಳಿತ ಸರ್ವೇ ನಡೆಸಬೇಕಾಗಿದೆ. ಹಾಗಾಗಿ, ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಸಂಭವಿಸಿದೆ. ಬೆಳೆಗಳು ಮಳೆಗೆ ಕೊಚ್ಚಿ ಹೋಗಿರುವುದರಿಂದ ರಾಜ್ಯ ಸರ್ಕಾರವು ಈ ಹಿಂದೆ ನೀಡುತ್ತಿದ್ದ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ಬೆಳೆ ನಷ್ಟ ಅನುಭವಿಸಿದ ರೈತರು ಆಗ್ರಹಿಸಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications