ಮಂಡ್ಯದಲ್ಲಿ ಭತ್ತ, ರಾಗಿ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯ: ಮುಖ್ಯಮಂತ್ರಿಗಳಿಗೆ ಮನವಿ ಪತ್ರ
ಮಂಡ್ಯ, ನವೆಂಬರ್, 28: ಜಿಲ್ಲೆಯಲ್ಲಿ ಬೆಳೆಯಲಾಗಿರುವ ಭತ್ತ ಮತ್ತು ರಾಗಿಯನ್ನು ಬೆಂಬಲ ಯೋಜನೆಯಡಿ ಖರೀದಿ ಮಾಡಲು ಶೀಘ್ರವೇ ಖರೀದಿ ಕೇಂದ್ರ ತೆರೆಯಬೇಕು. ಹಾಗೂ ರೈತರು ಬೆಳೆ ಮಾರಾಟ ಮಾಡಲು ವಿಧಿಸಿರುವ ಮಿತಿಯನ್ನು ತೆಗೆದುಹಾಕಬೇಕು ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ಈವರೆಗೂ ಖರೀದಿ ಕೇಂದ್ರಗಳ ಸ್ಥಾಪನೆ ಬಗ್ಗೆ ಹಾಗೂ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಒಬ್ಬ ರೈತನಿಂದ ಇಂತಿಷ್ಟೇ ಕ್ವಿಂಟಾಲ್ ಭತ್ತವನ್ನು ಖರೀದಿ ಮಾಡಬೇಕು ಎಂದು ಮಿತಿಯನ್ನು ಮಾಡಿದೆ. ಇನ್ನು ನೋಂದಣಿ ಪ್ರಕ್ರಿಯೆ ಯಾವಾಗ ಪ್ರಾರಂಭ ಆಗುತ್ತದೆ ಎನ್ನುವುದನ್ನು ಖಾತ್ರಿಪಡಿಸಿಲ್ಲ. ಇದರಿಂದ ರೈತಾಪಿ ವರ್ಗ ತುಂಬಾ ಆತಂಕಕ್ಕೀಡಾಗಿದೆ. ತಾವು ಮಧ್ಯಪ್ರವೇಶ ಮಾಡಿ ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.
2021-22ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸುಮಾರು 98 ಭತ್ತ ಖರೀದಿ ಏಜೆನ್ಸಿ ಮ್ಯಾಪಿಂಗ್ ಮಾಡಿದ ಮಿಲ್ಗಳಿಂದ ಖರೀದಿಸಲಾಗಿತ್ತು. ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತವನ್ನು 75 ಸಾವಿರ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಿತ್ತು. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 81,459 ಹೆಕ್ಟೇರ್ ವಿಸ್ತೀರ್ಣದಲ್ಲಿರುವ ಭತ್ತದ ಬೆಳೆಯು ಕಟಾವಿಗೆ ಬಂದಿದೆ. ಅಂದಾಜು 50 ಲಕ್ಷ ಕ್ವಿಂಟಾಲ್ ಭತ್ತ ಉತ್ಪಾದನೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆತಂಕಕ್ಕೆ ಒಳಗಾಗುತ್ತಿರುವ ರೈತಾಪಿ ವರ್ಗ
ಇನ್ನು 2021-22ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 30 ಸಾವಿರ ರೈತರಿಂದ 5 ಲಕ್ಷ ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆ ನೀಡುವ ಮುಖಾಂತರ ಖರೀದಿಸಲಾಗಿತ್ತು. 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಸುಮಾರು 50,000 ಹೆಕ್ಟೇರ್ ವಿಸ್ತೀರ್ಣದಲ್ಲಿ ರಾಗಿ ಬೆಳೆಯಲಾಗಿದೆ. ಹೀಗಾಗಿ ಸುಮಾರು 10 ಲಕ್ಷಕ್ಕೂ ಹೆಚ್ಚು ಕ್ವಿಂಟಾಲ್ ರಾಗಿ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ ಇನ್ನೂ ಕೂಡ ಖರೀದಿ ಕೇಂದ್ರಗಳನ್ನು ತೆರೆಯದೇ ಇರುವುದರಿಂದ ರಾಗಿ ಬೆಳೆದ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದಿದ್ದಾರೆ.

ಕಂಗಾಲಾದ ಜಿಲ್ಲೆಯ ಅನ್ನದಾತರು
ಈಗಾಗಲೇ ಬೆಲೆ ಕುಸಿತ ಹಾಗೂ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳ ಬೆಲೆ ಏರಿಕೆ ಆಗಿದೆ. ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರೈತನ ಬದುಕು ದುಸ್ತರವಾಗಿದೆ. ಇದರಿಂದ ಜೀವನ ಸಂಕಷ್ಟಕ್ಕೆ ಸಿಲುಕಿ ಆತ್ಯಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕೃಷಿ ವಲಯ ಸಂಕಷ್ಟಕ್ಕೆ ಸಿಲುಕಿ ನಷ್ಟದ ದಾರಿ ಹಿಡಿದಿದೆ. ಕೃಷಿ ಕಾರ್ಮಿಕರ ಕೊರತೆಯೂ ತೀವ್ರವಾಗಿ ರೈತರನ್ನು ಕಾಡುತ್ತಿದೆ. ಖರೀದಿ ಕೇಂದ್ರಗಳನ್ನು ತೆರೆಯುವುದು ವಿಳಂಬವಾದಲ್ಲಿ ಮಧ್ಯವರ್ತಿಗಳ ಮುಷ್ಟಿಗೆ ಸಿಲುಕಿ ರೈತರು ಕಡಿಮೆ ಬೆಲೆಗೆ ಭತ್ತ ಮತ್ತು ರಾಗಿಯನ್ನು ತಮ್ಮ ತುರ್ತು ಅಗತ್ಯತೆಗಳಿಗೆ ಮಾರಾಟ ಮಾಡಿ ನಷ್ಟಕ್ಕೊಳಗಾಗುತ್ತಾರೆ ಎಂದು ತಿಳಿಸಿದ್ದಾರೆ.

ಸೂಕ್ತ ಬೆಲೆ ನಿಗದಿ ಮಾಡಬೇಕು, ಮನವಿ
ಆದ್ದರಿಂದ ಸರ್ಕಾರ ಕೂಡಲೇ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಮಂಡ್ಯ ಜಿಲ್ಲೆಯ ಜೊತೆಗೆ ಮೈಸೂರು, ಚಾಮರಾಜನಗರ, ಮಡಿಕೇರಿ, ಹಾಸನ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಕೂಡಲೇ ನೋಂದಣಿ ಕೇಂದ್ರವನ್ನು ಪ್ರಾರಂಭ ಮಾಡಬೇಕು. ಹಾಗೆಯೇ ದರ ಏರಿಕೆ ಮಾಡಬೇಕು ಎಂದು ಆಗ್ರಹಿಸಿದರು.

ದಿನೇಶ್ ಗೂಳಿಗೌಡ ನೀಡಿದ ಪತ್ರದಲ್ಲಿ ಏನಿದೆ?
ಕಳೆದ ಬಾರಿ ಇದ್ದಂತಹ ಒಬ್ಬ ರೈತನಿಂದ ಇಂತಿಷ್ಟೇ ಕ್ವಿಂಟಾಲ್ ಖರೀದಿ ಮಾಡಬೇಕು ಎಂಬ ನಿಯಮವನ್ನು ತೆಗೆದುಹಾಕಬೇಕಿದೆ. ರೈತ ಉತ್ಪಾದಿಸಿದ ಎಲ್ಲ ಭತ್ತ ಮತ್ತು ರಾಗಿಯನ್ನು ಖರೀದಿ ಮಾಡಬೇಕು ಎಂದು ಈ ಭಾಗದ ರೈತರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಯವರಿಗೆ ಸಲ್ಲಿಸಿದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications