ರಫ್ ಅಂಡ್ ಟಫ್ ಹೋರಾಟಕ್ಕೆ ಗೌಡ್ರು ಸಿದ್ಧ

ಲಾಠಿಚಾರ್ಚ್ ಮಾಡಲು ಆದೇಶ ನೀಡುವುದು, ಇನ್ನೊಂದೆಡೆ ಕಣ್ಣೀರು ಸುರಿಸುವ ನಾಟಕ ಆಡುವುದು ಇದು ಸಿಎಂಗೆ ಆಟವಾಗಿ ಹೋಗಿದೆ ಎಂದು ಗೌಡರು ವ್ಯಂಗ್ಯವಾಡಿದ್ದಾರೆ. ಪದ್ಮನಾಭನಗರದ ಮನೆಯಲ್ಲಿ ನೈಸ್ ವಿರುದ್ಧ ಹೋರಾಟದ ರೂಪು ರೇಷೆ ಸಿದ್ಧತೆಗಾಗಿ ರೈತ ಮುಖಂಡರ ಜೊತೆ ದೇವೇಗೌಡರು ಸೋಮವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಡನೆ ಮಾತನಾಡುತ್ತಿದ್ದರು.
ಸರ್ಕಾರಕ್ಕೆ ಪಾಠ ಕಲಿಸುವ ಕಾಲ ಬಂದಿದೆ. ರೈತರ ಹೆಸರಿನಲ್ಲಿ ಆಣೆ, ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದು, ಈಗ ನಡುಬೀದಿಯಲ್ಲಿ ಅನ್ನದಾತರನ್ನು ಹಿಡಿದು ಹಿಗ್ಗಾಮುಗ್ಗ ಬಡಿಯುವುದು ಅಕ್ಷಮ್ಯ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತರನ್ನು ಮಧ್ಯರಾತ್ರಿ ಎಳೆದು ತಂದು ಜೈಲಿಗೆ ಹಾಕುತ್ತಿರುವುದು ಇವರ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಆರ್ ನಾಯಕ್ ಭೇಟಿ : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಸ್ ಆರ್ ನಾಯಕ್ ಅವರು ಇಂದು ಜೈಲಿನಲ್ಲಿರುವ ಅನ್ನದಾತರನ್ನು ಭೇಟಿ ಮಾಡಿದರು. ಬಿಜಿಎಸ್ ಆಸ್ಪತ್ರೆಯಲ್ಲಿರುವ ನೈಸ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ವೆಂಕಟಾಚಲ ಅವರ ಆರೋಗ್ಯವನ್ನು ವಿಚಾರಿಸಿದ ನಂತರ ಮಾತನಾಡಿ, ಈ ಪ್ರಕರಣದ ಕುರಿತು ಆಯೋಗ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದೆ ಎಂದರು.
ರೈತರ ಮೇಲೆ ಕೇಸ್ ಗಳ ಸರಮಾಲೆ: ನೈಸ್ ಯೋಜನೆಗೆ ಸಂಬಂಧಿಸಿದ ಮಹತ್ವದ ಸಭೆಗೆ ರೈತ ಮುಖಂಡರನ್ನೇ ಆಹ್ವಾನಿಸಿಲ್ಲ. ಅಕ್ರಮವಾಗಿ ಹೆಚ್ಚುವರಿ ಜಮೀನನ್ನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ. ಸುಪ್ರೀಂಕೋರ್ಟ್ ನ ಆದೇಶವನ್ನು ನೈಸ್ ಸಂಸ್ಥೆ ಗಾಳಿಗೆ ತೂರಿದೆ ಎಂದುಆರೋಪಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಸಂಘ ಸಂಸ್ಥೆಗಳ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿದ ಪೊಲೀಸರು, ಮನಬಂದಂತೆ ಹೊಡೆದಿದ್ದಾರೆ.
ರೈತರ ಮೇಲೆ ಕಾನೂನು ಭಂಗ, ಪೊಲೀಸರ ಮೇಲೆ ಹಲ್ಲೆ, ಅಕ್ರಮ ಗುಂಪು, ಕಾನೂನು ಬಾಹಿತ ಚಟುವಟಿಕೆಯಲ್ಲಿ ಭಾಗಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಮುಂತಾದ ಗಂಭೀರ ಆರೋಪ ಹೊರೆಸಿ ಭಾರತೀಯ ದಂಡ ಸಂಹಿತೆ 120/ಬಿ, 146,147,148,341,427,353,332 ಹಾಗೂ 149 ಕಲಂಗಳಡಿಯಲ್ಲಿ ಕೇಸು ದಾಖಲಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications