ರಫ್ ಅಂಡ್ ಟಫ್ ಹೋರಾಟಕ್ಕೆ ಗೌಡ್ರು ಸಿದ್ಧ

ಲಾಠಿಚಾರ್ಚ್ ಮಾಡಲು ಆದೇಶ ನೀಡುವುದು, ಇನ್ನೊಂದೆಡೆ ಕಣ್ಣೀರು ಸುರಿಸುವ ನಾಟಕ ಆಡುವುದು ಇದು ಸಿಎಂಗೆ ಆಟವಾಗಿ ಹೋಗಿದೆ ಎಂದು ಗೌಡರು ವ್ಯಂಗ್ಯವಾಡಿದ್ದಾರೆ. ಪದ್ಮನಾಭನಗರದ ಮನೆಯಲ್ಲಿ ನೈಸ್ ವಿರುದ್ಧ ಹೋರಾಟದ ರೂಪು ರೇಷೆ ಸಿದ್ಧತೆಗಾಗಿ ರೈತ ಮುಖಂಡರ ಜೊತೆ ದೇವೇಗೌಡರು ಸೋಮವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಡನೆ ಮಾತನಾಡುತ್ತಿದ್ದರು.
ಸರ್ಕಾರಕ್ಕೆ ಪಾಠ ಕಲಿಸುವ ಕಾಲ ಬಂದಿದೆ. ರೈತರ ಹೆಸರಿನಲ್ಲಿ ಆಣೆ, ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದು, ಈಗ ನಡುಬೀದಿಯಲ್ಲಿ ಅನ್ನದಾತರನ್ನು ಹಿಡಿದು ಹಿಗ್ಗಾಮುಗ್ಗ ಬಡಿಯುವುದು ಅಕ್ಷಮ್ಯ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತರನ್ನು ಮಧ್ಯರಾತ್ರಿ ಎಳೆದು ತಂದು ಜೈಲಿಗೆ ಹಾಕುತ್ತಿರುವುದು ಇವರ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಆರ್ ನಾಯಕ್ ಭೇಟಿ : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಸ್ ಆರ್ ನಾಯಕ್ ಅವರು ಇಂದು ಜೈಲಿನಲ್ಲಿರುವ ಅನ್ನದಾತರನ್ನು ಭೇಟಿ ಮಾಡಿದರು. ಬಿಜಿಎಸ್ ಆಸ್ಪತ್ರೆಯಲ್ಲಿರುವ ನೈಸ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ವೆಂಕಟಾಚಲ ಅವರ ಆರೋಗ್ಯವನ್ನು ವಿಚಾರಿಸಿದ ನಂತರ ಮಾತನಾಡಿ, ಈ ಪ್ರಕರಣದ ಕುರಿತು ಆಯೋಗ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದೆ ಎಂದರು.
ರೈತರ ಮೇಲೆ ಕೇಸ್ ಗಳ ಸರಮಾಲೆ: ನೈಸ್ ಯೋಜನೆಗೆ ಸಂಬಂಧಿಸಿದ ಮಹತ್ವದ ಸಭೆಗೆ ರೈತ ಮುಖಂಡರನ್ನೇ ಆಹ್ವಾನಿಸಿಲ್ಲ. ಅಕ್ರಮವಾಗಿ ಹೆಚ್ಚುವರಿ ಜಮೀನನ್ನು ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ. ಸುಪ್ರೀಂಕೋರ್ಟ್ ನ ಆದೇಶವನ್ನು ನೈಸ್ ಸಂಸ್ಥೆ ಗಾಳಿಗೆ ತೂರಿದೆ ಎಂದುಆರೋಪಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಸಂಘ ಸಂಸ್ಥೆಗಳ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿದ ಪೊಲೀಸರು, ಮನಬಂದಂತೆ ಹೊಡೆದಿದ್ದಾರೆ.
ರೈತರ ಮೇಲೆ ಕಾನೂನು ಭಂಗ, ಪೊಲೀಸರ ಮೇಲೆ ಹಲ್ಲೆ, ಅಕ್ರಮ ಗುಂಪು, ಕಾನೂನು ಬಾಹಿತ ಚಟುವಟಿಕೆಯಲ್ಲಿ ಭಾಗಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಮುಂತಾದ ಗಂಭೀರ ಆರೋಪ ಹೊರೆಸಿ ಭಾರತೀಯ ದಂಡ ಸಂಹಿತೆ 120/ಬಿ, 146,147,148,341,427,353,332 ಹಾಗೂ 149 ಕಲಂಗಳಡಿಯಲ್ಲಿ ಕೇಸು ದಾಖಲಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications