'ಕಲ್ಪಾಮೃತ' ತೆಂಗು ಉತ್ಪನ್ನ ಮಾರಾಟ ವ್ಯವಸ್ಥೆಗೆ ಹೊಸ ಹೆಜ್ಜೆ
ಹಾಸನ, ಆಗಸ್ಟ್ 30 : ಮಹಾಮಸ್ತಕಾಭಿಷೇಕದಲ್ಲಿ ತೆಂಗಿನ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಎಳನೀರು ಮತ್ತು ತೆಂಗಿನ ಉತ್ಪನ್ನಗಳ ವ್ಯಾಪಾರಿ ಮಳಿಗೆಗಳಿಗೆ ವಿನ್ಯಾಸವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಇದಕ್ಕೆ 'ಕಲ್ಪಾಮೃತ' ಎಂದು ಹೆಸರಿಡಲು ನಿರ್ಧರಿಸಲಾಗಿದೆ.
ತೆಂಗು ಉತ್ಪನ್ನಗಳ ಮಾರಾಟಕ್ಕೆ ಹೊಸ ರೂಪ ಕೊಡಲು ಹಾಸನ ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದೆ. ಈ ಮೂಲಕ ರೈತರಿಗೆ ನೆರವಾಗಲು ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ನಾರು ಅಭಿವೃದ್ಧಿ ಉತ್ಪನ್ನ ಸಹಕಾರಿ ಮಂಡಳಿ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ತೆಂಗು ಉತ್ಪಾದಕರ ಸಹಕಾರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ವಿನೂತನ ತೆಂಗು ಉತ್ಪನ್ನಗಳ ಮಾರಾಟ ಕೇಂದ್ರಗಳನ್ನು ತೆರೆಯಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿಯವರು ಆಸಕ್ತಿ ವಹಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹಾಗೂ ತೆಂಗು ಬೆಳೆಗಾರರ ಪ್ರತಿನಿಧಿಗಳ ಸಭೆ ನಡೆಸಿರುವ ಅವರು, ನಾರು ಅಭಿವೃದ್ಧಿ ಸಹಕಾರಿ ಮಂಡಳಿ ಸಿದ್ಧಪಡಿಸಿದ್ದ ಹೆಸರುಗಳನ್ನು ಪರಿಶೀಲಿಸಿ ಅಂತಿಮವಾಗಿ 'ಕಲ್ಪಾಮೃತ' ಎಂಬ ಹೆಸರನ್ನು ಆಯ್ಕೆ ಮಾಡಿದ್ದಾರೆ.
ಮಾರಾಟ ಮಳಿಗೆಗಳ ವಿನ್ಯಾಸದ ಬಗ್ಗೆ ಜಿಲ್ಲಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು. ಇದನ್ನು ಇನ್ನಷ್ಟು ಉತ್ತಮಪಡಿಸಲು ಅವಕಾಶವಿದ್ದು ಹಳ್ಳಿಸೊಗಡು ಹೆಚ್ಚಾಗಿ ಕಾಣುವಂತೆ ವಿನ್ಯಾಸ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಎಳನೀರಿನ ವಹಿವಾಟಿಗೆ ಆಧ್ಯತೆ : ತೆಂಗು ಬೆಳೆಗಾರರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಿ ಇಬ್ಬರಿಗೂ ಲಾಭವಾಗುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಮಧ್ಯವರ್ತಿಗಳ ಹಾವಳಿ ಇರದೆ ಮಾರಾಟ ಮಳಿಗೆಯೂ ಉಚಿತವಾಗಿ ದೊರೆಯುವುದರಿಂದ ರೈತರಿಗೆ ಹೆಚ್ಚಿನ ಆದಾಯ ದೊರೆಯುತ್ತದೆ.
ರೈತರೇ ಮಳಿಗೆ ನಿರ್ವಹಣೆ ಮಾಡುವುದರಿಂದ ಉತ್ತಮ ವಾತಾವರಣದಲ್ಲಿ ಎಳನೀರು ಸವಿಯಬಹುದಾಗಿದೆ. ಎಳನೀರು ವ್ಯಾಪಾರ ಮೊದಲ ಆಧ್ಯತೆಯಾದರೂ, ಕಲ್ಪಾಮೃತದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ನಾರಿನ ಉತ್ಪನ್ನಗಳು, ತೆಂಗಿನ ತಿನಿಸುಗಳನ್ನು ಪ್ರದರ್ಶಿಸಿ ಮಾರಾಟಕ್ಕಿಡಲು ನಿರ್ಧರಿಸಲಾಗಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications