ರೈತರ ನೆರವಿಗೆ ಅಗ್ರಿ ವಾರ್ ರೂಂ, ಜಿಲ್ಲಾವಾರು ಸಹಾಯವಾಣಿ
ಶಿವಮೊಗ್ಗ, ಮೇ 4 : ಕೋವಿಡ್-19 ನಿರ್ಬಂಧಿತ ಸಮಯದಲ್ಲಿ ರೈತ ಸಮುದಾಯಕ್ಕೆ ಕೋವಿಡ್-19 ಸೋಂಕಿನ ಕುರಿತು ಜಾಗೃತಿ ಮೂಡಿಸಲು ಹಾಗೂ ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡುವ ಸದುದ್ದೇಶದಿಂದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ವಿವಿಯ ವಿಜ್ಞಾನ ಕೇಂದ್ರದಲ್ಲಿ ಅಗ್ರಿವಾರ್ ರೂಂ ನ್ನು ಸ್ಥಾಪಿಸಿದೆ. ಜಿಲ್ಲೆಯ ರೈತ ಬಾಂಧವರು ಈ ಸಹಾಯವಾಣಿಗೆ ಉಚಿತ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿಗಳು ತಿಳಿಸಿದ್ದಾರೆ.
ಈ ಮಾಹಿತಿ ಕೇಂದ್ರದಲ್ಲಿ ವಿವಿಧ ವಿಷಯಗಳ ತಜ್ಞರು ಕಾರ್ಯನಿರ್ವಹಿಸುತ್ತಿದ್ದು, ರೈತರಿಗೆ ಸೂಕ್ತ ತಾಂತ್ರಿಕೆ ಮಾಹಿತಿಯನ್ನು ನೀಡಲಿದ್ದಾರೆ. ಅಲ್ಲದೆ ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ನೆರವಿನೊಂದಿಗೆ ರೈತರ ಕೃಷ್ಯುತ್ಪನ್ನಗಳಿಗೆ ಮಾರುಕಟ್ಟೆಯ ವ್ಯವಸ್ಥೆ ಕಲ್ಪಿಸಲು ಸಹಕರಿಸಲಿದ್ದಾರೆ. ಇದರೊಂದಿಗೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನೂ ಸಹ ರಚಿಸಲಾಗಿದೆ. ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ರೈತರು ಕೈಗೊಳ್ಳಬೇಕಾದ ಕೃಷಿ ಚಟುವಟಿಕೆಗಳು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಿದ್ದಾರೆ.
ಬೆಳೆಗಾರರ ಮದ್ಯೆ ಸಂಪರ್ಕ ಸೇತುವೆ
ಈ ಅಗ್ರಿವಾರ್ ಕೇಂದ್ರವು ಬೆಳೆಗಾರರ ಮದ್ಯೆ ಸಂಪರ್ಕ ಸೇತುವೆಯಾಗಿಯೂ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿರುವ ಅವರು, ರೈತರು ತಾವು ಬೆಳೆದ ಹಣ್ಣು, ತರಕಾರಿ, ಹೂವು ಸೇರಿದಂತೆ ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಕುರಿತು ಮಾಹಿತಿ ನೀಡಲಿದೆ. ರೈತರು ತಮ್ಮ ಬೆಳೆ ಹಾಗೂ ಜಾನುವಾರುಗಳ ರಕ್ಷಣೆ ಬಗ್ಗೆಯೂ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ತಿಂಗಳಿಗಾಗುವಷ್ಟು ದಿನಸಿ ಕೊಟ್ಟು- ಕೈಗೊಂದಿಷ್ಟು ಕಾಸು ಕೊಡಿ...
ಅಲ್ಲದೇ ಈ ಕೇಂದ್ರವು ರೈತರಿಗೆ ಕೃಷಿ ಸಂಬಂಧಿತ ವೈಜ್ಞಾನಿಕ ಮಾಹಿತಿ, ತಾಂತ್ರಿಕ ಮಾಹಿತಿ, ಸಲಹೆ, ಹಾಗೂ ಕ್ಷೇತ್ರ ಭೇಟಿ ಅಗತ್ಯಗಳಿಗೆ ಮಾರ್ಗದರ್ಶನ ಜೊತೆಗೆ ಬೀಜ, ನರ್ಸರಿಗಳು ಲಭ್ಯವಿರುವ ಮಾಹಿತಿ ನೀಡಲಿದೆ ಮಾತ್ರವಲ್ಲ ಕೃಷಿಕರಿಗೆ ಆರೋಗ್ಯ ಸೇತು ಆ್ಯಪ್ ಮನವರಿಕೆ ಮಾಡಿಕೊಡಲಿದೆ ಹಾಗೂ ಬಳಕೆಗೆ ಪ್ರೇರೇಪಿಸಲಿದೆ ಎಂದರು.
ಕೃಷಿ ಸಚಿವಾಲಯ ಮಾರ್ಗಸೂಚಿ
ಕೃಷಿ ಚಟುವಟಿಕೆ ಸಂದರ್ಭದಲ್ಲಿ ರೈತರು ಕಟ್ಟುನಿಟ್ಟಾಗಿ ಪಾಲಿಸಬೇಕಾದ ನಿರ್ದಿಷ್ಟ ನಿಯಮಗಳ ಸಂಬಂಧ ಕೃಷಿ ಸಚಿವಾಲಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರೈತರು ಕೃಷಿ ಚಟುವಟಿಕೆಗಳನ್ನು ಮಾಡುವಾಗ ಅಂತರ ಕಾಯ್ದುಕೊಂಡು ಮುಖಗವಸು ಧರಿಸಿ ಬಿತ್ತನೆ ಮಾಡಬೇಕು. ಊಟ ಮತ್ತು ವಿಶ್ರಾಂತಿಗಾಗಿ ಗದ್ದೆಯಿಂದ ಹೊರಬಂದಾಗ ಕೈಕಾಲು ಮುತ್ತು ಮುಖವನ್ನು ಸೋಪಿನಿಂದ ಸ್ವಚ್ಚವಾಗಿ ತೊಳೆಯಬೇಕು. ಭೂಮಿ ಹದಗೊಳಿಸಲು, ಬಿತ್ತನೆ ಮತ್ತು ರಸಗೊಬ್ಬರ ಬಳಕೆಗೆ ಕಾರ್ಮಿಕರ ಬಳಕೆ ಮಿತಗೊಳಿಸಿ ಯಂತ್ರೋಪಕರಣಗಳ ಬಳಕೆಯನ್ನು ಹೆಚ್ಚಿಸಬೇಕು. 1-2ಮೀ. ಅಂತರ ಕಾಯ್ದುಕೊಳ್ಳಬೇಕು. ಬಳಕೆಗೆ ಮುನ್ನ ಯಂತ್ರೋಪಕರಣಗಳನ್ನು ಸ್ವಚ್ಚಗೊಳಿಸಬೇಕು ಎಂದು ತಿಳಿಸಿದ್ದಾರೆ.
ಸ್ವಚ್ಚತಾ ನಿಯಮಗಳನ್ನು ಪಾಲಿಸಬೇಕು
ಕಳೆ ತೆಗೆಯುವಾಗ, ಕೀಟನಾಶಕ, ರಸಗೊಬ್ಬರ ಬಳಸುವಾಗ ಸ್ವಚ್ಚತಾ ನಿಯಮಗಳನ್ನು ಪಾಲಿಸಬೇಕು. ಕೀಟನಾಶಕಗಳ ಖಾಲಿ ಪ್ಯಾಕೇಟ್ಗಳು ಅಥವಾ ಡಬ್ಬಿಗಳನ್ನು ಬೆಂಕಿಗೆ ಹಾಕಬೇಕು. ಇಲ್ಲವೆ ಮಣ್ಣಿನಲ್ಲಿ ಹೂಳಬೇಕು. ದಿನದ ಕೆಲಸ ಮುಗಿದ ನಂತರ ಸ್ನಾನ ಮಾಡಬೇಕು. ಬಟ್ಟೆಗಳನ್ನು ಸೋಪಿನಿಂದ ಸ್ವಚ್ಚಗೊಳಿಸಬೇಕು. ಬೆಳೆ ಕಟಾವು, ಒಕ್ಕಲು ಮತ್ತು ಧಾನ್ಯಗಳನ್ನು ಚೀಲಕ್ಕೆ ತುಂಬುವಾಗ ಒಬ್ಬರಿಂದ ಮತ್ತೊಬ್ಬರಿಗೆ ಅಂತರ ಕಾಯ್ದುಕೊಳ್ಳಬೇಕು. ದಾಸ್ತಾನು ಮಾಡುವಂತಹ ಫಸಲುಗಳನ್ನು 48ಗಂಟೆಗಳ ಕಾಲ ಬಿಸಿಲಿನಲ್ಲಿ ಒಣಗಿಸಿ ದಾಸ್ತಾನು ಮಾಡುವಂತೆ ಅವರು ತಿಳಿಸಿದ್ದಾರೆ.
ವಿಶೇಷ ಲೇಖನ: ರೈತರಿಗೆ "ಕೊರೊನಾ ರಿಲೀಫ್ ಫಂಡ್" ಅತಿ ಅಗತ್ಯ
ಜಿಲ್ಲಾವಾರು ಸಂಪರ್ಕ ಸಂಖ್ಯೆಗಳು
ವಿವಿಯಲ್ಲಿ
ಸ್ಥಾಪಿಸಲಾಗಿರುವ
ಅಗ್ರಿವಾರ್
ರೂಂ
ಸಂಪರ್ಕ
ಸಂಖ್ಯೆ
ಮೊ.9480838967,
9480838976,
8277932600,
9448999216,
08182-267017ನ್ನು
ಬೆಳಿಗ್ಗೆ
10ರಿಂದ
ಸಂಜೆ
4ರವರೆಗೆ
ಮೊಬೈಲ್
ಮೂಲಕ
ಅಥವಾ
ಖುದ್ದಾಗಿ
ಸಂಪರ್ಕಿಸಿ
ಮಾಹಿತಿ
ಪಡೆಯಬಹುದಾಗಿದೆ.
ಜಿಲ್ಲಾ
ಮಟ್ಟದ
ಸಮನ್ವಯ
ಸಮಿತಿ
:
ಶಿವಮೊಗ್ಗ
-
ಡಾ||
ಬಿ.ಸಿ.ಹನುಮಂತಸ್ವಾಮಿ,
ಮೊ.9480838976
ಚಿತ್ರದುರ್ಗ
-
ಡಾ||
ಎಸ್.ಓಂಕಾರಪ್ಪ,
ಮೊ.9480838201
ಉಡುಪಿ
-
ಡಾ||
ಹೆಚ್.ಎಸ್.ಚೈತನ್ಯ,
ಮೊ.9480858083
ಚಿಕ್ಕಮಗಳೂರು
-
ಡಾ||
ಟಿ.ಪಿ.ಭರತ್ಕುಮಾರ್,
ಮೊ.9480838203
ದಾವಣಗೆರೆ
-
ಡಾ||
ಟಿ.ಎನ್.ದೇವರಾಜ್,
ಮೊ.9449856876
ಕೊಡಗು
-
ಡಾ||
ಸಾಜು
ಜಾರ್ಜ್,
ಮೊ.9945035707
ದಕ್ಷಿಣಕನ್ನಡ
-
ಡಾ||
ಟಿ.ಜೆ.ರಮೇಶ್,
ಮೊ.8794706468