ಅಲ್ಪಸಂಖ್ಯಾತರ ವಿವಿಗೆ ಟಿಪ್ಪು ಹೆಸರು, ರೈತರ ಬೆಂಬಲ

ಟಿಪ್ಪು ಹೆಸರಿನ ವಿಶ್ವವಿದ್ಯಾಲಯ ಸ್ಥಾಪಿಸುವುದನ್ನು ವಿರೋಧಿಸಿದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರೈತಸಂಘದ ರಾಜ್ಯ ಮುಖಂಡ ಕೆ.ಎಸ್.ನಂಜುಂಡೇಗೌಡ ಎಚ್ಚರಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಂಗಪಟ್ಟಣದಲ್ಲಿ ಉದ್ದೇಶಿತ ವಿವಿ ಸ್ಥಾಪನೆಗೆ ಕೆಲವು ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂಬ ವಿಚಾರ ತಿಳಿದು ಬಂದಿದ್ದು, ರೈತಸಂಘ ಇದನ್ನು ಸಹಿಸುವುದಿಲ್ಲ ಎಂದರು.
ಟಿಪ್ಪು ಸುಲ್ತಾನ್ ಹೆಸರಿನ ಅಲ್ಪಸಂಖ್ಯಾತ ವಿವಿಯೊಂದನ್ನು ಟಿಪ್ಪುವಿನ ಕರ್ಮಭೂಮಿ ಶ್ರೀರಂಗಪಟ್ಟಣದಲ್ಲಿ ತೆರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಸಂಘಪರಿವಾರದ ಸಂಘಟನೆಗಳು ವಿರೋಧಿಸುವುದು ಸರಿಯಲ್ಲ ಎಂದು ನಂಜುಂಡೇಗೌಡ ಕಿಡಿಕಾರಿದರು.
ಅಪ್ಪಟ ದೇಶಪ್ರೇಮಿಯಾದ ಟಿಪ್ಪುವನ್ನು ಅಲ್ಪಸಂಖ್ಯಾತ ಎಂಬ ಕಾರಣಕ್ಕೆ ಕೆಲವರು ವಿರೋಧಿಸುತ್ತಿದ್ದಾರೆ. ಕೆಲವು ಸಂಶೋಧಕರೂ ಟಿಪ್ಪು ಬಗ್ಗೆ ತಪ್ಪು ಭಾವನೆ ಬರುವಂತೆ ಬರೆದಿದ್ದಾರೆ. ಆದರೆ, ಟಿಪ್ಪು ಜಾತ್ಯತೀತ ವ್ಯಕ್ತಿಯಾಗಿದ್ದ ಎಂದು ಅವರು ಹೇಳಿದರು.
ಮೈಸೂರು ಪ್ರಾಂತ್ಯದಲ್ಲಿ ಟಿಪ್ಪು ಸುಲ್ತಾನ್ ಕೈಗೊಂಡಿರುವ ರೈತಪರ ಮತ್ತು ಜನಸಾಮಾನ್ಯರ ಪರವಾದ ಹಲವಾರು ಕಾರ್ಯಕ್ರಮಗಳು ಇಂದಿಗೂ ಉಲ್ಲೇಖನೀಯ. ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರದ ಜನ ಪರ ಆಡಳಿತಗಾರ ಅವನಾಗಿದ್ದ ಎಂದು ನಂಜುಂಡೇಗೌಡ ವಿಶ್ಲೇಷಿಸಿದರು.
ಸರ್ವಧರ್ಮ ಪ್ರೇಮಿ, ದೇಶಪ್ರೇಮಿ, ಮಹಾನ್ ದೇಶಭಕ್ತನಾದ ಟಿಪ್ಪು ಸುಲ್ತಾನ್ ಹೆಸರಿನ ವಿವಿ ಸ್ಥಾಪನೆಯಿಂದ ಹೆಚ್ಚು ಅನುಕೂಲವಾಗಲಿದ್ದು, ವಿರೋಧಕ್ಕೆ ಮನ್ನಣೆ ನೀಡದೆ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು.
ಹೂಡಿಕೆ ಸಮಾವೇಶಕ್ಕೆ ವಿರೋಧ: ಡಿಸೆಂಬರ್ 19ರಂದು ಮಡಿಕೇರಿಯಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ರೈತಸಂಘ ವಿರೋಧಿಸಲಿದೆ. ಬಿಜೆಪಿ ಸರ್ಕಾರ ಈ ಸಮಾವೇಶವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಕಾವೇರಿ ನದಿಯ ಉಗಮ ಸ್ಥಾನವಾದ ಕೊಡಗು, ಸೂಕ್ಷ್ಮವಾದ ಅರಣ್ಯಪ್ರದೇಶದಿಂದ ಆವೃತವಾದ ಪ್ರದೇಶವಾಗಿದ್ದು, ಬಂಡವಾಳ ಹೂಡಿ ಕೆಯಿಂದ ಪರಿಸರ ಹಾನಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವಾರು ನಗರಗಳಿಗೆ ಕುಡಿಯುವ ನೀರು ಮತ್ತು ಜಮೀನಿಗೆ ನೀರು ಬರುತ್ತಿರುವುದು ಕೊಡಗಿನಿಂದ. ಕೈಗಾರಿಕೆಗಳ ಸ್ಥಾಪನೆಯಿಂದ ಕಾಡು ಹಾಳಾದರೆ ಕಾವೇರಿ ಬರಿದಾಗುತ್ತದೆ ಎಂದವರು ಆತಂಕ ವ್ಯಕ್ತಪಡಿಸಿದರು.
ಮಡಿಕೇರಿ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಹಲವಾರು ಪ್ರಗತಿಪರ ಸಂಘಟನೆಗಳು, ಮುತ್ಸದ್ದಿಗಳು ವಿರೋಧ ವ್ಯಕ್ತಪಡಿಸಿದ್ದು, 19ರಂದು ಮಡಿಕೇರಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ರೈತಸಂಘ ಪಾಲ್ಗೊಳ್ಳಲಿದೆ ಎಂದವರು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications