ಬೆಂಗಳೂರು : ತರಕಾರಿ ಬೆಲೆ ಕೇಳಿ ಜನರು ಸುಸ್ತು

ಮೇ ಕೊನೆಯ ವಾರದಲ್ಲಿ ಗಗನಕ್ಕೆ ಏರಿದ ತರಕಾರಿ ಬೆಲೆ ಕೆಳಗಿಳಿಯುವ ಲಕ್ಷಣಗಳು ಕಾಣುತ್ತಿಲ್ಲ. ಮುಂಗಾರು ಮಳೆ ಭರ್ಜರಿಯಾಗಿ ಆರಂಭವಾದರೆ, ತರಕಾರಿ ಬೆಲೆಗಳು ಕಡಿಮೆ ಆಗುತ್ತವೆ ಎಂಬ ಮಾತುಗಳು ಹರಿದಾಡುತ್ತಿವೆ. ಆದ್ದರಿಂದ ವರುಣ ದೇವ ಮಾತ್ರ ತರಕಾರಿ ಬೆಲೆ ಬಿಸಿಗೆ ತಣ್ಣೀರು ಸುರಿಯಬಹುದು.
ರಾಜ್ಯದಲ್ಲಿ ಈಗಾಗಲೇ ಮಂದಗತಿಯಲ್ಲಿ ಆರಂಭವಾಗಿರುವ ಮುಂಗಾರು ಉತ್ತಮವಾಗಿ ಬಂದರೆ ಶೇ. 20 ರಷ್ಟು ತರಕಾರಿ ಬೆಲೆ ಕಡಿಮೆ ಆಗಲಿದೆ ಎನ್ನುವುದು ಹಾಪ್ ಕಾಮ್ಸ್ ಅಧಿಕಾರಿಗಳ ವಿಶ್ಲೇಷಣೆ. ಬೆಂಗಳೂರು ನಗರದ ಸುತ್ತ ಮುತ್ತಲೂ ಉತ್ತಮ ಮಳೆ ಆದರೆ, ತರಕಾರಿ ದರ ಕಡಿಮೆ ಆಗಲಿದೆ ಎನ್ನುತ್ತಾರೆ.
ಮಾರುಕಟ್ಟೆ, ಸಣ್ಣ ತರಕಾರಿ ಅಂಗಡಿಗಳು ಹಾಗೂ ಮಾಲ್ಗಳಲ್ಲಿ ತರಕಾರಿ ಬೆಲೆ ಹಾಪ್ಕಾಮ್ಸ್ಗಿಂತ ಶೇ.30 ರಷ್ಟು ಹೆಚ್ಚಳವಾಗಿದೆ. ಇದು ಕೂಡ ಗ್ರಾಹಕರ ಜೇಬಿಗೆ ಸರಿಯಾಗಿಯೇ ಕತ್ತರಿ ಹಾಕಿದೆ. ಹಾಪ್ಕಾಮ್ಸ್ ಮಳಿಗೆಗಳಲ್ಲಿ ರೈತರಿಂದ ನೇರವಾಗಿ ತರಕಾರಿ ಖರೀದಿಸಿ, ಗ್ರಾಹಕರಿಗೆ ನೀಡಲಾಗುತ್ತಿದೆ. ಆದ್ದರಿಂದ ದರ ಸ್ಪಲ್ಪ ಕಡಿಮೆ ಇದೆ.
ಹೇಗಿದೆ ತರಕಾರಿ ರೇಟು : ಎರಡು ದಿನಗಳ ಹಿಂದೆ ಟೊಮೆಟೋ ಬೆಲೆ ಕೆಜಿಗೆ 54 ರೂ ಇತ್ತು ಶುಕ್ರವಾರ 80 ರೂ. ಆಗಿದೆ. ಬೀನ್ಸ್ 100 ರೂ, ಕ್ಯಾರೆಟ್ 80 ರೂ, ಹಸಿಮೆಣಸಿನಕಾಯಿ 160 ರೂ, ಶುಂಠಿ 400 ರೂ, ಬದನೆಕಾಯಿ 60 ರೂ.ಗೆ ಮಾರಾಟವಾಗುತ್ತಿದೆ.
ಕಡಿಮೆ ದರಕ್ಕೆ ಯಾವ ತರಕಾರಿ ದೊರೆಯುತ್ತದೆ ಎಂದು ಜನರು ಪೂರ್ಣ ಮಾರುಕಟ್ಟೆ ಸುತ್ತಿದರೂ ಏನು ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾಟಿ ಟೊಮೆಟೋ ಬೆಲೆ ಕೆಜಿಗೆ 160 ರೂಪಾಯಿಯಾಗಿದೆ. ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಜೊತೆಗೆ ತರಕಾರಿ ಕೊಳ್ಳುವುದು ಜನರಿಗೆ ಹೊರೆಯಾಗಿದೆ.
ಹೆಚ್ಚಳಕ್ಕೆ ಕಾರಣ : ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ತರಕಾರಿ ಸರಬರಾಜು ಮಾಡಲು ವಾಹನಗಳ ಅಧಿಕ ಬಾಡಿಗೆ ಮುಂತಾದ ಕಾರಣಗಳಿಂದಾಗಿ ಬೆಲೆ ಹೆಚ್ಚಳವಾಗಿದೆ. ಉತ್ತಮ ಮಳೆ ಆದರೆ ಮಾತ್ರ, ತರಕಾರಿಗಳ ಬೆಲೆ ಶೇ. 20 ರಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿಗೆ ತರಕಾರಿ ಸರಬರಾಜು ಮಾಡುವ ತುಮಕೂರು, ಕೋಲಾರ, ಮೈಸೂರು ಹಾಗೂ ಬೆಂಗಳೂರಿನ ಸುತ್ತಮುತ್ತ ಪ್ರತಿ ವರ್ಷ ತರಕಾರಿ ಬೆಳೆಯುವವರ ಸಂಖ್ಯೆ ಕುಸಿಯುತ್ತಿದೆ. ಬೆಂಗಳೂರಿನ ಸುತ್ತಮುತ್ತ ತರಕಾರಿ ಬೆಳೆಯುವ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಆದ್ದರಿಂದ ಬೆಳೆ ನೀರಿನ ಕೊರತೆ ಉಂಟಾಗಿದೆ.
ತರಕಾರಿ ಬೆಲೆ ಪಟ್ಟಿ (ಕೆ.ಜಿ)
ಬೀನ್ಸ್ - 100 ರೂ.
ಟೊಮೆಟೋ - 80 ರೂ.
ಕ್ಯಾರೆಟ್ - 80 ರೂ.
ಬೀಟರೂಟ್ - 60 ರೂ.
ಬದನೆಕಾಯಿ - 60 ರೂ.
ಹೂ ಕೋಸು - 30 ರೂ.
ಶುಂಠಿ - 218 ರೂ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications