ಬೆಂಗಳೂರು : ತರಕಾರಿ ಬೆಲೆ ಕೇಳಿ ಜನರು ಸುಸ್ತು

ಮೇ ಕೊನೆಯ ವಾರದಲ್ಲಿ ಗಗನಕ್ಕೆ ಏರಿದ ತರಕಾರಿ ಬೆಲೆ ಕೆಳಗಿಳಿಯುವ ಲಕ್ಷಣಗಳು ಕಾಣುತ್ತಿಲ್ಲ. ಮುಂಗಾರು ಮಳೆ ಭರ್ಜರಿಯಾಗಿ ಆರಂಭವಾದರೆ, ತರಕಾರಿ ಬೆಲೆಗಳು ಕಡಿಮೆ ಆಗುತ್ತವೆ ಎಂಬ ಮಾತುಗಳು ಹರಿದಾಡುತ್ತಿವೆ. ಆದ್ದರಿಂದ ವರುಣ ದೇವ ಮಾತ್ರ ತರಕಾರಿ ಬೆಲೆ ಬಿಸಿಗೆ ತಣ್ಣೀರು ಸುರಿಯಬಹುದು.
ರಾಜ್ಯದಲ್ಲಿ ಈಗಾಗಲೇ ಮಂದಗತಿಯಲ್ಲಿ ಆರಂಭವಾಗಿರುವ ಮುಂಗಾರು ಉತ್ತಮವಾಗಿ ಬಂದರೆ ಶೇ. 20 ರಷ್ಟು ತರಕಾರಿ ಬೆಲೆ ಕಡಿಮೆ ಆಗಲಿದೆ ಎನ್ನುವುದು ಹಾಪ್ ಕಾಮ್ಸ್ ಅಧಿಕಾರಿಗಳ ವಿಶ್ಲೇಷಣೆ. ಬೆಂಗಳೂರು ನಗರದ ಸುತ್ತ ಮುತ್ತಲೂ ಉತ್ತಮ ಮಳೆ ಆದರೆ, ತರಕಾರಿ ದರ ಕಡಿಮೆ ಆಗಲಿದೆ ಎನ್ನುತ್ತಾರೆ.
ಮಾರುಕಟ್ಟೆ, ಸಣ್ಣ ತರಕಾರಿ ಅಂಗಡಿಗಳು ಹಾಗೂ ಮಾಲ್ಗಳಲ್ಲಿ ತರಕಾರಿ ಬೆಲೆ ಹಾಪ್ಕಾಮ್ಸ್ಗಿಂತ ಶೇ.30 ರಷ್ಟು ಹೆಚ್ಚಳವಾಗಿದೆ. ಇದು ಕೂಡ ಗ್ರಾಹಕರ ಜೇಬಿಗೆ ಸರಿಯಾಗಿಯೇ ಕತ್ತರಿ ಹಾಕಿದೆ. ಹಾಪ್ಕಾಮ್ಸ್ ಮಳಿಗೆಗಳಲ್ಲಿ ರೈತರಿಂದ ನೇರವಾಗಿ ತರಕಾರಿ ಖರೀದಿಸಿ, ಗ್ರಾಹಕರಿಗೆ ನೀಡಲಾಗುತ್ತಿದೆ. ಆದ್ದರಿಂದ ದರ ಸ್ಪಲ್ಪ ಕಡಿಮೆ ಇದೆ.
ಹೇಗಿದೆ ತರಕಾರಿ ರೇಟು : ಎರಡು ದಿನಗಳ ಹಿಂದೆ ಟೊಮೆಟೋ ಬೆಲೆ ಕೆಜಿಗೆ 54 ರೂ ಇತ್ತು ಶುಕ್ರವಾರ 80 ರೂ. ಆಗಿದೆ. ಬೀನ್ಸ್ 100 ರೂ, ಕ್ಯಾರೆಟ್ 80 ರೂ, ಹಸಿಮೆಣಸಿನಕಾಯಿ 160 ರೂ, ಶುಂಠಿ 400 ರೂ, ಬದನೆಕಾಯಿ 60 ರೂ.ಗೆ ಮಾರಾಟವಾಗುತ್ತಿದೆ.
ಕಡಿಮೆ ದರಕ್ಕೆ ಯಾವ ತರಕಾರಿ ದೊರೆಯುತ್ತದೆ ಎಂದು ಜನರು ಪೂರ್ಣ ಮಾರುಕಟ್ಟೆ ಸುತ್ತಿದರೂ ಏನು ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾಟಿ ಟೊಮೆಟೋ ಬೆಲೆ ಕೆಜಿಗೆ 160 ರೂಪಾಯಿಯಾಗಿದೆ. ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಜೊತೆಗೆ ತರಕಾರಿ ಕೊಳ್ಳುವುದು ಜನರಿಗೆ ಹೊರೆಯಾಗಿದೆ.
ಹೆಚ್ಚಳಕ್ಕೆ ಕಾರಣ : ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ತರಕಾರಿ ಸರಬರಾಜು ಮಾಡಲು ವಾಹನಗಳ ಅಧಿಕ ಬಾಡಿಗೆ ಮುಂತಾದ ಕಾರಣಗಳಿಂದಾಗಿ ಬೆಲೆ ಹೆಚ್ಚಳವಾಗಿದೆ. ಉತ್ತಮ ಮಳೆ ಆದರೆ ಮಾತ್ರ, ತರಕಾರಿಗಳ ಬೆಲೆ ಶೇ. 20 ರಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿಗೆ ತರಕಾರಿ ಸರಬರಾಜು ಮಾಡುವ ತುಮಕೂರು, ಕೋಲಾರ, ಮೈಸೂರು ಹಾಗೂ ಬೆಂಗಳೂರಿನ ಸುತ್ತಮುತ್ತ ಪ್ರತಿ ವರ್ಷ ತರಕಾರಿ ಬೆಳೆಯುವವರ ಸಂಖ್ಯೆ ಕುಸಿಯುತ್ತಿದೆ. ಬೆಂಗಳೂರಿನ ಸುತ್ತಮುತ್ತ ತರಕಾರಿ ಬೆಳೆಯುವ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಆದ್ದರಿಂದ ಬೆಳೆ ನೀರಿನ ಕೊರತೆ ಉಂಟಾಗಿದೆ.
ತರಕಾರಿ ಬೆಲೆ ಪಟ್ಟಿ (ಕೆ.ಜಿ)
ಬೀನ್ಸ್ - 100 ರೂ.
ಟೊಮೆಟೋ - 80 ರೂ.
ಕ್ಯಾರೆಟ್ - 80 ರೂ.
ಬೀಟರೂಟ್ - 60 ರೂ.
ಬದನೆಕಾಯಿ - 60 ರೂ.
ಹೂ ಕೋಸು - 30 ರೂ.
ಶುಂಠಿ - 218 ರೂ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications