ಬೆಂಗಳೂರು : ತರಕಾರಿ ಕೊಳ್ಳೋದು ಹೇಗಪ್ಪಾ?

ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಅಧಿಕವಾಗಿತ್ತು. ಜೂನ್ ಮೊದಲವಾರ ಕಡಿಮೆ ಆಗುತ್ತದೆ. ಜೂನ್ ಅಂತ್ಯದ ವೇಳೆಗೆ ಕಡಿಮೆ ಆಗುತ್ತದೆ ಎಂದು ಕಾದ ಜನರು ನಿರಾಸೆಗೊಂಡಿದ್ದಾರೆ. ಮುಂಗಾರು ಮಳೆ ಪ್ರಾರಂಭವಾದರೂ ತರಕಾರಿ ಬೆಲೆಗಳು ಮಾತ್ರ ಕಡಿಮೆ ಆಗುತ್ತಿಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗಿದ್ದು, ಆದ್ದರಿಂದ ತರಕಾರಿರ ಬೆಲೆ ಹೆಚ್ಚಾಗಿದೆ. ಮುಂಗಾರು ಮಳೆ ಆರಂಭವಾದ ತಕ್ಷಣ ಬೆಲೆ ಕಡಿಮೆ ಆಗುತ್ತದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ, ಆ ನಂಬಿಕೆ ಸುಳ್ಳಾಗಿದೆ.
ಮುಂಗಾರು ಮಳೆ ಭರ್ಜರಿಯಾಗಿ ಪ್ರಾರಂಭವಾದರೆ, ತರಕಾರಿ ಬೆಲೆ ಶೇ 20ರಷ್ಟು ಕಡಿಮೆ ಆಗುತ್ತದೆ ಎಂದು ಹಾಪ್ ಕಾಮ್ಸ್ ಅಧಿಕಾರಿಗಳು ಹೇಳಿದ್ದರು. ಸದ್ಯ ತರಕಾರಿ ಬೆಲೆ ಕೆ.ಜಿಗೆ 40 ರಿಂದ 50 ರೂ ದರದಲ್ಲಿ ದೊರೆಯುತ್ತಿದೆ. 60 80 ರೂ.ಗಳಿಗೆ ಹೋಗಿದ್ದ ತರಕಾಗಿ ಕೊಂಚ ಇಳಿಮುಖ ಕಂಡಿದೆ.
ಮಾರುಕಟ್ಟೆ, ಸಣ್ಣ ತರಕಾರಿ ಅಂಗಡಿಗಳು ಹಾಗೂ ಮಾಲ್ಗಳಲ್ಲಿ ತರಕಾರಿ ಬೆಲೆ ಹಾಪ್ಕಾಮ್ಸ್ಗಿಂತ ಶೇ.20 ರಷ್ಟು ಹೆಚ್ಚಿವೆ. ಹಾಪ್ಕಾಮ್ಸ್ ಮಳಿಗೆಗಳಲ್ಲಿ ರೈತರಿಂದ ನೇರವಾಗಿ ತರಕಾರಿ ಖರೀದಿಸಿ, ಗ್ರಾಹಕರಿಗೆ ನೀಡಲಾಗುತ್ತದೆ. ಆದ್ದರಿಂದ ದರ ಸ್ಪಲ್ಪ ಕಡಿಮೆ ಇದೆ.
ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ತರಕಾರಿ ಸರಬರಾಜು ಮಾಡಲು ವಾಹನಗಳ ಅಧಿಕ ಬಾಡಿಗೆ ಮುಂತಾದ ಕಾರಣಗಳಿಂದಾಗಿ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಉತ್ತಮವಾಗಿ ಮಳೆ ಸುರಿದರೂ ತರಕಾರಿ ಬೆಲೆಗಳಲ್ಲಿ ಅಂತಹ ಇಳಿಕೆ ಆಗುವುದು ಕಷ್ಟ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೇಗಿದೆ ತರಕಾರಿ ರೇಟು : ಶುಕ್ರವಾರ ಸಂಜೆಯ ವೇಳೆಗೆ ಟೊಮೆಟೋ ಬೆಲೆ ಕೆಜಿಗೆ 50 ರೂ ಇತ್ತು. ಬೀನ್ಸ್ 45 ರೂ, ಡಬ್ಬಲ್ ಬೀನ್ಸ್ 120 ರೂ.ಗಳಿಗೆ ಮಾರಾಟವಾಗುತ್ತಿದೆ. ಬದನೆಕಾಯಿ 35, ಶುಂಠಿ ಕೆಜಿಗೆ 192 ರೂ.ಆಗಿದೆ.
ತರಕಾರಿ ಬೆಲೆ ಪಟ್ಟಿ (ಕೆ.ಜಿ)
ಅವರೆಕಾಯಿ - 78 ರೂ.
ಬೀಟ್ ರೋಟ್ - 35 ರೂ.
ಕ್ಯಾಪ್ಸಿಕಮ್ - 67 ರೂ.
ಕ್ಯಾಪ್ಸಿಕಮ್ (ಕೆಂಪು) - 100 ರೂ.
ಹೂ ಕೋಸು - 35 ರೂ.
ಆಲೂಗೆಡ್ಡೆ - 30 ರೂ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications