ರೈತರಿಗೆ ಸುಳ್ಳು ಹೇಳಬೇಡಿ: ರಾಹುಲ್ ಗಾಂಧಿಗೆ ಮೋದಿ ಸಲಹೆ
ನವದೆಹಲಿ, ಡಿಸೆಂಬರ್ 28: ಸಾಲ ಮನ್ನಾದ ಹೆಸರಿನಲ್ಲಿ ರೈತರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ.
ಕೇಂದ್ರ ಸರ್ಕಾರ ದೇಶದಾದ್ಯಂತ ರೈತರ ಸಾಲಮನ್ನಾ ಮಾಡುವವರೆಗೂ ನರೇಂದ್ರ ಮೋದಿ ಅವರಿಗೆ ನಿದ್ದೆ ಮಾಡಲು ಅಥವಾ ವಿಶ್ರಾಂತಿ ಪಡೆಯಲು ಬಿಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ ದಿನಗಳ ಬಳಿಕ ಮೋದಿ ಈ ತಿರುಗೇಟು ನೀಡಿದ್ದಾರೆ.
'ಅದನ್ನು ಮಾಡಲು ಸಾಧ್ಯವಿಲ್ಲ ಎಂಬುದು ನಿಮಗೆ ಗೊತ್ತು. ಇದು ಚುನಾವಣೆಯಲ್ಲಿ ಗೆಲ್ಲುವ ಸಾಲುವಾಗಿಯಷ್ಟೇ ಮಾಡಿರುವುದು. ಚುನಾವಣೆಯಲ್ಲಿ ಗೆಲ್ಲಲು ನೀವು ಯುವಕರನ್ನು ಮೂರ್ಖರನ್ನಾಗಿಸುತ್ತಿದ್ದೀರಿ. ಚುನಾವಣೆಯಲ್ಲಿ ಗೆಲ್ಲಲು ರೈತರ ಬೆನ್ನಿಗೆ ಇರಿಯುತ್ತಿದ್ದೀರಿ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'ನೀಡಿದ ಭರವಸೆಯನ್ನು ಈಡೇರಿಸಲು ಸಾಧ್ಯವಾಗದೆ ಇದ್ದರೆ ರೈತರಿಗೆ ತಿಳಿಸಿ. ಅವರು ಅದನ್ನು ಒಪ್ಪಿಕೊಳ್ಳುತ್ತಾರೆ. ಸುಳ್ಳು ಹೇಳಿ ಅವರ ಜೀವದೊಂದಿಗೆ ಆಟವಾಡಬೇಡಿ' ಎಂದು ಮೋದಿ ಹೇಳಿದ್ದಾರೆ.
2008ರಲ್ಲಿಯೂ ಅವರು ಸಾಲಮನ್ನಾ ಘೋಷಣೆ ಮಾಡಿದ್ದರು. ಆಗ ರೈತರ ಸಾಲ 6 ಲಕ್ಷ ಕೋಟಿ ಇತ್ತು. 60,000 ಕೋಟಿ ಸಾಲಮನ್ನಾ ಮಾಡುವುದಾಗಿ ಪ್ರಕಟಿಸಿದರು. ಕೊನೆಗೆ 52,000 ಕೋಟಿ ಮಾತ್ರ ಪಾವತಿಸಿದರು. ಪಂಜಾಬ್ನಲ್ಲಿ ಚುನಾವಣೆಗೂ ಮುನ್ನ ಸಾಲಮನ್ನಾ ಭರವಸೆ ನೀಡಿದ್ದರು. ಆದರೆ ಏನನ್ನೂ ನೀಡಿಲ್ಲ. ಕರ್ನಾಟಕದಲ್ಲಿಯೂ ಕೇವಲ 800 ರೈತರಿಗೆ ಪ್ರಯೋಜನವಾಗಿದೆ. ಅದೂ ಟೋಕನ್ ಮಾತ್ರ ಎಂದು ಆರೋಪಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications