ರೈತರೇ.. ಕಳೆನಾಶಕಕ್ಕೆ ಯೂರಿಯಾ ಮಿಶ್ರಣ ಬೇಡ: ಕೃಷಿ ತಜ್ಞರ ಅಭಿಪ್ರಾಯ
ತೋಟ, ಹೊಲ, ಗದ್ದೆಗಳು ಮತ್ತು ಬದುಗಳಲ್ಲಿ ಕಳೆಗಿಡಗಳು ಬೆಳೆಯುತ್ತಲೇ ಇರುತ್ತವೆ. ಇವುಗಳನ್ನು ನಿಯಂತ್ರಣ ಮಾಡುವುದೇ ರೈತರಿಗೆ ದೊಡ್ಡದೊಂದು ಸಮಸ್ಯೆಯಾಗಿದೆ. ಇವುಗಳನ್ನು ಆಗಾಗ್ಗೆ ಕಡಿಯುವುದರಿಂದ ಒಂದಷ್ಟು ಗೊಬ್ಬರವಾಗುತ್ತದೆ. ಆದರೆ ಈ ಕಳೆಗಿಡಗಳನ್ನು ತೆರವುಗೊಳಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಹೆಚ್ಚಿನವರು ಕಳೆ ಸಸ್ಯಗಳನ್ನು ನಾಶ ಮಾಡಲು ಕಳೆನಾಶಕವನ್ನು ಬಳಸುತ್ತಾರೆ. ಇನ್ನು ಕೆಲವರು ಕಳೆನಾಶಕದೊಂದಿಗೆ ಯೂರಿಯಾ ಗೊಬ್ಬರವನ್ನು ಸೇರಿಸಿ ಎರಚುತ್ತಾರೆ. ಆದರೆ ಇದು ಅಷ್ಟೊಂದು ಒಳ್ಳೆಯದಲ್ಲ ಎನ್ನುವುದು ಕೃಷಿ ತಜ್ಞರ ಅಭಿಪ್ರಾಯವಾಗಿದೆ.
Recommended Video
ಕೃಷಿ ತಜ್ಞರ ಪ್ರಕಾರ, ಕಳೆಗಿಡಗಳು ಅನಗತ್ಯ ಮತ್ತು ಅನಪೇಕ್ಷಿತ ಸಸ್ಯಗಳಾಗಿದ್ದು, ಅದು ಪ್ರಯೋಜನಕಾರಿ ಬೆಳೆಗಳೊಂದಿಗೆ ಸ್ಪರ್ಧಿಸುತ್ತವೆ. ಬೆಳೆ ಉತ್ಪಾದನಾ ಚಟುವಟಿಕೆಯಲ್ಲಿ ಕಳೆ ನಿಯಂತ್ರಣಾ ಮಾಡುವುದು ರೈತರಿಗೆ ಕಷ್ಟಕರವಾಗುವುದು ಸಹಜ. ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ಪ್ರಕಾರ ಕಳೆನಾಶಕ ಬಳಕೆ ಮಾಡುವುದು ಸಾಮಾನ್ಯ.

ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಗೊಬ್ಬರ ಮಣ್ಣಿಗೆ ಸೇರುತ್ತಿದೆ
ಇತ್ತೀಚಿನ ದಿನಗಳಲ್ಲಿ ರೈತರು ಕಳೆನಾಶಕವನ್ನು ಯೂರಿಯಾ ಜೊತೆ ಮಿಶ್ರಣ ಮಾಡಿ ಎರಚುವುದು ಕಂಡುಬರುತ್ತದೆ. ಇದರಿಂದ ಯೂರಿಯಾ ಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಮಣ್ಣಿಗೆ ಸೇರಿಸಿದಂತಾಗುವುದು. ಈಗಿನ ಪರಿಸ್ಥಿತಿಯಲ್ಲಿ ರಸಗೊಬ್ಬರ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಯೂರಿಯಾ ಬಳಕೆಯಿಂದ ಬೆಳೆ ಉತ್ಪಾದನಾ ವೆಚ್ಚ ಹೆಚ್ಚಾಗುವುದರ ಜೊತೆಗೆ ಯೂರಿಯಾ ಬಳಕೆ ವ್ಯರ್ಥವಾಗುತ್ತದೆ.

ಮಣ್ಣು ಹುಳಿಯಾಗಿ ಪರಿವರ್ತಿತಗೊಳ್ಳುತ್ತದೆ
ಇನ್ನು ಅಧಿಕ ಪ್ರಮಾಣದ ಯೂರಿಯಾ ಗೊಬ್ಬರ ಬಳಕೆಯಿಂದ ಮಣ್ಣಿನಲ್ಲಿ ರಾಸಾಯನಿಕ ಗುಣಧರ್ಮಗಳು ವ್ಯತ್ಯಾಸವಾಗಿ ಮಣ್ಣು ಹುಳಿಯಾಗಿ ಪರಿವರ್ತಿತಗೊಳ್ಳುತ್ತದೆ. ಮಣ್ಣಿನಲ್ಲಿರುವ ಫಲವತ್ತತೆ ಹೆಚ್ಚಿಸುವ ಸೂಕ್ಷ್ಮಾಣು ಜೀವಿ ನಾಶವಾಗುತ್ತದೆ. ಇದಲ್ಲದೆ ಸಸ್ಯಗಳು ಬೆಳೆವಣಿಗೆ ಮಾತ್ರ ಹೆಚ್ಚಾಗಿ ಹೂವು, ಕಾಯಿ ಕಟ್ಟುವ ಪ್ರಮಾಣ ಕಡಿಮೆಯಾಗಿ ಇಳುವರಿಯಲ್ಲಿ ನಷ್ಟವಾಗುತ್ತದೆ.

ಕೀಟ ಮತ್ತು ರೋಗಗಳ ಬಾಧೆ ಹೆಚ್ಚಾಗುವುದು
ಸಸ್ಯಗಳು ಸಮೃದ್ಧಿಯಾಗಿ ಬೆಳೆದು ಮೃದುತ್ವ ಹೆಚ್ಚಾಗಿ, ಕೀಟ ಮತ್ತು ರೋಗಗಳ ಬಾಧೆ ಹೆಚ್ಚಾಗುವುದು. ಯೂರಿಯಾ ಗೊಬ್ಬರವು ಇತರೆ ರಾಸಾಯನಿಕ ಗೊಬ್ಬರಗಳಿಗಿಂತ ವೇಗವಾಗಿ ಕರಗುವುದರಿಂದ, ಬೆಳೆಗಳ ಶಿಫಾರಸ್ಸಿನ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಒದಗಿಸಿದ್ದಲ್ಲಿ ಬೆಳೆಗಳಿಗೆ ಉಪಯೋಗವಾಗದೆ ಆವಿಯಾಗುವುದು ಹಾಗೂ ನೀರಿನಲ್ಲಿ ಹರಿದು ಪೋಲಾಗುತ್ತದೆ.

ಮರಳು ಜೊತೆ ಮಿಶ್ರಣ ಮಾಡುವುದು ಒಳ್ಳೆಯದು
ಇದೆಲ್ಲ ಸಮಸ್ಯೆಗಳು ಎದುರಾಗುವುದರಿಂದಾಗಿ ರೈತರು ಕಳೆನಾಶಕವನ್ನು ಯೂರಿಯಾ ಗೊಬ್ಬರದೊಂದಿಗೆ ಮಿಶ್ರಣ ಮಾಡದೆ, ಮರಳು ಜೊತೆ ಮಿಶ್ರಣ ಮಾಡಿ ಎರಚುವುದು ಒಳ್ಳೆಯದು. ಇದರಿಂದ ಉತ್ಪಾದನೆ ಖರ್ಚು ಕಡಿಮೆಗೊಳಿಸಿ ಪರಿಣಾಮಕಾರಿಯಾಗಿ ಕಳೆನಾಶಕಗಳಿಂದ ಕಳೆ ನಿಯಂತ್ರಣ ಮಾಡಬಹುದಾಗಿದೆ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications