ಖ್ಯಾತ ಕೃಷಿ ತಜ್ಞ ಸ್ವಾಮಿನಾಥನ್ ಎಚ್ಡಿಕೆಗೆ ಕೊಟ್ಟ ಸಲಹೆ ಏನು?
ಬೆಂಗಳೂರು, ಜು.13: ದೇಶದ ಪ್ರಖ್ಯಾತ ಕೃಷಿ ತಜ್ಞ ಹಸಿರು ಕ್ರಾಂತಿ ಪಿತಾಮಹ ಎಂದು ಖ್ಯಾತರಾದ 97 ವರ್ಷದ ಎಂ.ಎಸ್. ಸ್ವಾಮಿನಾಥನ್ ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿದರು.
ಕರ್ನಾಟಕದ ಕೃಷಿ ಕ್ಷೇತ್ರಗಳ ಅಭಿವೃದ್ಧಿಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ, ಕರ್ನಾಟಕದಲ್ಲಿ ತೋಟಗಾರಿಕಾ ಬೆಳೆಗಳಿಗೆ ವಿಫುಲ ಅವಕಾಶಗಳಿರುವುದರಿಂದ ತೋಟಗಾರಿಕಾ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಯೋಜನೆಯನನ್ನು ರೂಪಿಸಬೇಕು.
ಕರ್ನಾಟಕ ಫಲವತ್ತಾದ ಕರಾವಳಿ ತೀರವನ್ನು ಹೊಂದಿರುವುದರಿಂದ ಸಮುದ್ರಾಡಳಿತ ಕೃಷಿ ವ್ಯವಸ್ಥೆಯನ್ನು ಬಲಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.. ಪ್ರತ್ಯೇಕ ತೋಟಗಾರಿಕಾ ಇಲಾಖೆಯನ್ನು ಹೊಂದಿರುವ ಮೊದಲ ರಾಜ್ಯ ಕರ್ನಾಟಕ ಎಂಬುದರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಸ್ವಾಮಿನಾಥನ್, ಮಣ್ಣು, ನೀರು ಹಾಗೂ ಜೀವವೈವಿಧ್ಯ ಸಂರಕ್ಷಣೆಯನ್ನು ಗಮನದಲ್ಲಿರಿಸಿಕೊಂಡು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಈ ನಿಟ್ಟಿನಲ್ಲಿ ಇಸ್ರೇಲಿ ಮಾದರಿ ನೀರಾವರಿ ಸಹಕಾರಿ ಎಂದು ಅಭಿಪ್ರಾಯಪಟ್ಟರು. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡುವಂತೆ ಅವರು ಸಲಹೆ ನೀಡಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರೈತರ ಸುಸ್ಥಿರ ಬದುಕಿಗಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕೃಷಿಕರನ್ನು ಆರ್ಥಿಕವಾಗಿ ಸದೃಢಗೊಳಿಸಲು ನಾಡಿನ ಕೃಷಿ ಪದ್ಧತಿ, ನೀರಾವರಿಯಲ್ಲಿ ಹಲವು ಮಾರ್ಪಾಡು ಮಾಡಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ 93 ವರ್ಷಗಳ ಹಿರಿಯರಾದ ಡಾ. ಸ್ವಾಮಿನಾಥನ್ ಅವರು ಆಗಮಿಸಿ ಮಾರ್ಗದರ್ಶನ ನೀಡಿರುವುದಕ್ಕಾಗಿ ಅವರನ್ನು ಅಭಿನಂದಿಸಿದರು.

ಶೀಘ್ರವೇ ಜಿಲ್ಲಾಮಟ್ಟದ ಕೃಷಿ ಮತ್ತು ಸಂಬಂಧಿಸಿದ ಕ್ಷೇತ್ರಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೃಷಿ ಕ್ಷೇತ್ರದ ನ್ಯೂನ್ಯತೆಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ, ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಿ.ವಿ. ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೃಷಿ ಇಲಾಖೆ ಕಾರ್ಯದರ್ಶಿ ಡಾ. ಯು.ಎಂ. ಮಹೇಶ್ವರರಾವ್ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications