ನ್ಯಾನೋ ಯೂರಿಯಾ ಮಾಡಲಿದೆ ಹೊಸ ಕೃಷಿಕ್ರಾಂತಿ: ಡಿವಿಎಸ್
ಬೆಂಗಳೂರು, ಜೂನ್ 13: ಗುಜರಾತಿನ ಕಲೋಲ್'ನಲ್ಲಿರುವ ಇಫ್ಕೋ ನ್ಯಾನೋ ಯೂರಿಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮರ್ಥ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಕರ್ನಾಟಕದತ್ತ ಪಯಣ ಬೆಳೆಸಿದೆ.
ಬೆಂಗಳೂರಿನಲ್ಲಿ ವರ್ಚ್ಯುಯಲ್ ಸಭೆ ಮೂಲಕ ಕಲೋಲ್'ನಿಂದ ಹೊರಟ ನ್ಯಾನೋ ಯೂರಿಯಾ ವಾಹನಕ್ಕೆ ಹಸಿರು ನಿಶಾನೆ ತೋರಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಜಗತ್ತಿನಲ್ಲಿಯೇ ಪ್ರಪ್ರಥಮವಾಗಿ ನ್ಯಾನೋ ಯೂರಿಯಾ ಅಭಿವೃದ್ಧಿಪಡಿಸಿರುವ ಇಫ್ಕೋ ಕಂಪನಿಯನ್ನು ಅಭಿನಂದಿಸಿದರು.
ಕರ್ನಾಟಕದಲ್ಲಿಯೂ ನ್ಯಾನೋ ಯೂರಿಯಾ ಕಾರ್ಖಾನೆ ಸ್ಥಾಪಿಸಲು ಇಫ್ಕೋ ಆಸಕ್ತಿ ತೋರಿದ್ದು ಇನ್ನು 10 ದಿನದೊಳಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಸೂಕ್ತವಾಗದ ಜಾಗವನ್ನು ಗುರುತಿಸಲಾಗುವುದು ಎಂದು ಕೇಂದ್ರ ಸಚಿವ ಸದಾನಂದ ಗೌಡ ಪ್ರಕಟಿಸಿದರು.
ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ ದೇಶದಲ್ಲಿ ಈಗಾಗಲೇ 3 ಕಡೆ ನ್ಯಾನೋ ಯೂರಿಯಾ ಘಟಕ ಸ್ಥಾಪಿಸಿದ್ದು ಇನ್ನೂ ನಾಲ್ಕು ಕಡೆ ಹೊಸ ಘಟಕಗಳನ್ನು ತೆರೆಯಲಿದೆ. ಇಫ್ಕೋ ಈ ಹಂಗಾಮಿನಲ್ಲಿ 28 ಕೋಟಿ ಬಾಟಲಿ (500 ಎಂಎಲ್) ನ್ಯಾನೋ ಯೂರಿಯಾ ಉತ್ಪಾದಿಸಲಿದೆ.

ನ್ಯಾನೋಗೊಬ್ಬರ ರೈತರಿಗೆ ವರವಾಗಲಿದೆ
ನ್ಯಾನೋಗೊಬ್ಬರ ರೈತರಿಗೆ ವರವಾಗಲಿದೆ. ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತದೆ ಉಳಿಸಿಕೊಳ್ಳಲು ಸಹಾಯಕವಾಗಲಿದೆ. ಒಂದೆಡೆ ಶೇಕಡಾ 8ರಿಂದ 15ರಷ್ಟು ಖರ್ಚು ಕಡಿಮೆಯಾಗಲಿದೆ. ಇನ್ನೊಂದೆಡೆ ಇಳುವರಿಯು 15ರಿಂದ 20 ಪ್ರತಿಶತ ಹೆಚ್ಚಾಗಲಿದೆ. ಇದರಿಂದ ದೇಶದ ರೈತರಿಗೆ ಈ ಸಲ ಸುಮಾರು 28 ಸಾವಿರ ಕೋಟಿ ಹೆಚ್ಚುವರಿ ಆದಾಯ ದೊರೆಯುವುದು ಎಂದು ಅಂದಾಜಿಸಲಾಗಿದೆ ಎಂದರು. ದೇಶದಲ್ಲಿ ಪ್ರತಿವರ್ಷ ಸರಾಸರಿ 330 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬಳಕೆಯಾಗುತ್ತದೆ. ಇದರಲ್ಲಿ ಸುಮಾರು 90 ಲಕ್ಷ ಟನ್ ಆಮದು ಮಾಡಿಕೊಳ್ಳುತ್ತೇವೆ.

ಯೂರಿಯಾ ಬಳಕೆಯಲ್ಲಿ ಶೇಕಡಾ 20ರಷ್ಟು ಕಡಿಮೆ
ನ್ಯಾನೋ ಯೂರಿಯಾ ಪ್ರವೇಶದಿಂದಾಗಿ ಈ ಸಲ ಮಾಮೂಲಿ ಯೂರಿಯಾ ಬಳಕೆಯಲ್ಲಿ ಶೇಕಡಾ 20ರಷ್ಟು ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಸುಮಾರು 16,000 ಕೋಟಿ ರೂ ಯೂರಿಯಾ ಸಬ್ಸಿಡಿ ಉಳಿತಾಯವಾಗಬಹುದು ಎಂದು ಲೆಕ್ಕಹಾಕಲಾಗಿದೆ. ಇನ್ನು ಕರ್ನಾಟದಲ್ಲಿ, ನ್ಯಾನೋ ಯುರಿಯಾ ಬಂದಿರುವುದರಿಂದ ಮಾಮೂಲಿ ಯೂರಿಯಾ ಬಳಕೆ ಸುಮಾರು 5 ಲಕ್ಷ ಟನ್ ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ ಎಂದರು.

ನಾಯಕತ್ವ ಬದಲಾವಣೆ ಇಲ್ಲ
ನಂತರ ವರದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಪ್ರತಿ ರಾಜ್ಯಕ್ಕೆ ಉಸ್ತುವಾರಿ ಇರ್ತಾರೆ. ಕೇಂದ್ರದ ವರಿಷ್ಠರ ಸಂದೇಶವನ್ನು ಅವರು ನೀಡ್ತಾರೆ. ಹಾಗೆಯೇ ನಮ್ಮ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು - ಮುಂದಿನ ಎರಡು ವರ್ಷಗಳು ಕೂಡ ಬಿಎಸ್ವೈ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

ಪೆಟ್ರೋಲ್ ದರ ಬಗ್ಗೆ ಸದಾನಂದ ಗೌಡ
ಪೆಟ್ರೋಲ್ ದರ ಏರಿಕೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸದಾನಂದ ಗೌಡರು - ಪೆಟ್ರೋಲ್ ದರ ಅಂತಾರಾಷ್ಟ್ರೀಯ ಮಟ್ಟ ಮೇಲೆ ಅವಲಂಬಿಸಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಅದರ ಮೇಲೆ ವಿವಿಧ ರೀತಿ ತೆರಿಗೆ ವಿಧಿಸಿಸುತ್ತದೆ. ಇದನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದು ಸೂಕ್ತ ಎಂಬುದು ನನ್ನ ಭಾವನೆ. ಆದರೆ ಜಿಎಸ್ಟಿ ಸ್ವಾಯತ್ತ ಸಂಸ್ಥೆ ಆಗಿದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳ ವಿತ್ತ ಸಚಿವರು ಅದರಲ್ಲಿ ಇರುತ್ತಾರೆ. ಅವರು ಅದನ್ನು ನಿರ್ಧರಿಸಬೇಕು ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications