ನ್ಯಾನೋ ಯೂರಿಯಾ ಮಾಡಲಿದೆ ಹೊಸ ಕೃಷಿಕ್ರಾಂತಿ: ಡಿವಿಎಸ್
ಬೆಂಗಳೂರು, ಜೂನ್ 13: ಗುಜರಾತಿನ ಕಲೋಲ್'ನಲ್ಲಿರುವ ಇಫ್ಕೋ ನ್ಯಾನೋ ಯೂರಿಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮರ್ಥ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಕರ್ನಾಟಕದತ್ತ ಪಯಣ ಬೆಳೆಸಿದೆ.
ಬೆಂಗಳೂರಿನಲ್ಲಿ ವರ್ಚ್ಯುಯಲ್ ಸಭೆ ಮೂಲಕ ಕಲೋಲ್'ನಿಂದ ಹೊರಟ ನ್ಯಾನೋ ಯೂರಿಯಾ ವಾಹನಕ್ಕೆ ಹಸಿರು ನಿಶಾನೆ ತೋರಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಜಗತ್ತಿನಲ್ಲಿಯೇ ಪ್ರಪ್ರಥಮವಾಗಿ ನ್ಯಾನೋ ಯೂರಿಯಾ ಅಭಿವೃದ್ಧಿಪಡಿಸಿರುವ ಇಫ್ಕೋ ಕಂಪನಿಯನ್ನು ಅಭಿನಂದಿಸಿದರು.
ಕರ್ನಾಟಕದಲ್ಲಿಯೂ ನ್ಯಾನೋ ಯೂರಿಯಾ ಕಾರ್ಖಾನೆ ಸ್ಥಾಪಿಸಲು ಇಫ್ಕೋ ಆಸಕ್ತಿ ತೋರಿದ್ದು ಇನ್ನು 10 ದಿನದೊಳಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಸೂಕ್ತವಾಗದ ಜಾಗವನ್ನು ಗುರುತಿಸಲಾಗುವುದು ಎಂದು ಕೇಂದ್ರ ಸಚಿವ ಸದಾನಂದ ಗೌಡ ಪ್ರಕಟಿಸಿದರು.
ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ ದೇಶದಲ್ಲಿ ಈಗಾಗಲೇ 3 ಕಡೆ ನ್ಯಾನೋ ಯೂರಿಯಾ ಘಟಕ ಸ್ಥಾಪಿಸಿದ್ದು ಇನ್ನೂ ನಾಲ್ಕು ಕಡೆ ಹೊಸ ಘಟಕಗಳನ್ನು ತೆರೆಯಲಿದೆ. ಇಫ್ಕೋ ಈ ಹಂಗಾಮಿನಲ್ಲಿ 28 ಕೋಟಿ ಬಾಟಲಿ (500 ಎಂಎಲ್) ನ್ಯಾನೋ ಯೂರಿಯಾ ಉತ್ಪಾದಿಸಲಿದೆ.

ನ್ಯಾನೋಗೊಬ್ಬರ ರೈತರಿಗೆ ವರವಾಗಲಿದೆ
ನ್ಯಾನೋಗೊಬ್ಬರ ರೈತರಿಗೆ ವರವಾಗಲಿದೆ. ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತದೆ ಉಳಿಸಿಕೊಳ್ಳಲು ಸಹಾಯಕವಾಗಲಿದೆ. ಒಂದೆಡೆ ಶೇಕಡಾ 8ರಿಂದ 15ರಷ್ಟು ಖರ್ಚು ಕಡಿಮೆಯಾಗಲಿದೆ. ಇನ್ನೊಂದೆಡೆ ಇಳುವರಿಯು 15ರಿಂದ 20 ಪ್ರತಿಶತ ಹೆಚ್ಚಾಗಲಿದೆ. ಇದರಿಂದ ದೇಶದ ರೈತರಿಗೆ ಈ ಸಲ ಸುಮಾರು 28 ಸಾವಿರ ಕೋಟಿ ಹೆಚ್ಚುವರಿ ಆದಾಯ ದೊರೆಯುವುದು ಎಂದು ಅಂದಾಜಿಸಲಾಗಿದೆ ಎಂದರು. ದೇಶದಲ್ಲಿ ಪ್ರತಿವರ್ಷ ಸರಾಸರಿ 330 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬಳಕೆಯಾಗುತ್ತದೆ. ಇದರಲ್ಲಿ ಸುಮಾರು 90 ಲಕ್ಷ ಟನ್ ಆಮದು ಮಾಡಿಕೊಳ್ಳುತ್ತೇವೆ.

ಯೂರಿಯಾ ಬಳಕೆಯಲ್ಲಿ ಶೇಕಡಾ 20ರಷ್ಟು ಕಡಿಮೆ
ನ್ಯಾನೋ ಯೂರಿಯಾ ಪ್ರವೇಶದಿಂದಾಗಿ ಈ ಸಲ ಮಾಮೂಲಿ ಯೂರಿಯಾ ಬಳಕೆಯಲ್ಲಿ ಶೇಕಡಾ 20ರಷ್ಟು ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಸುಮಾರು 16,000 ಕೋಟಿ ರೂ ಯೂರಿಯಾ ಸಬ್ಸಿಡಿ ಉಳಿತಾಯವಾಗಬಹುದು ಎಂದು ಲೆಕ್ಕಹಾಕಲಾಗಿದೆ. ಇನ್ನು ಕರ್ನಾಟದಲ್ಲಿ, ನ್ಯಾನೋ ಯುರಿಯಾ ಬಂದಿರುವುದರಿಂದ ಮಾಮೂಲಿ ಯೂರಿಯಾ ಬಳಕೆ ಸುಮಾರು 5 ಲಕ್ಷ ಟನ್ ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ ಎಂದರು.

ನಾಯಕತ್ವ ಬದಲಾವಣೆ ಇಲ್ಲ
ನಂತರ ವರದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಪ್ರತಿ ರಾಜ್ಯಕ್ಕೆ ಉಸ್ತುವಾರಿ ಇರ್ತಾರೆ. ಕೇಂದ್ರದ ವರಿಷ್ಠರ ಸಂದೇಶವನ್ನು ಅವರು ನೀಡ್ತಾರೆ. ಹಾಗೆಯೇ ನಮ್ಮ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು - ಮುಂದಿನ ಎರಡು ವರ್ಷಗಳು ಕೂಡ ಬಿಎಸ್ವೈ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

ಪೆಟ್ರೋಲ್ ದರ ಬಗ್ಗೆ ಸದಾನಂದ ಗೌಡ
ಪೆಟ್ರೋಲ್ ದರ ಏರಿಕೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸದಾನಂದ ಗೌಡರು - ಪೆಟ್ರೋಲ್ ದರ ಅಂತಾರಾಷ್ಟ್ರೀಯ ಮಟ್ಟ ಮೇಲೆ ಅವಲಂಬಿಸಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಅದರ ಮೇಲೆ ವಿವಿಧ ರೀತಿ ತೆರಿಗೆ ವಿಧಿಸಿಸುತ್ತದೆ. ಇದನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದು ಸೂಕ್ತ ಎಂಬುದು ನನ್ನ ಭಾವನೆ. ಆದರೆ ಜಿಎಸ್ಟಿ ಸ್ವಾಯತ್ತ ಸಂಸ್ಥೆ ಆಗಿದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳ ವಿತ್ತ ಸಚಿವರು ಅದರಲ್ಲಿ ಇರುತ್ತಾರೆ. ಅವರು ಅದನ್ನು ನಿರ್ಧರಿಸಬೇಕು ಎಂದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications