ಅ.27 ರಂದು ಮೈಸೂರು ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಮೈಸೂರು, ಅಕ್ಟೋಬರ್.26: ಮೈಸೂರಿನ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ (ಅ.27) ಚುನಾವಣೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಟಿ.ರಮೇಶ್ ಬಾಬು ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಎಪಿಎಂಸಿ ಚುನಾವಣೆ ಬಗ್ಗೆ ಮಾಹಿತಿ ನೀಡಿದ ಅವರು, ಕಚೇರಿಯಲ್ಲಿಯೇ ಬೆಳಗ್ಗೆ 10 ರಿಂದ 11ಗಂಟೆವರೆಗೆ ಅಭ್ಯರ್ಥಿಗಳ ನಾಮಪತ್ರ ಸ್ವೀಕರಿಸಲಾಗುವುದು. 11ರಿಂದ 11:30 ಕ್ಕೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಮಾಡಲಾಗುವುದು. 11:30 ರಿಂದ 12 ಗಂಟೆಗೆ ಅಭ್ಯರ್ಥಿಗಳು ನಾಮಪತ್ರ ವಾಪಸ್ಸು ಪಡೆಯಬಹುದು.
12:30 ರಿಂದ 1:30ರವರೆಗೆ ಚುನಾವಣೆ ನಡೆಯುತ್ತದೆ. 1:30 ರ ನಂತರ ಮತ ಎಣಿಕೆ ನಡೆಯಲಿದೆ. ನಂತರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದರು.

3 ನಾಮ ನಿರ್ದೇಶಿತ ಸ್ಥಾನ, 8 ಜೆಡಿಎಸ್ ಮತ್ತು ಕಾಂಗ್ರೆಸ್ ಗೆ 6 ಸ್ಥಾನಗಳಿವೆ. ಈ ಪೈಕಿ ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿದ್ದ ರಘು ಸದಸ್ಯತ್ವ ರದ್ದಾಗಿದೆ. ಹೀಗಾಗಿ ಕಾಂಗ್ರೆಸ್ ಬಲ 5 ಜೆಡಿಎಸ್ ನ 8 ಸದಸ್ಯರ ಪೈಕಿ ಹರೀಶ್ ಗೌಡ ಸಂಬಂಧಿ ಮಹೇಶ್ ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ.
ಹೀಗಾಗಿ ಕಾಂಗ್ರೆಸ್ 6, ಜೆಡಿಎಸ್ 7 ಸದಸ್ಯ ಬಲ ಹೊಂದಲಿವೆ. ಮೂವರು ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ಆಯ್ಕೆ ಮಾಡುವಾಗ ಕಾಂಗ್ರೆಸ್ ಪಕ್ಷಕ್ಕೆ ಎರಡು ಹಾಗೂ ಜೆ ಡಿಎಸ್ ಪಕ್ಷಕ್ಕೆ ಒಂದು ಸ್ಥಾನ ದೊರೆಯುವ ಸಾಧ್ಯತೆ ಇದೆ. ಹೀಗಾದ್ರೆ ಉಭಯ ಪಕ್ಷಗಳು ತಲಾ 8 ಸದಸ್ಯರ ಬಲ ಹೊಂದಲಿವೆ. ಮತ ಚಲಾವಣೆ ಆಗಿ ಸಮಬಲ ಸಾಧಿಸಿದ್ರೆ ಲಾಟರಿ ಮೂಲಕ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ ಎಂದರು.
ಚುನಾವಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಚುನಾವಣೆಯಲ್ಲಿ ಒಂದು ವೇಳೆ ಸಮಬಲ ಬಂದರೆ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಮತದಾನ ಹಾಗೂ ಏಣಿಕೆ ಕಾರ್ಯವನ್ನು ಚಿತ್ರೀಕರಣ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ತಿಳಿಸಿದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications