ಶಾರ್ಟ್ ಸರ್ಕ್ಯೂಟ್: ಲೊಕನಹಳ್ಳಿಯಲ್ಲಿ 20 ಹೆಕ್ಟೇರ್ಗೂ ಹೆಚ್ಚು ಕಬ್ಬು ಬೆಳೆ, 150ಕ್ಕೂ ಹೆಚ್ಚು ತೆಂಗಿನ ಮರಗಳು ಭಸ್ಮ
ಹನೂರು, ಜನವರಿ, 29: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ 20 ಹೆಕ್ಟೇರ್ಗೂ ಹೆಚ್ಚು ಕಬ್ಬು ಹಾಗೂ 150ಕ್ಕೂ ಹೆಚ್ಚು ತೆಂಗಿನ ಮರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಲೊಕನಹಳ್ಳಿಯಲ್ಲಿ ನಡೆದಿದೆ. ಬೆಳೆ ಹಾನಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆದು ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಲೊಕ್ಕನಹಳ್ಳಿ ಗ್ರಾಮದ ಮೇಲು ಸ್ವಾಮಿ, ರುಕ್ಮಿಣಿ, ಸತೀಶ್ ಕುಮಾರ್ ಅವರು ತಮ್ಮ ಜಮೀನುಗಳಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಬೆಳೆದು 18 ತಿಂಗಳಾಗಿದ್ದರೂ ಸಹ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯವರು ಕಬ್ಬು ಕಟಾವು ಮಾಡದೇ ಇರುವುದರಿಂದ ಈ ದುರ್ಘಟನೆ ನಡೆದಿದೆ. ನಮ್ಮ ಈ ನಷ್ಟಕ್ಕೆ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯವರೇ ಪರಿಹಾರ ನೀಡಬೇಕು. ಚಾಮರಾಜನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಅವರು ಸ್ಥಳಕ್ಕೆ ಆಗಮಿಸಿ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು. ಇಲ್ಲದಿದ್ದರೆ ಸ್ಥಳದಲ್ಲೇ ಸೀಮೆಎಣ್ಣೆ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅಹೋರಾತ್ರಿ ಪ್ರತಿಭಟನೆಯ ಎಚ್ಚರಿಕೆ
ರೈತ ಸತೀಶ್ ಕುಮಾರ್ ಮಾತನಾಡಿ, ನಾವು ಕಬ್ಬು ಬೆಳೆದು 18 ತಿಂಗಳಗಳಾಗಿವೆ. ಆದರೂ ಸಹ ಇದುವರೆಗೂ ಕಬ್ಬು ಕಟಾವು ಮಾಡಿಲ್ಲ. ಈ ಘಟನೆಗೆ ಬಣ್ಣಾರಿ ಅಮ್ಮನ ಕಾರ್ಖಾನೆಯವರೇ ನೇರ ಹೊಣೆ. ಜಮೀನಿನಲ್ಲಿದ್ದ ಹನಿ ನೀರಾವರಿ ಪೈಪ್, ಸ್ಟಾರ್ಟರ್, ಸ್ಪಿಂಕ್ಲರ್ ಪೈಪ್, ಮೋಟಾರ್ ಕೇಬಲ್ಗಳು ಸುಟ್ಟು ಹೋಗಿದ್ದು, ಸುಮಾರು 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ಕೊಡದಿದ್ದರೆ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ಕಾರ್ಖಾನೆಯವರ ನಿರ್ಲಕ್ಷ್ಯದಿಂದ ಲೊಕ್ಕನಹಳ್ಳಿ ಗ್ರಾಮದ ರೈತರ ಇಪ್ಪತ್ತಕ್ಕೂ ಹೆಚ್ಚು ಹೆಕ್ಟೇರ್ ಕಬ್ಬು ಬೆಳೆ ಬೆಂಕಿಗಾಹುತಿಯಾಗಿದೆ. ಇದನ್ನು ಖಂಡಿಸಿದ ರೈತರು ಲೋಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶಾಮಿಯಾನ ಹಾಕಿ ಪ್ರತಿಭಟಿಸುತ್ತಿದ್ದರು. ಈ ಹಿನ್ನೆಲೆ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಇದು ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ತುಂಬಾ ತೊಂದರೆ ಉಂಟಾಗಿತ್ತು. ತರಕಾರಿ ವಾಹನಗಳು, ಬಸ್ಗಳು, ದ್ವಿಚಕ್ರ ವಾಹನ, ಕಾರುಗಳು ಸುಮಾರು ಒಂದು ಕಿಲೋ ಮೀಟರ್ವರೆಗೂ ನಿಂತಿದ್ದು, ಇದರಿಂದ ಕೆಲ ಕಾಲ ವಾಹನ ಸವಾರರು ಪರದಾಡುವಂತಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications