ವಿಡಿಯೋ: ಕೆಲಸಕ್ಕೆ ಬೈ ಹೇಳಿ ಕೃಷಿಯಲ್ಲಿ ಸಾಮ್ರಾಜ್ಯ ಕಟ್ಟಿಕೊಂಡ ಪ್ರಿನ್ಸಿಪಾಲ್ ದಂಪತಿ
ಗದಗ, ಜುಲೈ 2: ಕೋವಿಡ್ ಲಾಕ್ಡೌನ್ ಸಮಯದಲ್ಲಿ ಬಹುತೇಕರು ಆರ್ಥಿಕ ಸಂಕಷ್ಟವನ್ನು ಅನುಭವಿಸಿದರು. ಅದರಲ್ಲೂ ಕೃಷಿ ಕ್ಷೇತ್ರವೂ ಲಾಕ್ಡೌನ್ ಹೊಡೆತಕ್ಕೆ ಸರಿಯಾದ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ.
Recommended Video

ಆದರೆ, ಗದಗಿನ ತೋಂಟದಾರ್ಯ ಇಂಜನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿದ್ದ ಡಾ. ಪ್ರಕಾಶ್ ಹುಬ್ಬಳ್ಳಿ ತಮ್ಮ ಸರ್ಕಾಇ ಹುದ್ದೆಗೆ ಗುಡ್ ಬೈ ಹೇಳಿ ಸಾವಯವ ಕೃಷಿಯತ್ತ ಮುಖಮಾಡಿ, ಅದರಲ್ಲಿ ಸಫಲರಾಗಿದ್ದಾರೆ.
ಸಮಾನ ಅಭಿರುಚಿ ಹೊಂದಿರುವ ಡಾ. ಪ್ರಕಾಶ್ ದಂಪತಿ, ಕಲಘಟಗಿ ತಾಲ್ಲೂಕಿನ ಹಿಂಡಸಗೇರಿ ಗ್ರಾಮದಲ್ಲಿನ 4 ಎಕರೆ ಜಮೀನಿನಲ್ಲಿ ತರಕಾರಿ ಬೆಳೆಯುವ ಮೂಲಕ ಸಾವಯವ ಬೇಸಾಯ ಪ್ರಾರಂಭಿಸಿದರು. 40 ಬಗೆಯ ದೇಶೀಯ ತರಕಾರಿ ಹಾಗೂ 15 ಬಗೆಯ ವಿದೇಶಿ ತರಕಾರಿಗಳನ್ನು ಬೆಳೆಯುತ್ತಾರೆ.

ತರಕಾರಿ ಬೆಳೆಯಲು ಎರೆಹುಳು ಗೊಬ್ಬರ, ಬೇವಿನ ಹಿಂಡಿ, ಬೇವಿನ ಎಣ್ಣೆ, ಬೇವಿನ ಅಸ್ತ್ರ, ಅಗ್ನಿ ಅಸ್ತ್ರ, ಹುಳಿ ಮಜ್ಜಿಗೆ ಮುಂತಾದವುಗಳ ಮೂಲಕ, ಗಿಡಗಳ ಪೋಷಣೆ ಮಾಡುತ್ತಿದ್ದಾರೆ.
ನೇಷರ್ ಫಸ್ಟ್ ಫಾರ್ಮ್ ಎಂಬ ತಮ್ಮದೇ ಬ್ರ್ಯಾಂಡ್ ಕಟ್ಟಿಕೊಂಡು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡುವ ಮೂಲಕ ಮಾರುಕಟ್ಟೆ ಕಂಡುಕೊಂಡಿದ್ದಾರೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ನೈಸರ್ಗಿಕ ಸಾವಯವ ವಿಧಾನದಲ್ಲಿ ಬೆಳೆದ ತರಕಾರಿಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತಾರೆ ಡಾ. ಪ್ರಕಾಶ್ ದಂಪತಿ.

ತರಕಾರಿ ಬೆಳೆದು ವರ್ಷವಿಡೀ ಆದಾಯ ಪಡೆಯುತ್ತಿರುವ ಡಾ. ಪ್ರಕಾಶ್ ಹುಬ್ಬಳ್ಳಿ ದಂಪತಿಯ ಕಾರ್ಯ ಇತರರಿಗೂ ಮಾದರಿಯಾಗಿದೆ. ಕೋವಿಡ್ ಲಾಕ್ಡೌನ್ನಿಂದ ತತ್ತರಿಸಿರುವ ರೈತರು ಈ ರೀತಿಯ ಮಾರ್ಗಗಳನ್ನು ಅನುಸರಿಸಿ ಹೆಚ್ಚಿನ ಆದಾಯ ಪಡೆಯಬಹುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications