ರೈತರಷ್ಟೇ ಅಲ್ಲ, ಶಾಸಕರೂ ಸಾಯುತ್ತಾರೆ: ಗೋಪಾಲ್ ಭಾರ್ಗವ್
ಸಗರ(ಮಧ್ಯ ಪ್ರದೇಶ), ಫೆಬ್ರವರಿ 23: "ರೈತರಷ್ಟೇ ಅಲ್ಲ, ಎಂಎಲ್ ಎ ಗಳೂ ಸಾಯುತ್ತಾರೆ, ವ್ಯಾಪಾರಿಗಳೂ ಸಾಯುತ್ತಾರೆ" ಎನ್ನುವ ಮೂಲಕ ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ ಮಧ್ಯಪ್ರದೇಶದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಗೋಪಾಲ್ ಭಾರ್ಗವ್!
ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಕೇವಲ ರೈತರಷ್ಟೇ ಅಲ್ಲ, ಶಾಸಕರು, ಸಂಸದರೂ ಸಾಯುತ್ತಾರೆ. ವ್ಯಾಪಾರದಲ್ಲಿ ನಷ್ಟವಾದರೆ ವ್ಯಾಪಾರಸ್ಥರೂ ಸಾಯುವುದಿಲ್ಲವೇ? ಪರೀಕ್ಷೆಯಲ್ಲಿ ಫೇಲಾದರೆ ವಿದ್ಯಾರ್ಥಿಗಳು ಸಾಯುವುದಿಲ್ಲವೇ? ಕಳೆದ ನಾಲ್ಕು ವರ್ಷದಲ್ಲಿ ಹತ್ತು ಶಾಸಕರು ಸತ್ತಿದ್ದಾರೆ, ಸಾವನ್ನು ಯಾವತ್ತಾದರೂ ನಿಯಂತ್ರಿಸೋಕೆ ಸಾಧ್ಯವೇ?" ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಸಾವು ಯಾರನ್ನೂ ಬಿಟ್ಟಿಲ್ಲ. ಸಾಲದಿಂದ ಪರಿತಪಿಸುತ್ತಿರುವ ರೈತರ ಬಗ್ಗೆ, ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ನನಗೆ ಖಂಡಿತ ಅನುಕಂಪ ಇದೆ. ಆದರೆ ಸಾವು ಯಾರನ್ನು ಬಿಟ್ಟಿಲ್ಲ ಹೇಳಿ? ಶಾಸಕರೇನು ಅಮರರೇ..? ಎಂದು ಪ್ರಶ್ನಿಸಿದ್ದಾರೆ ಭಾರ್ಗವ್.

ಮಧ್ಯಪ್ರದೇಶದಲ್ಲಿ ವಿವಿಧ ಕಾರಣಕ್ಕೆ ಈ ವರ್ಷವೇ ಸುಮಾರು 984 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯೊಂದು ಹೇಳಿದೆ. ಈ ವರ್ಷ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಅಲ್ಲಿನ ಬಿಜೆಪಿ ಸರ್ಕಾರಕ್ಕೆ ರೈತರ ಆತ್ಮಹತ್ಯೆ ಒಂದು ಸವಾಲಿನ ಸಂಗತಿಯಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications