ರೈತರಷ್ಟೇ ಅಲ್ಲ, ಶಾಸಕರೂ ಸಾಯುತ್ತಾರೆ: ಗೋಪಾಲ್ ಭಾರ್ಗವ್
ಸಗರ(ಮಧ್ಯ ಪ್ರದೇಶ), ಫೆಬ್ರವರಿ 23: "ರೈತರಷ್ಟೇ ಅಲ್ಲ, ಎಂಎಲ್ ಎ ಗಳೂ ಸಾಯುತ್ತಾರೆ, ವ್ಯಾಪಾರಿಗಳೂ ಸಾಯುತ್ತಾರೆ" ಎನ್ನುವ ಮೂಲಕ ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ ಮಧ್ಯಪ್ರದೇಶದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಗೋಪಾಲ್ ಭಾರ್ಗವ್!
ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಕೇವಲ ರೈತರಷ್ಟೇ ಅಲ್ಲ, ಶಾಸಕರು, ಸಂಸದರೂ ಸಾಯುತ್ತಾರೆ. ವ್ಯಾಪಾರದಲ್ಲಿ ನಷ್ಟವಾದರೆ ವ್ಯಾಪಾರಸ್ಥರೂ ಸಾಯುವುದಿಲ್ಲವೇ? ಪರೀಕ್ಷೆಯಲ್ಲಿ ಫೇಲಾದರೆ ವಿದ್ಯಾರ್ಥಿಗಳು ಸಾಯುವುದಿಲ್ಲವೇ? ಕಳೆದ ನಾಲ್ಕು ವರ್ಷದಲ್ಲಿ ಹತ್ತು ಶಾಸಕರು ಸತ್ತಿದ್ದಾರೆ, ಸಾವನ್ನು ಯಾವತ್ತಾದರೂ ನಿಯಂತ್ರಿಸೋಕೆ ಸಾಧ್ಯವೇ?" ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಸಾವು ಯಾರನ್ನೂ ಬಿಟ್ಟಿಲ್ಲ. ಸಾಲದಿಂದ ಪರಿತಪಿಸುತ್ತಿರುವ ರೈತರ ಬಗ್ಗೆ, ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ನನಗೆ ಖಂಡಿತ ಅನುಕಂಪ ಇದೆ. ಆದರೆ ಸಾವು ಯಾರನ್ನು ಬಿಟ್ಟಿಲ್ಲ ಹೇಳಿ? ಶಾಸಕರೇನು ಅಮರರೇ..? ಎಂದು ಪ್ರಶ್ನಿಸಿದ್ದಾರೆ ಭಾರ್ಗವ್.

ಮಧ್ಯಪ್ರದೇಶದಲ್ಲಿ ವಿವಿಧ ಕಾರಣಕ್ಕೆ ಈ ವರ್ಷವೇ ಸುಮಾರು 984 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯೊಂದು ಹೇಳಿದೆ. ಈ ವರ್ಷ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಅಲ್ಲಿನ ಬಿಜೆಪಿ ಸರ್ಕಾರಕ್ಕೆ ರೈತರ ಆತ್ಮಹತ್ಯೆ ಒಂದು ಸವಾಲಿನ ಸಂಗತಿಯಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications