ಮಳೆ ತಂದ ಅವಾಂತರದಿಂದ ಈರುಳ್ಳಿ ಸೇರಿ ತರಕಾರಿ ಬೆಲೆ ಗಗನಕ್ಕೆ
ಬೆಂಗಳೂರು, ನವೆಂಬರ್ 28: ಕರ್ನಾಟಕದಲ್ಲಿ ಕೆಲವೇ ತಿಂಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿದ್ದು ಬೆಲೆ ಗಗನಕ್ಕೇರಿದೆ.
"ಮಳೆಯಿಂದಾಗಿ ಈರುಳ್ಳಿ, ಟೊಮೆಟೋ ಮತ್ತು ಬಟಾಟೆಯಂಥ ದಿನ ಬಳಕೆಯ ತರಕಾರಿಗಳ ಅಲಭ್ಯತೆ ಉಂಟಾಗಿದೆ," ಎನ್ನುತ್ತಾರೆ ಹಾಪ್ ಕಾಮ್ಸ್ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಗೋಪಾಲ್ ಗೌಡ.

ಇಂದಿನ ಹಾಪ್ ಕಾಮ್ಸ್ ದರಗಳನ್ನೇ ನೋಡುವುದಾದರೆ ಈರುಳ್ಳಿ ಬೆಲೆ ಕೆಜಿ 67ರೂಪಾಯಿ ಮುಟ್ಟಿದೆ, ಟೊಮೆಟೋ ದರ 42 ರೂಪಾಯಿ ಇದೆ. ಅಲ್ಲದೆ ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಿದೆ. ಇದರ ಜತೆಗೆ ಉಳಿದ ತರಕಾರಿಗಳೂ ಸಾಮಾನ್ಯ ವರ್ಗದವರ ಕೈಗೆಟುಕದಾಗಿದೆ.
ಕಳೆದ ವಾರ ಕೇಂದ್ರ ಸರಕಾರ ಕನಿಷ್ಠ ಈರುಳ್ಳಿ ರಫ್ತು ಬೆಲೆಯನ್ನು 850ಡಾಲರ್ ಗೆ ನಿಗದಿಪಡಿಸಿದ್ದು ಇದರಿಂದ ಮುಂದಿನ 20-25 ದಿನಗಳಲ್ಲಿ ಬೆಲೆ ಇಳಿಕೆ ಆಗಬಹುದು ಎಂದು ಗೋಪಾಲ್ ಅಂದಾಜಿಸಿದ್ದಾರೆ.
ಸಾಮಾನ್ಯವಾಗಿ ಚಳಿಗಾಲದಲ್ಲಿ ಟೊಮೆಟೋ ಮತ್ತು ಈರುಳ್ಳಿ ಬೆಲೆಗಳು ಕಡಿಮೆ ಇರುತ್ತವೆ. ಆದರೆ ಮಳೆಗಾಲ ಮುಗಿಯುವ ವೇಳೆ ರಾಜ್ಯದಾದ್ಯಂತ ಸುರಿದ ಮಳೆಯಿಂದಾಗಿ ಬೆಳೆ ನಾಶ, ಕಟಾವು ಮುಂದೂಡಿಕೆಯಂಥ ಸಮಸ್ಯೆಗಳಿಂದ ಬೆಳೆಗಳ ಅಲಭ್ಯತೆ ಉಂಟಾಗಿದ್ದು ಬೆಲೆ ಏರಿಕೆಯಾಗಿದೆ.
ಮಹಾರಾಷ್ಟ್ರ, ಮಧ್ಯ ಪ್ರದೇಶ, ಬಿಹಾರ ಮತ್ತು ಗುಜರಾತ್ ಜತೆ ಕರ್ನಾಟಕವೂ ದೇಶದ ಪ್ರಮುಖ ಈರುಳ್ಳಿ ಉತ್ಪಾದಿಸುವ ರಾಜ್ಯವಾಗಿದೆ. ಹೀಗಾಗಿ ಇಲ್ಲಿನ ಇಳುವರಿ ಕೊರತೆಯ ಬಿಸಿ ದೇಶದ ಮಾರುಕಟ್ಟೆಯನ್ನೂ ತಟ್ಟಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications