ಕೃಷಿ ಕೂಲಿಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ವಿಸ್ತರಣೆ: ಸಿಎಂ ಬೊಮ್ಮಾಯಿ

ಹಾವೇರಿ, ಆಗಸ್ಟ್‌ 26: ರೈತರ ಮಕ್ಕಳೊಂದಿಗೆ ಕೃಷಿ ಕೂಲಿಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಹಾಗೂ ನೂತನ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ವಿಶೇಷವಾಗಿ 4 ಸಾವಿರ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಗ್ರಾಮೀಣ ಕುಶಲಕರ್ಮಿಗಳಿಗೆ 50 ಸಾವಿರ ರೂ.ಗಳ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಚುನಾವಣೆ ವೇಳೆ ನೀಡಿದ ಭರವಸೆಯಂತೆ ಕೆಲಸ ಮಾಡುತ್ತಿದೆ. ಕೊಟ್ಟ ಮಾತಿನಂತೆ ರಾಣೆಬೆನ್ನೂರು ಜನತೆಗೆ 24 X 7 ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಹೊಳೆನವೇರಿ ನೀರಾವರಿ ಯೋಜನೆಗಳು ಮತ್ತು ಈಗಾಗಲೇ 206 ಕೋಟಿ ರೂ. ಮಂಜೂರಾಗಿದ್ದು, ಬೃಹತ್ ನಗರೋತ್ಥಾನ ಯೋಜನೆಯಡಿ ರಾಣೆಬೆನ್ನೂರಿಗೆ 45 ಕೋಟಿ ರೂ. ಮಂಜೂರಾಗಿದೆ ಎಂದು ಹೇಳಿದರು.

ಇದಲ್ಲದೇ 75 ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು, ರಾಜ್ಯ ಬಜೆಟ್‌ನಲ್ಲಿ ಭರವಸೆ ನೀಡಿದಂತೆ ಟೆಕ್ಸ್‌ಟೈಲ್ ಪಾರ್ಕ್ ಬರಲಿದೆ. ಸುಮಾರು 5000 ಜನರಿಗೆ ಉದ್ಯೋಗ ನೀಡಲಿದ್ದು, ಈ ವರ್ಷದಿಂದ ಈ ಪಾರ್ಕ್ ಕಾರ್ಯಾರಂಭ ಮಾಡಲಿದೆ. ಈ ಭಾಗದ ಕೈಮಗ್ಗ ಮತ್ತು ಪವರ್ ಲೂಮ್‌ಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. 30 ಕೋಟಿ ವೆಚ್ಚದಲ್ಲಿ ರೇಷ್ಮೆ ಬೆಳೆ ಮಾರುಕಟ್ಟೆ ಸ್ಥಾಪಿಸಲು ಸರ್ಕಾರ ಹಣ ಮಂಜೂರು ಮಾಡಿದೆ ಎಂದು ಹೇಳಿದರು.

 1 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ

1 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ

ಹಾವೇರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು 400 ಕೋಟಿ ರೂ. ಮಂಜೂರಾಗಿದ್ದು, ಇದು ಜನವರಿಯಲ್ಲಿ ಕಾರ್ಯಾರಂಭ ಮಾಡಿದೆ. ಹಾವೇರಿ, ರಾಣೆಬೆನ್ನೂರು ಮತ್ತು ಹಂಗಲ್‌ನಲ್ಲಿ ಒಂದು ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗಿದೆ. ಇದು ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಹಲವಾರು ಲಿಫ್ಟ್ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲೇ ಜನರಿಗೆ ಅರ್ಪಿಸಲಾಗುವುದು ಎಂದು ಅವರು ಹೇಳಿದರು.

 ಕುರಿ ಸಾಕಣೆದಾರರಿಗೆ ವಿಶೇಷ ಯೋಜನೆ

ಕುರಿ ಸಾಕಣೆದಾರರಿಗೆ ವಿಶೇಷ ಯೋಜನೆ

ಇದಲ್ಲದೆ, ಕಮ್ಮಾರ, ಕುಂಬಾರ, ನೇಕಾರ, ವಿಶ್ವರ್ಮ ಸೇರಿದಂತೆ 10-15 ಸಮುದಾಯಗಳಿಗೆ ಸೇರಿದ ಕುಶಲಕರ್ಮಿಗಳಿಗೆ ₹ 50,000 ನೆರವು ನೀಡಲು ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರಲಿದೆ. ಕುರಿ ಸಾಕಣೆ ಮಾಡುವವರಿಗೆ ವಿಶೇಷ ಯೋಜನೆ ರೂಪಿಸಲಾಗುವುದು. ಹಾವೇರಿ ಜಿಲ್ಲೆಗೆ 'ಜಲ ಜೀವನ್ ಮಿಷನ್' ಅಡಿಯಲ್ಲಿ ಸರ್ಕಾರ ₹ 1,200 ಕೋಟಿ ಬಿಡುಗಡೆ ಮಾಡಿದ್ದು, ಹಾನಗಲ್ ಮತ್ತು ಹಿರೇಕೆರೂರು ತಾಲ್ಲೂಕಿನ ನೀರಾವರಿ ಕಾಮಗಾರಿಗಳನ್ನು ತಮ್ಮ ಅಧಿಕಾರಾವಧಿ ಮುಗಿಯುವ ಮೊದಲು ಪೂರ್ಣಗೊಳಿಸಿ ಉದ್ಘಾಟನೆ ಮಾಡುವುದಾಗಿ ಬೊಮ್ಮಾಯಿ ಭರವಸೆ ನೀಡಿದರು.

 ಹಾಲು ಉತ್ಪಾದನೆಯಲ್ಲಿ ಹೊಸ ಕ್ರಾಂತಿ

ಹಾಲು ಉತ್ಪಾದನೆಯಲ್ಲಿ ಹೊಸ ಕ್ರಾಂತಿ

₹100 ಕೋಟಿ ವೆಚ್ಚದ ಮೆಗಾ ಡೇರಿಗೆ ಶೀಘ್ರವೇ ಶಂಕುಸ್ಥಾಪನೆ ನಡೆಯಲಿದ್ದು, ಜಿಲ್ಲೆಯಲ್ಲಿ ಹಾಲು ಉತ್ಪಾದನೆಯಲ್ಲಿ ಹೊಸ ಕ್ರಾಂತಿಯಾಗಲಿದೆ ಎಂದ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ಹಾವೇರಿ ಜಿಲ್ಲೆಗೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜು ಮಂಜೂರಾಗಿದೆ. ರಾಣೇಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಈಗಾಗಲೇ ₹30 ಕೋಟಿ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹32 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

 ಅಭಿವೃದ್ಧಿಗೆ ಸಾರ್ವಜನಿಕರ ಅಗತ್ಯ

ಅಭಿವೃದ್ಧಿಗೆ ಸಾರ್ವಜನಿಕರ ಅಗತ್ಯ

ನವ ಕರ್ನಾಟಕ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಇದಕ್ಕೆ ಸಾರ್ವಜನಿಕರ ಅಗತ್ಯ ಎಂದು ಹೇಳಿದರು. ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಸಂಸದ ಜಿ.ಎಂ. ಸಿದ್ದೇಶ್ವರ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಅರುಣಕುಮಾರ ಗುತ್ತೂರು, ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+