ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಇಂದು ರೈತರ ಉಪವಾಸ ನಿರಶನ
ನವದೆಹಲಿ, ಡಿಸೆಂಬರ್ 14: ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಸೋಮವಾರ 19ನೇ ದಿನಕ್ಕೆ ಕಾಲಿರಿಸಿದೆ. ರೈತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೆ ನಡೆಸಿರುವ ಮಾತುಕತೆಗಳು ಫಲಪ್ರದವಾಗಿಲ್ಲ. ಹೀಗಾಗಿ ಇನ್ನೊಂದು ಸುತ್ತಿನ ಮಾತುಕತೆಯನ್ನು ಶೀಘ್ರವೇ ನಡೆಸುವುದಾಗಿ ಕೇಂದ್ರ ತಿಳಿಸಿದೆ. ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣಗಳಿಂದ ಮತ್ತಷ್ಟು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಗೆ ಸೇರಿಕೊಳ್ಳುತ್ತಿದ್ದಾರೆ.
ಪ್ರತಿಭಟನಾನಿರತ ರೈತರು ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ವಿವಿಧ ಪ್ರತಿಭಟನಾ ಸ್ಥಳಗಳಲ್ಲಿ ಉಪವಾಸ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಜತೆಗೆ ಸೋಮವಾರ ದೇಶದಾದ್ಯಂತ ಜಿಲ್ಲಾಡಳಿತ ಕಚೇರಿಗಳ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.
ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೋವಿಡ್ 19ರ ಕಾರಣದಿಂದ ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ಮೂವರು ಸದಸ್ಯರ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಲಿದೆ.

ರಾಜಸ್ಥಾನದಿಂದ ದೆಹಲಿಯೆಡೆಗೆ ಸಾವಿರಾರು ರೈತರು ಪ್ರತಿಭಟನಾ ಮೆರವಣಿಗೆ ತೆರಳುತ್ತಿದ್ದು, ಹರ್ಯಾಣದಲ್ಲಿ ರೈತರಿಗೆ ತಡೆಯೊಡ್ಡಲು ರೆವಾರಿ ಗಡಿಯಲ್ಲಿ ಭಾರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರ ಮನವಿ ಮೇರೆಗೆ ದೆಹಲಿ-ನೋಯ್ಡಾದ ಚಿಲ್ಲಾ ಗಡಿಯಲ್ಲಿನ ಪ್ರತಿಭಟನೆಯನ್ನು ತೆರವುಗೊಳಿಸಲಾಗಿದೆ. ಆದರೆ ಇದು ಭಾರತೀಯ ಕಿಸಾನ್ ಒಕ್ಕೂಟದ ನಿರ್ಧಾರ. ನಾವು ಇಲ್ಲಿಂದ ಪ್ರತಿಭಟನೆ ತೆರವುಗೊಳಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications