ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಇಂದು ರೈತರ ಉಪವಾಸ ನಿರಶನ
ನವದೆಹಲಿ, ಡಿಸೆಂಬರ್ 14: ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಸೋಮವಾರ 19ನೇ ದಿನಕ್ಕೆ ಕಾಲಿರಿಸಿದೆ. ರೈತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೆ ನಡೆಸಿರುವ ಮಾತುಕತೆಗಳು ಫಲಪ್ರದವಾಗಿಲ್ಲ. ಹೀಗಾಗಿ ಇನ್ನೊಂದು ಸುತ್ತಿನ ಮಾತುಕತೆಯನ್ನು ಶೀಘ್ರವೇ ನಡೆಸುವುದಾಗಿ ಕೇಂದ್ರ ತಿಳಿಸಿದೆ. ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣಗಳಿಂದ ಮತ್ತಷ್ಟು ಸಂಖ್ಯೆಯಲ್ಲಿ ರೈತರು ಪ್ರತಿಭಟನೆಗೆ ಸೇರಿಕೊಳ್ಳುತ್ತಿದ್ದಾರೆ.
ಪ್ರತಿಭಟನಾನಿರತ ರೈತರು ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ವಿವಿಧ ಪ್ರತಿಭಟನಾ ಸ್ಥಳಗಳಲ್ಲಿ ಉಪವಾಸ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಜತೆಗೆ ಸೋಮವಾರ ದೇಶದಾದ್ಯಂತ ಜಿಲ್ಲಾಡಳಿತ ಕಚೇರಿಗಳ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.
ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೋವಿಡ್ 19ರ ಕಾರಣದಿಂದ ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ಮೂವರು ಸದಸ್ಯರ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಲಿದೆ.

ರಾಜಸ್ಥಾನದಿಂದ ದೆಹಲಿಯೆಡೆಗೆ ಸಾವಿರಾರು ರೈತರು ಪ್ರತಿಭಟನಾ ಮೆರವಣಿಗೆ ತೆರಳುತ್ತಿದ್ದು, ಹರ್ಯಾಣದಲ್ಲಿ ರೈತರಿಗೆ ತಡೆಯೊಡ್ಡಲು ರೆವಾರಿ ಗಡಿಯಲ್ಲಿ ಭಾರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರ ಮನವಿ ಮೇರೆಗೆ ದೆಹಲಿ-ನೋಯ್ಡಾದ ಚಿಲ್ಲಾ ಗಡಿಯಲ್ಲಿನ ಪ್ರತಿಭಟನೆಯನ್ನು ತೆರವುಗೊಳಿಸಲಾಗಿದೆ. ಆದರೆ ಇದು ಭಾರತೀಯ ಕಿಸಾನ್ ಒಕ್ಕೂಟದ ನಿರ್ಧಾರ. ನಾವು ಇಲ್ಲಿಂದ ಪ್ರತಿಭಟನೆ ತೆರವುಗೊಳಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
-
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications