ಮಾತು ಉಳಿಸಿಕೊಳ್ಳಲು ಉ.ಪ್ರ. ಬಿಜೆಪಿ ಸರಕಾರಕ್ಕೆ ಬೇಕು 27 ಸಾವಿರ ಕೋಟಿ
ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲೇ ಹೇಳಲಾಗಿತ್ತು. ಈಗ ಆ ಮಾತು ಉಳಿಸಿಕೊಳ್ಳುವುದಕ್ಕೆ ರಾಜ್ಯ ಸರಕಾರದ ಮೇಲೆ 27 ಸಾವಿರ ಕೋಟಿ ರುಪಾಯಿ ಹೊರೆ ಬೀಳಲಿದೆ
ಲಖನೌ, ಮಾರ್ಚ್ 20: ಚುನಾವಣೆ ವೇಳೆ ಬಿಜೆಪಿ ಮಾತು ಕೊಟ್ಟಂತೆ ಉತ್ತರಪ್ರದೇಶ ರೈತರ ಸಾಲ ಮನ್ನಾ ಮಾಡಬೇಕು ಅಂದರೆ ಬ್ಯಾಂಕ್ ಗಳು 27,420 ಕೋಟಿ ಮನ್ನಾ ಮಾಡಬೇಕಾಗುತ್ತದೆ. ರಾಜ್ಯಕ್ಕೆ ಆರ್ಥಿಕ ಹೊರೆ ಬೀಳಲಿದೆ ಎಂದು ವರದಿಯೊಂದು ಎಚ್ಚರಿಸಿದೆ.
ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲೇ ಹೇಳಿತ್ತು. ಬಿಜೆಪಿ ಮತ್ತದರ ಮಿತ್ರಪಕ್ಷಗಳು 403 ಸಂಖ್ಯಾಬಲದ ಉತ್ತರಪ್ರದೇಶದಲ್ಲಿ 325 ಸ್ಥಾನಗಳಲ್ಲಿ ಜಯ ಗಳಿಸಿವೆ. ಎಸ್ ಬಿಐ ಬಿಡುಗಡೆ ಮಾಡಿರುವ ವರದಿ ಪ್ರಕಾರ ಒಟ್ಟು 86,241.20 ಕೋಟಿ ಕೃಷಿ ಸಾಲ ಬಾಕಿ ಇದೆ.[ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿರುಗಾಳಿ ಎಬ್ಬಿಸಿದ ಮೋದಿ 9 ಹೇಳಿಕೆ]

ಸರಾಸರಿ 1.34 ಲಕ್ಷದಂತೆ ಸಣ್ಣ ಹಾಗೂ ಮಧ್ಯಮ ಪ್ರಮಾಣ ರೈತರ ಸಾಲ ಬಾಕಿ ಇದೆ. ಒಂದು ವೇಳೆ ಸಣ್ಣ ಹಾಗೂ ಮಧ್ಯಮ ಪ್ರಮಾಣದ ರೈತರ ಎಲ್ಲ ಬ್ಯಾಂಕ್ ನ ಎಲ್ಲ ಸಾಲಗಳು ಮನ್ನಾ ಮಾಡಬೇಕು ಅಂದರೆ 27,419.40 ಕೋಟಿ ರುಪಾಯಿ ಆಗುತ್ತದೆ. ಅಂದಹಾಗೆ, 2016-17ರ ಸಾಲಿನ ಪ್ರಕಾರ ಉತ್ತರಪ್ರದೇಶದ ಒಟ್ಟು ಆದಾಯ 3,40,255.24 ಕೋಟಿ ರುಪಾಯಿ.[ಉತ್ತರಪ್ರದೇಶದಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ 10 ಕಾರಣ]
ಇನ್ನು 27,419.40 ಕೋಟಿ ರುಪಾಯಿ ಕೃಷಿ ಸಾಲ ಮನ್ನಾ ಮಾಡಿದರೆ ಒಟ್ಟು ಆದಾಯದ ಶೇ 8ರಷ್ಟು ಕಳೆದುಕೊಂಡ ಹಾಗೆ ಲೆಕ್ಕ. ಇದರಿಂದ ಬರುವ ವರ್ಷದಲ್ಲಿ ರಾಜ್ಯದ ಆರ್ಥಿಕತೆ ಮೇಲೆ ಖಂಡಿತಾ ಪರಿಣಾಮ ಆಗುತ್ತದೆ ಎಂದು ವರದಿ ತಿಳಿಸಿದೆ. ಹೀಗಾದಲ್ಲಿ ಆದಾಯ ಹೆಚ್ಚಳಕ್ಕಾಗಿ ಹೊಸ ಆಲೋಚನೆ ಮಾಡಬೇಕಾಗುತ್ತದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications