ರಾಸುಗೆ ಮೇವು ಸಿಗಲಿಲ್ಲವೆಂದು ಗುಬ್ಬಿ ತಹಸೀಲ್ದಾರ್ ನ ಬಯ್ದ ರೈತನ ಬಂಧನ
ತುಮಕೂರು, ಫೆಬ್ರವರಿ 11: ಎಮ್ಮೆಗಳಿಗಾಗಿ ಮೇವು ಕೇಳಿ ಸತ್ಯಾಗ್ರಹ ನಡೆಸುತ್ತಿದ್ದ ರೈತರೊಬ್ಬರನ್ನು, ತಹಸೀಲ್ದಾರ್ ರನ್ನು ನಿಂದಿಸಿದ ಆರೋಪದಲ್ಲಿ ಬಂಧಿಸಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ನಡೆದಿದೆ. ಮಲ್ಲಿಕಾರ್ಜುನ್ ಎಂಬುವರು ಬಂಧಿತ ರೈತ. ಗೋಶಾಲೆಗಳಲ್ಲಿ ಎಮ್ಮೆಗಳಿಗೆ ಮೇವು ನೀಡದ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
ಮಲ್ಲಿಕಾರ್ಜುನ್ ಅವರಿಗೆ ಪೆಟ್ರೋಲ್ ಬಂಕ್ ಇದೆ ಎಂಬ ಕಾರಣಾಕ್ಕಾಗಿ ಅವರಿಗೆ ಮೇವು ನೀಡಲು ಅಧಿಕಾರಿಗಳು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಮಲ್ಲಿಕಾರ್ಜುನ್, ಗುಬ್ಬಿ ತಾಲೂಕಿನ ತಹಸೀಲ್ದಾರ್ ವಿಶ್ವನಾಥ್ ಅವರಿಗೆ ದೂರವಾಣಿ ಕರೆ ಮಾಡಿ, ಬೈದಿದ್ದರು. ಏಕವಚನದಿಂದ ನಿಂದಿಸಿದ್ದರು ಎಂಬ ಕಾರಣಕ್ಕೆ ಬಂಧಿಸಲಾಗಿದೆ.[ಫೆ.13ರಂದು ಶೀಬಿ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ]

ಚೇಳೂರಿನ ನಾಡ ಕಚೇರಿ ಎದುರು ಎಮ್ಮೆಗಳ ಜೊತೆ ಬಂದು ಆ ರೈತ ಸತ್ಯಾಗ್ರಹ ನಡೆಸಿದ್ದರು. ಆದರೆ ಮಲ್ಲಿಕಾರ್ಜುನ್ ಮೇವು ಪಡೆಯಲು ಅರ್ಹರಿದ್ದರಾ ಅಥವಾ ಇಲ್ಲವಾ ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ದೂರವಾಣಿಯಲ್ಲಿ ತಹಸೀಲ್ದಾರ್ ನ ನಿಂದಿಸಿದ ಕಾರಣಕ್ಕೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications