ಕಳೆಗಟ್ಟಿದ ರೈತ ದಸರಾ ಸಂಭ್ರಮ: ಎತ್ತಿನ ಗಾಡಿ ಓಡಿಸಿದ ಜಿಟಿಡಿ, ಶಿವಶಂಕರರೆಡ್ಡಿ
ಮೈಸೂರು, ಅಕ್ಟೋಬರ್. 12: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೂರನೇ ದಿನದ ಅಂಗವಾಗಿ ಇಂದು (ಅ.12) ನಗರದ ಕೋಟೆ ಆಂಜನೇಯ ದೇವಸ್ಥಾನದ ಬಳಿ ಕೃಷಿ ಸಚಿವ ಶಿವಶಂಕರರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡರು ಎತ್ತಿನ ಗಾಡಿ ಓಡಿಸುವ ಮೂಲಕ ರೈತ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.
ರೈತ ದಸರಾ ಕಳೆಗಟ್ಟಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಕಲಾತಂಡಗಳು ನೋಡುಗರ ಮನಸೂರೆಗೊಳಿಸುತ್ತಿವೆ. ಮೆರವಣಿಗೆಯಲ್ಲಿ ಡೊಳ್ಳುಕುಣಿತ, ಪಟಲಕುಣಿತ ನಂದಿ ಕುಣಿತ, ಬೊಂಬೆ ಕುಣಿತ, ಕಂಸಾಳೆ, ಕೋಲಾಟ ಸೇರಿ ಹಲವು ಜಾನಪದ ನೃತ್ಯಗಳು ಅನಾವರಣಗೊಂಡಿದೆ. ಜೊತೆಗೆ ಕೃಷಿಗೆ ಸಂಬಂಧಿಸಿದ ಸ್ತಬ್ದ ಚಿತ್ರ ಎಲ್ಲರ ಕಣ್ಮನ ಸೆಳೆಯುತ್ತಿದೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಶಿವಶಂಕರ ರೆಡ್ಡಿ, ರೈತ ದಸರಾ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಗೆಗಳಿಗೆ ಪೂರಕವಾದ ಯೋಜನೆಗಳನ್ನ ಹೆಚ್ಚಾಗಿ ಜಾರಿಗೆ ತರುತ್ತೇವೆ. ಇನ್ನು ದಸರಾ ಪ್ರಯುಕ್ತ ಕೃಷಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.

ರೈತರ ಸಾಲನ್ನಾ ವಿಚಾರದ ಕುರಿತು ಪ್ರಸ್ತಾಪಿಸಿದ ಅವರು, ಡಿಸೆಂಬರ್ ನಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಎರಡನೇ ಹಂತದ ಸಾಲ ಮರುಪಾವತಿ ಮಾಡಲಾಗುವುದು. ರೈತರಿಗೆ ಹೊಸ ಸಾಲ ನೀಡಲು ಎಲ್ಲಾ ಸಹಕಾರಿ ಬ್ಯಾಂಕುಗಳಲ್ಲಿಯೂ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ರೈತರಿಗೂ ಹೊಸ ಸಾಲ ದೊರಕಲಿದೆ ಎಂದರು.

ಮೆರವಣಿಗೆಯಲ್ಲಿ ಅಲಂಕಾರಗೊಂಡ ಎತ್ತಿನಗಾಡಿಗಳು, ಬಂಡೂರು ಕುರಿಗಳು, ಗ್ರಾಮೀಣ ಸೊಬಗು ಸಾರುವ ಮತ್ತು ಕೃಷಿ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿಯುಳ್ಳ ಸ್ತಬ್ಧ ಚಿತ್ರಗಳು ಗ್ರಾಮೀಣ ಸೊಬಗನ್ನು ಬಿಂಬಿಸಿದವು. ಇನ್ನು ಇಂದಿನಿಂದ ಭಾನುವಾರದವರೆಗೆ ರೈತ ದಸರಾ ನಡೆಯಲಿದ್ದು, ವಸ್ತುಪ್ರದರ್ಶನ, ಗ್ರಾಮೀಣಕ್ರೀಡಾಕೂಟ, ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications