ಹಬ್ಬನಕುಪ್ಪೆ ಗ್ರಾಮದ ಬಡಕೃಷಿಕನ ಮಗಳು ಕೃಷಿ ವಿಜ್ಞಾನಿಯಾದಳು
ಮೈಸೂರು, ಜುಲೈ 29: ಕೃಷಿ ಕುಟುಂಬದಲ್ಲಿ ಹುಟ್ಟಿ, ಕೃಷಿಯಲ್ಲಿನ ಏಳು ಬೀಳುಗಳನ್ನು ಕಂಡು, ಕೃಷಿಯಲ್ಲೇ ಏನಾದರೂ ಸಾಧಿಸಬೇಕೆಂದು ಹೊರಟ ಬಡ ಕೃಷಿಕನ ಮಗಳೊಬ್ಬಳು ಕೃಷಿ ಕ್ಷೇತ್ರದ ಕೃಷಿ ಸಂಶೋಧನಾ ವಿಜ್ಞಾನಿ (ಎ.ಆರ್.ಎಸ್) ಅತ್ಯುನ್ನತ ಹುದ್ದೆಗೆ ನಡೆದ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯ ಕೃಷಿ ವಿಸ್ತರಣಾ ವಿಭಾಗದಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಹಬ್ಬನಕುಪ್ಪೆ ಗ್ರಾಮದ ರೈತ ರಾಜೇಗೌಡ-ಲಲಿತಮ್ಮ ದಂಪತಿ ಪುತ್ರಿ ಎಚ್.ಆರ್.ರಮ್ಯಾ ಸಾಧನೆಗೈದ ಯುವತಿ.
ದೇಶದ ಕೃಷಿ ವಿಸ್ತರಣಾ ವಿಭಾಗದಲ್ಲಿನ ಆರು ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಎಚ್.ಆರ್.ರಮ್ಯಾ ಮೂರನೇ ಸ್ಥಾನ ಗಳಿಸಿರುವುದು ರಾಜ್ಯಕ್ಕೆ ತಂದ ಕೀರ್ತಿಯಾಗಿದೆ. ಪ್ರಸ್ತುತ ರಮ್ಯಾ ರಾಷ್ಟ್ರೀಯ ಹೈನು ಸಂಶೋಧನಾ ಸಂಸ್ಥೆಯಲ್ಲಿ (ಎನ್.ಡಿ.ಆರ್.ಐ) ಯು.ಜಿ.ಸಿ. ಫೆಲೋಷಿಪ್ ನೊಂದಿಗೆ ಪಿಎಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಆಂಧಪ್ರದೇಶದ ಕೃಷಿ ವಿ.ವಿ.ಯಲ್ಲಿ ಜಿ.ಆರ್.ಎಫ್ ಫೆಲೋಷಿಪ್ ನೊಂದಿಗೆ ಎಂ.ಎಸ್.ಸಿ (ಅಗ್ರಿ) ಸ್ನಾತಕೋತ್ತರ ಪದವಿಯಲ್ಲಿ ಮೊದಲ ಸ್ಥಾನ ಗಳಿಸಿದ್ದರೆ, ಬೆಂಗಳೂರು ಕೃಷಿ ವಿ.ವಿ.ಯಲ್ಲಿ ಬಿ.ಎಸ್.ಸಿ (ಅಗ್ರಿ)ಯನ್ನು ಮೆರಿಟ್ ಸ್ಕಾಲರ್ಶಿಪ್ನೊಂದಿಗೆ ಪೂರೈಸಿದ್ದು, ಇದೀಗ ಕೃಷಿ ವಿಸ್ತರಣಾ ವಿಭಾಗದ ವಿಜ್ಞಾನಿಯಾಗಿ ಹೊರಹೊಮ್ಮಿದ್ದಾರೆ. ಕಡುಬಡತನದಲ್ಲಿ ಹುಟ್ಟಿಬೆಳೆದ ಇವರು, ಪ್ರಾಥಮಿಕ ಶಿಕ್ಷಣ ಪಿರಿಯಾಪಟ್ಟಣ ತಾಲೂಕು ಕಂಪ್ಲಾಪುರದ ನಾಗಾ ವಿದ್ಯಾಸಂಸ್ಥೆ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಜವಾಹರ್ ನವೋದಯ ಶಾಲೆಯಲ್ಲಿ ಪಡೆದುಕೊಂಡಿದ್ದಾರೆ. ರಂಗಭೂಮಿ, ಜಾನಪದ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಇವರಿಗೆ ಆಸಕ್ತಿ.
ಈ ಕುರಿತು ಮಾತನಾಡಿರುವ ರಮ್ಯಾ, "ಕೃಷಿ ಕುಟುಂಬದಲ್ಲೇ ನಾನು ಬೆಳೆದಿದ್ದರಿಂದ ಕೃಷಿಕರ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದೇನೆ. ಆದ್ದರಿಂದ ಇದೇ ಕ್ಷೇತ್ರವನ್ನು ಆರಿಸಿಕೊಂಡಿದ್ದೇನೆ. ಎಲ್ಲ ಹಂತದಲ್ಲೂ ಇದ್ದ ಶಿಕ್ಷಕರ-ಪೋಷಕರ ಪ್ರೇರಣೆ ಇಂತಹ ಉನ್ನತ ಹುದ್ದೆ ಪಡೆಯಲು ಸಹಕಾರಿಯಾಗಿದೆ. ಕೃಷಿಯಲ್ಲಿನ ಸಮಸ್ಯೆಗಳಾದ ಗ್ರಾಮೀಣ ಯುವಕರ ವಲಸೆ, ಮಾರುಕಟ್ಟೆ ಸೌಲಭ್ಯ-ಬೆಲೆಯ ವೈಪರೀತ್ಯ, ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಕೌಶಲ್ಯ ಈ ವಿಷಯಗಳ ಕೇಂದ್ರಿತವಾದ, ರೈತಸ್ನೇಹಿ ತಂತ್ರಜ್ಞಾನ, ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯುವ ಬಗೆಗೆ ಕೃಷಿ ಸಂಶೋಧನೆ ಕೈಗೊಂಡಿದ್ದೇನೆ. ಇದು ಕೃಷಿಕರಿಗೆ ನೆರವಾಗಲಿದೆ" ಎಂದು ತಮ್ಮ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications