ಹಬ್ಬನಕುಪ್ಪೆ ಗ್ರಾಮದ ಬಡಕೃಷಿಕನ ಮಗಳು ಕೃಷಿ ವಿಜ್ಞಾನಿಯಾದಳು
ಮೈಸೂರು, ಜುಲೈ 29: ಕೃಷಿ ಕುಟುಂಬದಲ್ಲಿ ಹುಟ್ಟಿ, ಕೃಷಿಯಲ್ಲಿನ ಏಳು ಬೀಳುಗಳನ್ನು ಕಂಡು, ಕೃಷಿಯಲ್ಲೇ ಏನಾದರೂ ಸಾಧಿಸಬೇಕೆಂದು ಹೊರಟ ಬಡ ಕೃಷಿಕನ ಮಗಳೊಬ್ಬಳು ಕೃಷಿ ಕ್ಷೇತ್ರದ ಕೃಷಿ ಸಂಶೋಧನಾ ವಿಜ್ಞಾನಿ (ಎ.ಆರ್.ಎಸ್) ಅತ್ಯುನ್ನತ ಹುದ್ದೆಗೆ ನಡೆದ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯ ಕೃಷಿ ವಿಸ್ತರಣಾ ವಿಭಾಗದಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಹಬ್ಬನಕುಪ್ಪೆ ಗ್ರಾಮದ ರೈತ ರಾಜೇಗೌಡ-ಲಲಿತಮ್ಮ ದಂಪತಿ ಪುತ್ರಿ ಎಚ್.ಆರ್.ರಮ್ಯಾ ಸಾಧನೆಗೈದ ಯುವತಿ.
ದೇಶದ ಕೃಷಿ ವಿಸ್ತರಣಾ ವಿಭಾಗದಲ್ಲಿನ ಆರು ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಎಚ್.ಆರ್.ರಮ್ಯಾ ಮೂರನೇ ಸ್ಥಾನ ಗಳಿಸಿರುವುದು ರಾಜ್ಯಕ್ಕೆ ತಂದ ಕೀರ್ತಿಯಾಗಿದೆ. ಪ್ರಸ್ತುತ ರಮ್ಯಾ ರಾಷ್ಟ್ರೀಯ ಹೈನು ಸಂಶೋಧನಾ ಸಂಸ್ಥೆಯಲ್ಲಿ (ಎನ್.ಡಿ.ಆರ್.ಐ) ಯು.ಜಿ.ಸಿ. ಫೆಲೋಷಿಪ್ ನೊಂದಿಗೆ ಪಿಎಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಆಂಧಪ್ರದೇಶದ ಕೃಷಿ ವಿ.ವಿ.ಯಲ್ಲಿ ಜಿ.ಆರ್.ಎಫ್ ಫೆಲೋಷಿಪ್ ನೊಂದಿಗೆ ಎಂ.ಎಸ್.ಸಿ (ಅಗ್ರಿ) ಸ್ನಾತಕೋತ್ತರ ಪದವಿಯಲ್ಲಿ ಮೊದಲ ಸ್ಥಾನ ಗಳಿಸಿದ್ದರೆ, ಬೆಂಗಳೂರು ಕೃಷಿ ವಿ.ವಿ.ಯಲ್ಲಿ ಬಿ.ಎಸ್.ಸಿ (ಅಗ್ರಿ)ಯನ್ನು ಮೆರಿಟ್ ಸ್ಕಾಲರ್ಶಿಪ್ನೊಂದಿಗೆ ಪೂರೈಸಿದ್ದು, ಇದೀಗ ಕೃಷಿ ವಿಸ್ತರಣಾ ವಿಭಾಗದ ವಿಜ್ಞಾನಿಯಾಗಿ ಹೊರಹೊಮ್ಮಿದ್ದಾರೆ. ಕಡುಬಡತನದಲ್ಲಿ ಹುಟ್ಟಿಬೆಳೆದ ಇವರು, ಪ್ರಾಥಮಿಕ ಶಿಕ್ಷಣ ಪಿರಿಯಾಪಟ್ಟಣ ತಾಲೂಕು ಕಂಪ್ಲಾಪುರದ ನಾಗಾ ವಿದ್ಯಾಸಂಸ್ಥೆ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಜವಾಹರ್ ನವೋದಯ ಶಾಲೆಯಲ್ಲಿ ಪಡೆದುಕೊಂಡಿದ್ದಾರೆ. ರಂಗಭೂಮಿ, ಜಾನಪದ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಇವರಿಗೆ ಆಸಕ್ತಿ.
ಈ ಕುರಿತು ಮಾತನಾಡಿರುವ ರಮ್ಯಾ, "ಕೃಷಿ ಕುಟುಂಬದಲ್ಲೇ ನಾನು ಬೆಳೆದಿದ್ದರಿಂದ ಕೃಷಿಕರ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದೇನೆ. ಆದ್ದರಿಂದ ಇದೇ ಕ್ಷೇತ್ರವನ್ನು ಆರಿಸಿಕೊಂಡಿದ್ದೇನೆ. ಎಲ್ಲ ಹಂತದಲ್ಲೂ ಇದ್ದ ಶಿಕ್ಷಕರ-ಪೋಷಕರ ಪ್ರೇರಣೆ ಇಂತಹ ಉನ್ನತ ಹುದ್ದೆ ಪಡೆಯಲು ಸಹಕಾರಿಯಾಗಿದೆ. ಕೃಷಿಯಲ್ಲಿನ ಸಮಸ್ಯೆಗಳಾದ ಗ್ರಾಮೀಣ ಯುವಕರ ವಲಸೆ, ಮಾರುಕಟ್ಟೆ ಸೌಲಭ್ಯ-ಬೆಲೆಯ ವೈಪರೀತ್ಯ, ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಕೌಶಲ್ಯ ಈ ವಿಷಯಗಳ ಕೇಂದ್ರಿತವಾದ, ರೈತಸ್ನೇಹಿ ತಂತ್ರಜ್ಞಾನ, ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯುವ ಬಗೆಗೆ ಕೃಷಿ ಸಂಶೋಧನೆ ಕೈಗೊಂಡಿದ್ದೇನೆ. ಇದು ಕೃಷಿಕರಿಗೆ ನೆರವಾಗಲಿದೆ" ಎಂದು ತಮ್ಮ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications