ಟ್ರ್ಯಾಕ್ಟರ್ ಮೆರವಣಿಗೆ: ರೈತರಿಗೆ ಡೀಸೆಲ್ ನೀಡದಂತೆ ಪೊಲೀಸರ ಸೂಚನೆ
ಘಾಜಿಪುರ್, ಜನವರಿ 25: ಟ್ರ್ಯಾಕ್ಟರ್ಗಳಿಗೆ ಡೀಸೆಲ್ ಹಾಕದಂತೆ ಪೆಟ್ರೋಲ್ ಪಂಪ್ಗಳಿಗೆ ಉತ್ತರ ಪ್ರದೇಶದ ಘಾಜಿಪುರ್ ಜಿಲ್ಲೆಯ ಪೊಲೀಸರು ನೋಟಿಸ್ ನೀಡಿದ್ದು ವಿವಾದ ಸೃಷ್ಟಿಸಿದೆ. ವಿವಾದದ ಬಳಿಕ ಪೊಲೀಸರು ನೋಟಿಸ್ ಅನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.
ಜನವರಿ 26ರಂದು ನಡೆಯುವ ಟ್ರ್ಯಾಕ್ಟರ್ ಜಾಥಾದಲ್ಲಿ ಭಾಗವಹಿಸದಂತೆ ರೈತರನ್ನು ತಡೆದು ಅವರನ್ನು ಗೃಹಬಂಧನಲ್ಲಿ ಇರಿಸಲಾಗುತ್ತಿದೆ ಎಂಬ ವರದಿಯನ್ನು ಸಮಾಜವಾದಿ ಪಕ್ಷ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದೆ.
'ಬಿಜೆಪಿ ಸರ್ಕಾರವು ಪೂರ್ವಾಂಚಲದ ರೈತರನ್ನು ಗೃಹಬಂಧನದಲ್ಲಿ ಇರಿಸುತ್ತಿದೆ. ಅವರಿಗೆ ಡೀಸೆಲ್ ನೀಡದಂತೆ ಪೆಟ್ರೋಲ್ ಪಂಪ್ಗಳನ್ನು ತಡೆಯುತ್ತಿದೆ. ಕಾರ್ಪೊರೇಟ್ಗಳ ಪ್ರಯೋಜನಕ್ಕಾಗಿ ಕುರುಡು ಸರ್ಕಾರವು ಅನ್ನದಾತರ ಮೇಲೆ ಎಲ್ಲ ರೀತಿಯ ದಬ್ಬಾಳಿಕೆಗಳನ್ನು ಮಾಡುತ್ತಿದೆ' ಎಂದು ಅದು ಆರೋಪಿಸಿದೆ.
ಇದಕ್ಕೂ ಮುನ್ನ ಘಾಜಿಪುರ ಪೊಲೀಸರು, ರೈತರ ಪಥಸಂಚಲನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ರೈತರಿಗೆ ಡೀಸೆಲ್ ನೀಡಬಾರದು ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ಗಳನ್ನು ಪೆಟ್ರೋಲ್ ಪಂಪ್ಗಳಲ್ಲಿ ಅಂಟಿಸಲಾಗಿತ್ತು. ಮುಂದೆ ಓದಿ.

ಗಣರಾಜ್ಯೋತ್ಸವದ ಬಳಿಕ ಜಾಥಾ
ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿ ಭಾಗಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಯಲಿದೆ ಅದಕ್ಕೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

250ಕಿಮೀ ಉದ್ದದ ಮೆರವಣಿಗೆ
ಘಾಜಿಪುರ ಗಡಿಯಿಂದ 50 ಕಿಮೀ, ಸಿಂಘು ಗಡಿಯಿಂದ 100 ಕಿಮೀ ಮತ್ತು ಟಿಕ್ರಿ ಗಡಿಯಿಂದ 125 ಕಿಮೀ ಉದ್ದದಷ್ಟು ದೂರ ಟ್ರ್ಯಾಕ್ಟರ್ ಮೆರವಣಿಗೆ ನಡೆಯಲಿದೆ. ಎರಡೂವರೆ ಮಿಲಿಯನ್ ಟ್ರ್ಯಾಕ್ಟರ್ಗಳು ದೆಹಲಿಗೆ ಬರಲಿವೆ. ಈ ಸಂದರ್ಭದಲ್ಲಿನ ಭದ್ರತಾ ವ್ಯವಸ್ಥೆಗಳನ್ನು ನೋಡಿಕೊಳ್ಳಲು ರೈತರು ಖಾಸಗಿ ಸಂಸ್ಥೆಯೊಂದನ್ನು ಬಳಸಿಕೊಂಡಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ರೈತರೇ ಹೊಣೆಗಾರರು
ತುರ್ತು ಪರಿಸ್ಥಿತಿ ನಿರ್ವಹಣೆಗೆ 40 ಆಂಬುಲೆನ್ಸ್ಗಳನ್ನು ಸಿದ್ಧವಾಗಿರಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸುಮಾರು 3,000 ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ. ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಮೆರವಣಿಗೆ ವೇಳೆ ಯಾವುದೇ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಘಟನೆ ನಡೆದರೆ ಅದಕ್ಕೆ ರೈತರೇ ಹೊಣೆಗಾರರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಗದ್ದಲಕ್ಕೆ ಪಾಕ್ ಪ್ರಯತ್ನ
ದೆಹಲಿಯಲ್ಲಿ ಗಣರಾಜ್ಯೋತ್ಸವ ಪಥಸಂಚಲನ ಮುಗಿದ ಬಳಿಕವೇ ರೈತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ಅವಕಾಶ ನೀಡಲಾಗಿದೆ. ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೆರವಣಿಗೆ ಆರಂಭವಾಗಲಿದೆ. ಜ. 26ರ ಮೆರವಣಿಗೆ ಸಂದರ್ಭದಲ್ಲಿ ಗದ್ದಲ ಮತ್ತು ಹಿಂಸಾಚಾರ ನಡೆಸಲು ಪಾಕಿಸ್ತಾನ ಮೂಲದ ಸುಮಾರು 308 ಟ್ವಿಟ್ಟರ್ ಖಾತೆಗಳು ಕಾರ್ಯನಿರತವಾಗಿರುವುದಾಗಿ ದೆಹಲಿಪೊಲೀಸರು ತಿಳಿಸಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications