ರಾಜ್ಯದಲ್ಲಿ ರೈತ ಆತ್ಮಹತ್ಯೆ ಪ್ರಮಾಣ ಕಡಿಮೆ: ಕೃಷಿ ಇಲಾಖೆ ವರದಿ
ಬೆಂಗಳೂರು, ಮೇ 11: ಹಲವು ಗೊಂದಲಗಳಲ್ಲಿ ಸಿಲುಕಿ ನಲುಗುತ್ತಿರುವ ಮೈತ್ರಿ ಸರ್ಕಾರಕ್ಕೆ ಸಂತಸದ ಸುದ್ದಿಯೊಂದು ದೊರೆತಿದ್ದು, ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ರೈತ ಆತ್ಮಹತ್ಯೆ ಕಡಿಮೆ ಆಗಿದೆ ಎಂಬ ವರದಿ ಬಂದಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ರಾಜ್ಯ ಕೃಷಿ ಇಲಾಖೆ ನೀಡಿರುವ ವರದಿ ಪ್ರಕಾರ ಕಳೆದ ವಾರ್ಷಿಕ ಸಾಲಿನಲ್ಲಿ 1058 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು, ಆದರೆ ಈ ವರ್ಷದಲ್ಲಿ 551 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈತ್ರಿ ಸರ್ಕಾರದ ಸಾಲ ಮನ್ನಾ ಘೋಷಣೆಯಿಂದಲೇ ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆ ಆಗಿದೆ ಎಂದು ಹೇಳಲಾಗುತ್ತಿದೆ. 2018-19 ಸಾಲಿನಲ್ಲಿ ಒಟ್ಟು 840 ರೈತ ಆತ್ಮಹತ್ಯೆ ವರದಿ ಆಗಿದ್ದವು, ಆದರೆ ತನಿಖೆ ಬಳಿಕ 551 ಆತ್ಮಹತ್ಯೆಗಳು ಮಾತ್ರ ರೈತ ಆತ್ಮಹತ್ಯೆಗಳು ಉಳಿದವು ಖಾಸಗಿ ಕಾರಣದಿಂದ ಆದವೆಂದು ವರದಿ ನೀಡಲಾಗಿತ್ತು.

ರೈತ ಸಾಲಮನ್ನಾ ಮತ್ತು ಇನ್ನಿತರೆ ಯೋಜನೆಗಳ ಮೂಲಕ ರೈತರಲ್ಲಿ ಆತ್ಮವಿಶ್ವಾಸ ತುಂಬಿಸುವ ಯತ್ನ ಮಾಡಿರುವ ಕಾರಣದಿಂದಾಗಿ ರೈತ ಆತ್ಮಹತ್ಯೆ ಕಡಿಮೆ ಆಗಿದೆ ಎಂದು ಕೃಷಿ ಇಲಾಖೆ ನಿರ್ದೇಶಕರು ಹೇಳಿದ್ದಾರೆ.
ರೈತರ ಸಾಲ ಸೂಕ್ತ ರೀತಿಯಲ್ಲಿ ಆಗಿಲ್ಲವೆಂದು ಯಡಿಯೂರಪ್ಪ, ನರೇಂದ್ರ ಮೋದಿ ಸಹ ಮೈತ್ರಿ ಸರ್ಕಾರವನ್ನು ಲೋಕಸಭಾ ಚುನಾವಣೆ ಪ್ರಚಾರ ಸಮಯದಲ್ಲಿ ತರಾಟೆಗೆ ತೆಗೆದುಕೊಂಡಿದ್ದರು, ಆದರೆ ಈಗ ಕೃಷಿ ಇಲಾಖೆಯ ವರದಿಯು ಬಿಜೆಪಿಯ ಆರೋಪಗಳನ್ನು ಎದುರಿಸಲು ಮೈತ್ರಿ ಸರ್ಕಾರಕ್ಕೆ ಶಕ್ತಿ ತುಂಬಿದೆ.
ಮಂಡ್ಯ ಚುನಾವಣೆ, ಫಲಿತಾಂಶದ ಅನಿಶ್ಚಿತತೆ, ಕಾಂಗ್ರೆಸ್-ಜೆಡಿಎಸ್ ಮುಸುಕಿನ ಗುದ್ದಾಟ, ಭಿನ್ನಮತೀಯ ಶಾಸಕರ ರಂಪಾಟ ಇವುಗಳಿಂದ ತೀವ್ರ ಹಿನ್ನಡೆ ಅನುಭವಿಸಿದ್ದ ಮೈತ್ರಿ ಸರ್ಕಾರ ಮತ್ತು ಸ್ವತಃ ಕುಮಾರಸ್ವಾಮಿ ಅವರಿಗೆ ಕೃಷಿ ಇಲಾಖೆಯ ಈ ವರದಿ ಸ್ಥೈರ್ಯ ತುಂಬುವುದರಲ್ಲಿ ಅನುಮಾನವಿಲ್ಲ.
ಆದರೆ ಕೃಷಿ ಇಲಾಖೆಯ ಈ ವರದಿ ಬಗ್ಗೆ ಕೆಲವರು ವಿರೋಧವನ್ನೂ ಈಗಾಗಲೇ ಕೆಲವರು ವ್ಯಕ್ತಪಡಿಸಿದ್ದಾರೆ, ಸರ್ಕಾರವು ಪ್ರಭಾವ ಬೀರಿ ತಿರುಚಿದ ವರದಿ ಪ್ರಕಟಿಸಿದೆ ಎಂದು ಕೆಲವರು ಆರೋಪಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications