ಮೆರವಣಿಗೆ ವೇಳೆ ರೈತ ಆತ್ಮಹತ್ಯೆ: ಕೇಜ್ರಿವಾಲ್ ಗೆ ಛೀಮಾರಿ

ನವದೆಹಲಿ, ಏ. 22: ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆ ವಿರೋಧಿಸಿ ಬುಧವಾರ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವಿವಾದಕ್ಕೆ ಕಾರಣವಾಗಿದೆ. ಪ್ರತಿಭಟನೆ ವೇಳೆಯೇ ರೈತ ಗಜೇಂದ್ರ ಸಿಂಗ್ ಮರಕ್ಕೆ ನೇಣು ಹಾಕಿಕೊಂಡು ಆತ್ಮತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ಜಂತರ್-ಮಂತರ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದ ವೇಳೆ ಗಜೇಂದ್ರ ಸಿಂಗ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಎಚ್ಚೆತ್ತುಕೊಂಡ ಆಪ್ ಕಾರ್ಯಕರ್ತರು ಆ ರೈತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.[ಭೂ ಸ್ವಾಧೀನ ಕಾಯ್ದೆ : ತಿರುಗೇಟು ಕೊಡಲು ಬಿಜೆಪಿ ಸಿದ್ಧ]

aap

ಅತ್ತ ರೈತ ಆತ್ಮಹತ್ಯೆಗೆ ಶರಣಾಗಿದ್ದರೂ ಇತ್ತ ಆಮ್ ಆದ್ಮಿ ನಾಯಕರ ಭಾಷಣ ಜೋರಾಗೆ ನಡೆದಿತ್ತು. ಇದರಿಂದ ಕೆರಳಿದ ನಾಗರೀಕರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಟ್ವಿಟ್ಟರ್ ಮತ್ತು ಫೇಸ್ ಬುಕ್ ನಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಅತ್ತ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಸಹ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಾರ್ಟಿಯನ್ನು ತರಾಟೆಗೆ ತೆಗೆದುಕೊಳ್ಳಲು ಆರಂಭಿಸಿವೆ. ದೆಹಲಿ ಪೊಲೀಸರ ಮೇಲೂ ಆರೋಪಗಳ ಸುರಿಮಳೆ ಶುರುವಾಗಿದ್ದು ಪ್ರಕರಣ ಯಾವ ಹಂತಕ್ಕೆ ತಲುಪಬಹುದು ಎಂಬುದನ್ನು ಕಾದು ನೋಡಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+