ಬ್ಯಾಂಕ್‌ನಿಂದ ನೋಟಿಸ್, ಏನು ಮಾಡಬೇಕು ಎಂದು ಸಿಎಂಗೆ ರೈತನ ಪತ್ರ

Recommended Video

      ಬ್ಯಾಂಕ್‌ನಿಂದ ನೋಟಿಸ್, ಏನು ಮಾಡಬೇಕು ಎಂದು ಸಿಎಂಗೆ ರೈತನ ಪತ್ರ | Oneindia Kannada

      ಕೊಪ್ಪಳ, ಡಿಸೆಂಬರ್ 7: ರಾಜ್ಯ ಸರ್ಕಾರವು ರೈತರ ಕೃಷಿ ಸಾಲ ಮನ್ನಾ ಘೋಷಿಸಿದರೂ ಕೂಡ ಇದುವರೆಗೆ ಸಾಲಮನ್ನಾ ಆಗಿಲ್ಲ, ರೈತರಿಗೆ ಬ್ಯಾಂಕ್‌ಗಳಿಂದ, ಸೊಸೈಟಿಗಳಿಂದ ನೋಟಿಸ್ ಬರುವುದು ಕೂಡ ತಪ್ಪಿಲ್ಲ.

      ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಬ್ಯಾಂಕ್‌ಗಳು ಒಂದೊಮ್ಮೆ ರೈತರಿಗೆ ನೋಟಿಸ್ ಕಳುಹಿಸಿದರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಿದ್ದರು. ಅದ್ಯಾವುದಕ್ಕೂ ತಲೆ ಕೆಡೆಸಿಕೊಳ್ಳದ ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಕಳುಹಿಸುತ್ತಲೇ ಇದ್ದು ರೈತರು ಕಂಗಾಲಾಗುವಂತೆ ಮಾಡಿದ್ದಾರೆ.

      ಕೊಪ್ಪಳ ಜಿಲ್ಲೆಯ ರೈತನೊಬ್ಬ ಸಾಲ ಮರುಪಾವತಿಗೆ ಮೊಬೈಲ್‌ಗೆ ಸಂದೇಶ ಬಂದ ಹಿನ್ನೆಲೆಯಲ್ಲಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

      ಯಮನೂರಪ್ಪ ಮೇಟಿ ಎನ್ನುವ ರೈತ ಸಿಎಂಗೆ ಪತ್ರ ಬರೆದಿದ್ದಾರೆ, ನೀವು ಬ್ಯಾಂಕ್‌ಗಳಿಗೆ ಸೂಚನೆ ಕೊಟ್ಟಿದ್ದೀರಿ, ನಮಗೂ ಭರವಸೆ ನೀಡಿದ್ದೀರಿ ಆದರೂ ಸಾಲ ಮರುಪಾವತಿಸಿ ಎಂದು ಸಂದೇಶ ಬರುತ್ತಿದ್ದು, ಏನು ಮಾಡಬೇಕು ಎಂದು ತೋಚುತ್ತಿಲ್ಲ, ಹಲವು ವರ್ಷಗಳಿಂದ ಸರಿಯಾಗಿ ಮಳೆಯಾಗಿಲ್ಲ, ಉತ್ತಮ ಬೆಳೆಯೂ ಇಲ್ಲ ಏನು ಮಾಡಬೇಕು ಎಂದು ತೋಚುತ್ತಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.

      ರೈತ ಆಂಧ್ರ ಬ್ಯಾಂಕ್‌ನಲ್ಲಿ 2 ಲಕ್ಷ ಸಾಲ

      ರೈತ ಆಂಧ್ರ ಬ್ಯಾಂಕ್‌ನಲ್ಲಿ 2 ಲಕ್ಷ ಸಾಲ

      ರೈತ ಯಮನೂರಪ್ಪ ಕಳೆದ 1 ವರ್ಷದ ಹಿಂದೆ ಆಂಧ್ರ ಬ್ಯಾಂಕಿನಲ್ಲಿ 1 ಲಕ್ಷ 70 ಸಾವಿರ ಬೆಳೆ ಸಾಲ ಮಾಡಿದ್ದರು. ಇದೇ ತಿಂಗಳು 20ರೊಳಗೆ ಸಾಲ ಮರುಪಾವತಿ ಮಾಡಿ ನವೀಕರಣ ಮಾಡಿ ಎಂದು ಅವರ ಮೊಬೈಲ್ ಗೆ ಬ್ಯಾಂಕ್ ನಿಂದ ಸಂದೇಶ ಬಂದಿದೆ ಇದರಿಂದ ರೈತರಿಗೆ ಬೇಸರ ಉಂಟಾಗಿದೆ.

      ದಯಾಮರಣ ಕರುಣಿಸಿ ಎಂದು ಪತ್ರ

      ದಯಾಮರಣ ಕರುಣಿಸಿ ಎಂದು ಪತ್ರ

      ಈ ಹಿಂದೆ ರೈತನೊಬ್ಬ ಸಾಲದ ಹೊರೆ ವಿಪರೀತವಾಗಿದೆ, ಅದನ್ನು ತೀರಿಸಲು ಆಗುತ್ತಿಲ್ಲ, ದಯಾಮರಣವನ್ನು ಕರುಣಿಸಿ ಎಂದು ರಕ್ತದಲ್ಲಿ ಪತ್ರ ಬರೆದಿದ್ದರು.

      ದನ ಕರುಗಳಿಗೆ ನೀರಿಲ್ಲ, ಸಾಲವೂ ತೀರಿಲ್ಲ

      ದನ ಕರುಗಳಿಗೆ ನೀರಿಲ್ಲ, ಸಾಲವೂ ತೀರಿಲ್ಲ

      ಕೆರೆ ಕಟ್ಟೆಗೆ, ದನ ಕರುಗಳಗಳಿಗೆ ನೀರು ನೀಡಿ ಇಲ್ಲಾ ದಯಾಮರಣ ನೀಡಿ ಅಂತ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಪಂಚಾಯಿತಿ ವ್ಯಾಪ್ತಿಯ ರೈತರು ಈ ರೀತಿ ಮುಖ್ಯಮಂತ್ರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ರಾಜ್ಯದಲ್ಲಿ ಮಳೆಯಾಗ್ತಿದ್ರೂ ಇಲ್ಲಿನ ಜನ ಮಾತ್ರ ಬೆಳೆ ಬೆಳೆಯಲು ಆಗ್ತಿಲ್ಲ, ಈಗಾಗಿ ಬದಕಲು ಆಗದ ಸ್ಥಿತಿಯನ್ನು ತಲುಪಿದ್ದೇವೆ. ಈಗಲಾದರೂ ಇತ್ತ ಗಮನ ಹರಿಸಿ ಸಮಸ್ಯೆ ಬಗೆಹರಿಸುವಂತೆ ರೈತರು ಕೋರಿದ್ದರು.

      ಚನ್ನರಾಯಪಟ್ಟಣದಲ್ಲಿ ಮಳೆ ಕಡಿಮೆ

      ಚನ್ನರಾಯಪಟ್ಟಣದಲ್ಲಿ ಮಳೆ ಕಡಿಮೆ

      ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿ ವ್ಯಾಪ್ತಿಯಲ್ಲಿ ಮಳೆ ಪ್ರಮಾಣವೂ ಕಡಿಮೆ ಆಗಿದ್ದು, ಅಂತರ್ಜಲ ಸಂಪೂರ್ಣ ಕುಸಿದಿದೆ. ಈ ಸಮಸ್ಯೆ ಕಳೆದ ಮೂರು ದಶಕಗಳಿಂದ ಮುಂದುವರಿದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+