ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ಸಿಂಘು, ಟಿಕ್ರಿಯಲ್ಲಿ ರೈತರ ಜಮಾವಣೆ: ಉತ್ತರ ದೆಹಲಿಯತ್ತ ಹೋಗಲು ನಕಾರ

|
Google Oneindia Kannada News

ನವದೆಹಲಿ, ನವೆಂಬರ್ 28: ದೆಹಲಿಯ ಸಿಂಘು, ಟಿಕ್ರಿ ಗಡಿ ಪ್ರದೇಶದಲ್ಲಿ ಸಾವಿರಾರು ರೈತರು ಜಮಾವಣೆಯಾಗಿದ್ದು, ಉತ್ತರ ದೆಹಲಿಯತ್ತ ತೆರಳಲು ನಿರಾಕರಿಸಿದ್ದಾರೆ.

ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಮಂದಿ ರೈತರು ನೆರೆದಿದ್ದಾರೆ.

ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ, ದೆಹಲಿ ಗಡಿಯಲ್ಲಿ ಸ್ಥಿತಿ ಉದ್ವಿಗ್ನ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ, ದೆಹಲಿ ಗಡಿಯಲ್ಲಿ ಸ್ಥಿತಿ ಉದ್ವಿಗ್ನ

ಪೊಲೀಸರು ಉತ್ತರ ದೆಹಲಿಯ ಸ್ಥಳವೊಂದರಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಿದರೂ ಕೂಡ ಇಂದು ಬೆಳಗ್ಗೆ ಸೇರಿರುವ ಟಿಕ್ರಿ ಗಡಿಭಾಗದ ಮೈದಾನದಲ್ಲಿಯೇ ಮುಂದುವರಿಸಿದ್ದಾರೆ.ಅಲ್ಲಿಂದ ಪ್ರತಿಭಟನಾಕಾರರು ಮುಂದುವರಿಯುತ್ತಾರೆಯೇ, ಇಲ್ಲವೇ ಎಂಬುದು ಇನ್ನು ಕೆಲ ಹೊತ್ತುಗಳಲ್ಲಿ ನಿರ್ಧಾರವಾಗಲಿದೆ.

Farmers At Singhu, Tikri Border Points Refuse To Head To North Delhi Protest Site

ಇಂದು ಬೆಳಗ್ಗೆ ಸದ್ಯ ರೈತರು ಟಿಕ್ರಿ ಭಾಗದಲ್ಲಿ ಪ್ರತಿಭಟನೆ ನಡೆಸಲು ಸೇರಿದ್ದು ಅಲ್ಲಿನ ಬುರಾರಿ ಪ್ರದೇಶದ ನಿರಂಕಾರಿ ಸಮಾಗಮ ಮೈದಾನದಲ್ಲಿ ಪ್ರದರ್ಶನ ನಡೆಸಲು ರೈತರಿಗೆ ಅನುಮತಿ ನೀಡಲಾಗಿದೆ. ಅಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ.

ಆದರೆ ಅಲ್ಲಿಗೆ ಹೋಗಲು ರೈತರು ನಿರಾಕರಿಸಿದ್ದಾರೆ. ನಾವು ಸಿಂಘು ಗಡಿಯಿಂದ ಕದಲುವುದಿಲ್ಲ, ನಮ್ಮ ಹೋರಾಟವನ್ನು ಇಲ್ಲಿಯೇ ಮುಂದುವರಿಸುತ್ತಿದ್ದು ಮನೆಗೂ ಹಿಂತಿರುಗಿ ಹೋಗುವುದಿಲ್ಲ. ಪಂಜಾಬ್ ಮತ್ತು ಹರ್ಯಾಣಗಳಿಂದ ಸಾವಿರಾರು ರೈತರು ಬಂದಿದ್ದಾರೆ ಎಂದರು.

ಪಂಜಾಬ್ ಭಾಗದ ರೈತರ ಪ್ರತಿಭಟನೆ ಮುಂದುವರಿದಿದ್ದು, ರೈತರು ದೇಶದ ರಾಜಧಾನಿ ದೆಹಲಿಗೆ ಸಮೀಪಿಸುತ್ತಿದ್ದಂತೆ ಪರಿಸ್ಥಿತಿ ಬಿಗಡಾಯಿಸಿದೆ. ವಾಹನ ಸವಾರರು ಸಂಚಾರ ದಟ್ಟಣೆ, ಬದಲಿ ಸಂಚಾರ ಮಾರ್ಗಗಳನ್ನು ಪೊಲೀಸರು ಕಲ್ಪಿಸಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಪಂಜಾಬ್ ನಗರಕ್ಕೆ ಹೋಗುವ ಮುಖ್ಯ ಗಡಿಯಾದ ಸಿಂಗು ಗಡಿಯಲ್ಲಿ ರೈತರೊಬ್ಬರು ಮಾತನಾಡಿ, ತಾವು ಮುಂದುವರಿಯದೆ ಇಲ್ಲಿಯೇ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.

English summary
Thousands of farmers gathered at the Singhu border held a meeting on Saturday morning amid heavy security presence and decided to continue demonstrating there even after being offered a site in north Delhi to hold their protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X